ಕೊರಟಗೆರೆ : ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಸಾವು

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ! ; ವೈದ್ಯ, ತುರ್ತು ವಾಹನ ಸವಾರನ ದಿವ್ಯ ನಿರ್ಲಕ್ಷ್ಯ?

Team Udayavani, Oct 6, 2022, 4:51 PM IST

accident

ಕೊರಟಗೆರೆ : ತಾಲೂಕಿನಲ್ಲಿ ನಡೆದ ಪ್ರತ್ಯೇಕ ಅವಘಡದಲ್ಲಿ ಮೂವರು ಸಾವನ್ನಪ್ಪಿರುವ ಅವಘಡಗಳು ನಡೆದಿದೆ.

ಆಯುಧ ಪೂಜಾ ಹಬ್ಬಕ್ಕೆ ಊರಿಗೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಯುವಕರಿಬ್ಬರನ್ನು ಜವರಾಯ ಬಸ್ಸಿನ ರೂಪದಲ್ಲಿ ಬಂದು ಬಲಿ ತೆಗೆದುಕೊಂಡ ದುರ್ಘಟನೆ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಮುಂದೆ ದುರ್ಘಟನೆ ನಡೆದಿದ್ದು,ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದ ಸಂತೋಷ್ ( 23) ಹಾಗೂ ಇದೇ ತಾಲೂಕಿನ ಮಿಡಿಗೇಶಿ ಹೋಬಳಿಯ ಬಿದರಕೆರೆ ಬಳಿಯ ನಾರತನಹಳ್ಳಿ ಶಶಿಕುಮಾರ್ (23 ) ಸಾವಿಗೀಡಾದ ದುರ್ದೈವಿಗಳಾಗಿದ್ದಾರೆ.

ಮೃತ ಯುವಕರು ಸಂಬಂಧಿಕರಾಗಿದ್ದು, ಅಕ್ಕನ ಮನೆಯಲ್ಲಿ ಊಟ ಮುಗಿಸಿಕೊಂಡು ಊರಿನ ಹಬ್ಬಕ್ಕೆ ದ್ವಿಚಕ್ರವಾಹನದಲ್ಲಿ ಬರುತ್ತಿರುವ ಸಂದರ್ಭದಲ್ಲಿ ಪಾವಗಡ ಕಡೆಯಿಂದ ಬರುತ್ತಿದ್ದಂತ ಸರಕಾರಿ ಬಸ್ ಹಾಗೂ ದ್ವಿಚಕ್ರವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಒಬ್ಬ ಕೊರಟಗೆರೆ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಮತ್ತೋರ್ವ ತುಮಕೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ವಿಚಾರ ತಿಳಿದ ತಕ್ಷಣ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಪಿಐ ಕೆಸುರೇಶ್ ಹಾಗೂ ಪಿಎಸ್ಐ ಮಹಾಲಕ್ಷ್ಮಮ್ಮ. ಹೆಚ್.ಎನ್ ಸ್ದಳಕ್ಕೆ ಧಾವಿಸಿ ಹೆಚ್ಚಿನ ತನಿಖೆ ಕೈ ಕೊಂಡಿದ್ದಾರೆ.

ವೈದ್ಯ, ತುರ್ತು ವಾಹನ ಸವಾರನ ದಿವ್ಯ ನಿರ್ಲಕ್ಷ

ಸರಕಾರಿ ವೈದ್ಯ ಮತ್ತು ತುರ್ತು ವಾಹನ ಸವಾರನ ದಿವ್ಯ ನಿರ್ಲಕ್ಷದಿಂದ ರಾಜ್ಯ ಹೆದ್ದಾರಿಯಲ್ಲಿ ಅಪಘಾತವಾಗಿ ನರಳುತ್ತಿದ್ದ ಯುವಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮತ್ತೋರ್ವ ತುಮಕೂರಿಗೆ ರವಾನಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಕೊರಟಗೆರೆ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಕಿವಿ ಮತ್ತು ಮೂಗು ತಜ್ಞ ವೈದ್ಯ ನವೀನ್.ಕೆ ಸಾರ್ವಜನಿಕ ಆಸ್ಪತ್ರೆಯಲ್ಲಿ ತುರ್ತಾಗಿ ತುರ್ತುಚಿಕಿತ್ಸೆ ನೀಡದೇ ನಿರ್ಲಕ್ಷ ಮತ್ತು ಅಪಘಾತ ಸ್ಥಳಕ್ಕೆ ತುರ್ತುವಾಹನ ತಡವಾಗಿ ಆಗಮಿಸಿದ ಪರಿಣಾಮ ಇಬ್ಬರು ಗಾಯಾಳುಗಳು ಸಹ ಮೃತ ಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಐ.ಕೆ.ಕಾಲೋನಿ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಅಪಘಾತವಾಗಿ 1ಗಂಟೆಯಾದರೂ ತುರ್ತುವಾಹನ ಸ್ಥಳಕ್ಕೆ ಆಗಮಿಸದ ಪರಿಣಾಮ ಸ್ಥಳೀಯರು ಸರ್ಕಾರಿ ಬಸ್ ಮತ್ತು ಖಾಸಗಿ ಕಾರಿನಲ್ಲಿ ಇಬ್ಬರು ಗಾಯಾಳು ಯುವಕರನ್ನು ಕೊರಟಗೆರೆ ಆಸ್ಪತ್ರೆಗೆ ರವಾನಿಸಿದ್ದಾರೆ.

ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಇಬ್ಬರು ಯುವಕರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಅರ್ಧಗಂಟೆಯಾದ್ರೂ ರಾತ್ರಿ ಪಾಳಿಯ ಕಿವಿ-ಮೂಗು ತಜ್ಞವೈದ್ಯ ನವೀನ್.ಕೆ ಕೊಠಡಿಯಿಂದ ಹೊರಗಡೆ ಬರದಿರುವ ಪರಿಣಾಮ ಗಾಯಾಳು ಶಶಿಕುಮಾರ್ ಉಸಿರಾಟದ ತೊಂದರೆಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.

ಸಂತೋಷ್ ಗೆ ತುರ್ತಾಗಿ ಪ್ರ‌ಥಮ‌ ಚಕಿತ್ಸೆ ನೀಡದೇ ವೈದ್ಯ ನವೀನ್ ಎಂಬಾತ ಹೆಚ್ಚಿನ ಚಿಕ್ಸಿತ್ಸೆಗೆ ತುಮಕೂರು ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದ ಪರಿಣಾಮ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ ಎಂದು ಮೃತರ ಸಂಬಂಧಿಕರು ವೈದ್ಯನ ವಿರುದ್ದ ಆರೋಪಿಸಿದ್ದಾರೆ.

ಪತ್ರಕರ್ತನ ಮೇಲೆ ವೈದ್ಯ ನವಿನ್ ನಿಂದ ಹಲ್ಲೆಗೆ ಯತ್ನ
ಅಪಘಾತದಲ್ಲಿ ಗಾಯಗೊಂಡ ಇಬ್ಬರು ಯುವಕರಿಗೆ ತುರ್ತು ಚಿಕಿತ್ಸೆ ಇಲ್ಲದೇ ಆಸ್ಪತ್ರೆಯ ಸಣ್ಣ ಕೊಠಡಿಯಲ್ಲಿ ನರಳಾಡುತ್ತಿದ್ದ ವೇಳೆ ಗಾಯಾಳುಗಳ ವಿಡೀಯೋ ಚಿತ್ರಿಕರಣ ಮಾಡುತ್ತೀದ್ದ ಖಾಸಗಿ ಸುದ್ದಿ ವಾಹಿನಿಯ ಪತ್ರಕರ್ತ ಹರೀಶ್ ಎಂಬಾತನ ಮೇಲೆ ವೈದ್ಯ ನವೀನ್ ಹಲ್ಲೆ ನಡೆಸಿ ಮೊಬೈಲ್ ಕಸಿಯಲು ಪ್ರಯತ್ನಿಸಿರುವ ಘಟನೆಯು ನಡೆದಿದೆ.

ಚಿಕಿತ್ಸೆ ವೇಳೆ ಸಮವಸ್ತ್ರ ಧರಿಸದ ವೈದ್ಯ ನವೀನ್

ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯ ನವೀನ್ ಕರ್ತವ್ಯನಿರತ ಕೊಠಡಿಯಲ್ಲಿ ಇರೋದೇ ಇಲ್ಲ. ಸಮವಸ್ತ್ರ ಧರಿಸುವುದೇ ಇವರಿಗೆ ಗೊತ್ತಿಲ್ಲ. ಇವರು ಕರ್ತವ್ಯದಲ್ಲಿ ಇರುವಾಗ ರೋಗಿಗಳು ಇವರನ್ನು ಪ್ರತಿನಿತ್ಯ ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಲಾಗಿದೆ.

ಅಪಘಾತ ಸ್ಥಳಕ್ಕೆ ತುರ್ತಾಗಿ ಬರುವುದಿಲ್ಲ ತುರ್ತುವಾಹನ

ರಾಜ್ಯ ಹೆದ್ದಾರಿಗಳಲ್ಲಿ ಅಪಘಾತ ಆದ ನಂತರ ತುರ್ತುವಾಹನ ಸಮಯಕ್ಕೆ ಸರಿಯಾಗಿ ಬರೋದಿಲ್ಲ. ಅಪಘಾತ ಆದ ಗಂಟೆಯ ನಂತರ ದೂರವಾಣಿ ಕರೆ ಮಾಡುತ್ತಾರೆ. ರೋಗಿ ಇದಾರಾ ಅಥವಾ ಇಲ್ಲವೇ ಎಂಬ ಉಡಾಫೆ ಪ್ರಶ್ನೆ ಕೇಳುತ್ತಾರೆ ಎಂಬುದು ಸ್ಥಳೀಯರ ಆರೋಪವಾಗಿದ್ದು ತುರ್ತು ವಾಹನಕ್ಕೆ ಹುಡುಕುವ ಪರಿಸ್ಥಿತಿ ಕೊರಟಗೆರೆಯಲ್ಲಿ ನಿರ್ಮಾಣವಾಗಿದೆ.

ಪತ್ರಕರ್ತರ ವಿರುದ್ದ ದೂರು ನೀಡುವ ಬೆದರಿಕೆ ಹಾಕಿದ ವೈದ್ಯ
ರಾತ್ರಿ ಪಾಳೀಯ ತಜ್ಞವೈದ್ಯ ನವೀನ್.ಕೆ ತುರ್ತು ಚಿಕಿತ್ಸೆ ನೀಡದಿರುವ ವಿಚಾರಕ್ಕೆ ಪತ್ರಕರ್ತರು ವಿಡಿಯೋ ಚಿತ್ರಿಕರಣ ಮಾಡುತ್ತಿದ್ದ ವೇಳೆಯೇ ನಿಮ್ಮ ವಿರುದ್ದ ಕರ್ತವ್ಯಕ್ಕೆ ಅಡ್ಡಿಪಡಿಸಿದ ದೂರು ನೀಡುತ್ತೇನೆ ಎಂದು ಬೆದರಿಕೆ ಹಾಕಿ ತನ್ನ ತಪ್ಪನ್ನು ಮುಚ್ಚಿಹಾಕಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಟ್ರ್ಯಾಕ್ಟರ್ ಗೆ ಢಿಕ್ಕಿ: ಓಮಿನಿಯಲ್ಲಿದ್ದ ವ್ಯಕ್ತಿ ಸಾವು

ರಸ್ತೆಯಲ್ಲಿ ನಿಂತಿದ್ದ ಟ್ಯಾಕ್ಟರ್ ಗೆ ಓಮಿನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಸಾವಿಗೀಡಾದ ದುರ್ಘಟನೆ ತಾಲ್ಲೂಕಿನ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ತಾಲೂಕಿನ ತಣ್ಣೇನಹಳ್ಳಿ ಬಳಿ ಈ ದುರ್ಘಟನೆ ಜರುಗಿದ್ದು, ಆಂಧ್ರ ಮೂಲದ ರಾಮಯ್ಯ (55 ) ಸಾವಿಗೀಡಾದ ದುರ್ದೈವಿ.

ಮೃತ ರಾಮಯ್ಯ ಅನಂತಪುರ ಜಿಲ್ಲೆ, ತುಮ್ಕುಂಟೆ ಗ್ರಾಮದ ವಾಸಿಯಾಗಿದ್ದು, ಓಮಿನಿ ಕಾರಿನಲ್ಲಿ ಊರಿಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಗಮನಿಸದೆ ಏಕಾಏಕಿ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ರಾಮಯ್ಯ ಸ್ಥಳದಲ್ಲಿಯೇ ಸಾವಿಗಿಡಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಕೆ ಸುರೇಶ್ ಹಾಗೂ ಪಿಎಸ್ಐ ಮಹಾಲಕ್ಷ್ಮಮ್ಮ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ‌ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.