ಕೊರಟಗೆರೆ: ಹೈಕೋರ್ಟ್ ಮೆಟ್ಟಿಲೇರಿದ ಆರ್ಚಕರ ಜಗಳ

ಭಾರಿ ವಿವಾದ ಸೃಷ್ಟಿ ಮಾಡಿದ್ದ ಕ್ಯಾಮೇನಹಳ್ಳಿ ದೇವಾಲಯದ ಸಂಘರ್ಷ

Team Udayavani, Apr 7, 2022, 11:55 AM IST

1-sdsds

ಕೊರಟಗೆರೆ: ಕಳೆದ ಮೂರು- ನಾಲ್ಕು ತಿಂಗಳಿಂದ ಭಾರಿ ವಿವಾದ ಸೃಷ್ಟಿ ಮಾಡಿದ್ದ ಕ್ಯಾಮೇನಹಳ್ಳಿ ದೇವಾಲಯದ ಅರ್ಚಕರ ಮತ್ತು ಸೇವಾ ಸಮಿತಿಯ ಗಲಾಟೆಯ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಬಹಳ ಸುದ್ದಿ ಮಾಡಿದ ಈ ವಿಷಯವು ಕಮನಿಯ ಕ್ಷೇತ್ರದಿಂದ ರಾಜ್ಯದ ಹೈಕೋರ್ಟ್ ಅಂಗಳಕ್ಕೆ ತಲುಪಿದೆ.

ತಹಶೀಲ್ದಾರ್ ಆಂಜನೇಯ ಸ್ವಾಮಿ ದೇವಾಲಯದ ಕಲ್ಯಾಣ ಮಂಟಪದಲ್ಲಿ ಸೇವಾ ಸಮಿತಿಯ ಸದಸ್ಯರು ಮತ್ತು ಅಧ್ಯಕ್ಷರ ಸಭೆ ಕರೆದು ದೇವಾಲಯದ ಅಭಿವೃದ್ದಿಯ ಸಭೆ ನಡೆಸುತ್ತಿರುವ ವಿಷಯ ಹೊನ್ನಾರನಹಳ್ಳಿ ಮತ್ತು ಅಕ್ಕಾಜಿಹಳ್ಳಿ ಸೇರಿದಂತೆ ಸಾರ್ವಜನಿಕ ವಲಯಕ್ಕೆ ತಿಳಿದು ಕ್ಷಣಾರ್ಧದಲ್ಲಿ ಕಲ್ಯಾಣ ಮಂಟಪದ ಸಮೀಪ ಜಮಾವಣೆಗೊಂಡರು.

ಅರ್ಚಕರನ್ನು ನೇಮಿಸುವ ಸಲುವಾಗಿ ಸಾರ್ವಜನಿಕರು ತಹಶೀಲ್ದಾರ್ ಬಹಿರಂಗವಾಗಿ ಸಭೆ ನಡೆಸಿ ಸಾರ್ವಜನಿಕರ ಸಮಕ್ಷಮದಲ್ಲಿ ಅರ್ಚಕರನ್ನು ನೇಮಿಸುವಂತೆ ಆಗ್ರಹಿಸಿದರು.ತಹಶೀಲ್ದಾರ್ ರವರು ಪ್ರಾಂಗಣದಲ್ಲಿ ಬಹಿರಂಗವಾಗಿಯೇ ಸಭೆ ನಡೆಸಿ ಜನಾಭಿಪ್ರಾಯ ಸಂಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಹೊನ್ನಾರನಹಳ್ಳಿ ರಾಮಣ್ಣ ಮಾತನಾಡಿ, ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವದ ಸಂದರ್ಭದಲ್ಲಿ ಹಾಗೂ ಯಾವುದೇ ಸಂದರ್ಭದಲ್ಲೂ ಅಕ್ಕಾಜಿಹಳ್ಳಿ ಹಾಗೂ ಹೊನ್ನಾರನಹಳ್ಳಿಯಿಂದ ಈ ದೇವರಿಗೆ ಸಂಬಂಧಿಸಿದ ಮನೆತನದವರು ದೇವಾಲಯದ ಕಸ ತೆಗೆಯುವುದರಿಂದ ಹಿಡಿದು ರಥೋತ್ಸವ ಕೊನೆಗೊಳ್ಳುವವರೆಗೂ, ಈ ಗ್ರಾಮದವರಿಂದಲೇ ಕಾರ್ಯಕ್ರಮ ನಡೆಯುತ್ತಿರುವ ಪದ್ದತಿಯು ತಲಾತಲಾಂತರ ದಿಂದಲು ನಡೆದುಕೊಂಡು ಬಂದಿದೆ. ಇಂತಹ ಸಂದರ್ಭದಲ್ಲಿ ಕಳೆದ ಐದಾರು ತಿಂಗಳ ಹಿಂದೆ ಸಮಿತಿ ರಚನೆ ಮಾಡುವುದಾಗಿ ಸರ್ಕಾರ ಹೇಳಿ ಕೇವಲ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರನ್ನು ಮಾತ್ರ ಸಮಿತಿಗೆ ನೇಮಿಸುವಂತೆ ಮಾನ್ಯ ಲೋಕಸಭಾ ಸದಸ್ಯರಾದ ಬಸವರಾಜು ರವರ ಆದೇಶದಂತೆ ಜಿಲ್ಲಾಧಿಕಾರಿ ರವರು ಏಕಪಕ್ಷೀಯವಾಗಿ ಸಮಿತಿ ರಚನೆಮಾಡಿರುತ್ತಾರೆ. ಆದರೆ ಈ ಸಮಿತಿಯವರು ಈ ಎರಡು ಗ್ರಾಮದವರನ್ನು ಕಡೆಗಣಿಸಿ ತಮಗೆ ಬೇಕಾದವರನ್ನು ಸಮಿತಿಗೆ ಸೇರಿಸಿಕೊಂಡು ಅರ್ಚಕರ ವಿಚಾರವಾಗಿ ರಾಜಕೀಯ ಪ್ರೇರಿತವಾಗಿ ಅರ್ಚಕರನ್ನು ವಜಾಗೊಳಿಸಿ ಆ ಜಾಗಕ್ಕೆ ಬೇರೆ ಅರ್ಚಕರನ್ನು ನೇಮಿಸುವಂತೆ ವಿವಾದ ಸೃಷ್ಟಿಸಿ ದೇವಸ್ಥಾನದ ವಿಚಾರವನ್ನು ಹಳ್ಳಿಯಿಂದ ಹೈಕೋರ್ಟ್ ಮೆಟ್ಟಿಲೇರುವಂತೆ ಮಾಡಿದೆ.ಇಂತಹ ಸಮಿತಿಯು ಈ ದೇವಾಲಯಕ್ಕೆ ಬೇಕಾಗಿಲ್ಲ ಇಷ್ಟೆಲ್ಲ ವಿವಾದಕ್ಕೆ ಕಾರಣ ಮುಜರಾಯಿ ಇಲಾಖೆಯ ಶಿರಸ್ತೆದಾರ್ ಚಿಕ್ಕರಾಜು ರವರು ಇಲಾಖೆಯಲ್ಲಿ ರಾಜಕೀಯವಾಗಿ ವಿವಾದ ಸೃಷ್ಟಿ ಮಾಡಿಸಿ ಸಮಿತಿಯ ಸದಸ್ಯರನ್ನು ಪ್ರಚೋದಿಸುತ್ತಿದ್ದಾರೆ. ಇವರು ಕಛೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಿಲ್ಲದೇ , ಭೂಮಾಫಿಯದವರ ಜೊತೆ ಸೇರಿ ರಾಜಕೀಯ ವ್ಯಕ್ತಿಗಳಂತೆ ವರ್ತಿಸುತ್ತಿದ್ದಾರೆ ಆದ್ದರಿಂದ ಇಂತಹ ಅಧಿಕಾರಿಯನ್ನು ವರ್ಗಾಯಿಸುವಂತೆ ಮನವಿ ಪತ್ರ ನೀಡುವ ಮುಖೇನ ಆರೋಪಿಸಿದರು.

ಮಲ್ಲಿಕಾರ್ಜುನ ಮಾತನಾಡಿ ಈ ದೇವಾಲಯಕ್ಕೆ ನಮ್ಮ ಮುತ್ತಾತನ ಕಾಲದಿಂದಲು ನಮ್ಮ ಕುಟುಂಬ ಸೇವೆ ಮಾಡಿಕೊಂಡು ಬಂದಿದೆ. ನಮಗೆ ಯಾವ ವಿಷಯವು ತಿಳಿಸದೇ ಸಮಿತಿ ರಚನೆ ಮಾಡಿರುವುದು ಬಹಳ ನೋವುಂಟು ಮಾಡಿದೆ. ಅಲ್ಲದೇ ಈಗೀರುವ ಕೃಷ್ಣಾಚಾರ್ ಮತ್ತು ರಾಮಾಚಾರ್ ರವರು ಬರುವ ಭಕ್ತಾದಿಗಳಿಗೆ ತಾರತಮ್ಯ ತೋರದೇ ಎಲ್ಲರಿಗಿ ಸಮಾನವಾಗಿ ಅಭಿಷೇಕ ಪೂಜೆ ಸೇರಿದಂತೆ ಸ್ವಾಮಿಯ ದರ್ಶನಕ್ಕೆ ಯಾವುದೇ ವಿಘ್ನಗಳಿಲ್ಲದೇ ಬರುವ ಭಕ್ತಾದಿಗಳೊಂದಿಗೆ ಬಹಳ ವಿನಯಪೂರ್ವಕವಾಗಿ ನಡೆದುಕೊಳ್ಳುತ್ತಿದ್ದಾರೆ. ಹಾಗೂ ಅವರು ಆಗಮ ಮತ್ತು ಆಗಮದ ಪ್ರಕಾರ ದೀಕ್ಷೆ ಪಡೆದು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ಅವರನ್ನು ಅರ್ಚಕರ ಹುದ್ದೆಯಿಂದ ತೆಗೆದುಹಾಕಲು ಅವರ ತಪ್ಪುಗಳನ್ನು ತಿಳಿಸದೇ ಅವರನ್ನು ಕೆಲಸದಿಂದ ತೆಗೆದುಹಾಕಲು ರಾಜಕೀಯ ಪಿತೂರಿ ಮಾಡುತ್ತಿದ್ದಾರೆ. ಇವರುಗಳನ್ನು ವಜಾಗೊಳಿಸಿದ್ದೇ ಆದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಗ್ರವಾದ ಹೋರಾಟ ಮಾಡುವುದಾಗಿ ಇವರ ಜೊತೆಯಲ್ಲಿ ಸಾರ್ವಜನಿಕರು ಒಕ್ಕೊರಲಾಗಿ  ಹೇಳಿದರು.

ಇಂದು ನಾವು ದೇವಾಲಯದ ಅಭಿವೃದ್ಧಿ ವಿಚಾರವಾಗಿ ಸಮಿತಿಯೊಂದಿಗೆ ಚರ್ಚಿಸಲು ಸಭೆ ಸೇರಿದ್ದೇವು. ಏಕಾಏಕಿ ಸಾರ್ವಜನಿಕರು ಜಮಾಯಿಸಿ ಅರ್ಚಕರ ವಿಚಾರವಾಗಿ ಚರ್ಚಿಸುವಂತೆ ಕೋರಿದ ಹಿನ್ನೆಲೆ ಅರ್ಚಕರ ವಿಚಾರ ಕೈಗೊಳ್ಳಲಾಯಿತು. ಸಾರ್ವಜನಿಕರು ಈಗಿರುವ ರಾಮಾಚಾರ್ ರವರನ್ನ ಪ್ರಧಾನ ಅರ್ಚಕರನ್ನಾಗಿ ನೇಮಕ ಮಾಡಲು ಮನವಿ ಮಾಡಿದರು. ಅದರಂತೆ ನಾವು ಈ ಹಿಂದಿನ ಕಡತಗಳನ್ನು ಪರಿಶೀಲಿಸಿದಾಗ ಸುಮಾರು ಆರು ತಲೆಮಾರಿನಿಂದ ರಾಮಾಚಾರ್ ರವರ ಪೂರ್ವಜರೇ ಈ ದೇವಾಲಯದ ಪ್ರಧಾನ ಅರ್ಚಕರಾಗಿರುದು ತಿಳಿದುಬಂದಿದೆ. ಇಲ್ಲಿ ನಡೆದ ಎಲ್ಲಾ ವಿಚಾರವನ್ನು ನಾವು ಸಭಾ ನಡವಳಿ ತಯಾರಿಸಿ ಜಿಲ್ಲಾಧಿಕಾರಿಗಳು ಸೇರಿ ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸುತ್ತೇನೆ.

ನಾಹೀದಾ ಜ಼ಮ್ ಜ಼ಮ್ ತಹಶೀಲ್ದಾರ್

ಈ ದೇವಾಲಯಕ್ಕೆ ಮದ್ವಸಾರ ಮತ್ತು ಆಗಮಸಾರ ತಂತ್ರದಲ್ಲಿ ಪೂಜೆ ಸಲ್ಲಿಸಿಸುವ ಅರ್ಚಕರನ್ನು ನೇಮಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಪತ್ರವನ್ನು ಸಲ್ಲಿಸಿದ್ದೆವು. ಅದರಂತೆ ಅರ್ಚಕರನ್ನು ನೇಮಿಸಲು ಸಂಬಂಧ ಪಟ್ಟ ಅಧಿಕಾರಿಗಳು ಕೆಲಸಮಾಡಿರುತ್ತಾರೆ. ಇದರಲ್ಲಿ ನಮ್ಮ ಸಮಿತಿಯ ಯಾವ ರಾಜಕೀಯ ಮಾಡಿಲ್ಲ.

ಬಾಲರಾಜು ,ಸೇವಾ ಸಮಿತಿ ಅಧ್ಯಕ್ಷ. ಕ್ಯಾಮೇನಹಳ್ಳಿ

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

Lok Sabha Elections; ಶಾಂತಿಯುತ ಮತದಾನಕ್ಕೆ ಸಿದ್ದತೆ : ಡಿವೈಎಸ್‌ಪಿ ಓಂ ಪ್ರಕಾಶ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.