ಕೊರಟಗೆರೆ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ; ಗಂಡ,ಅತ್ತೆ, ಮಾವ ಬಂಧನ
Team Udayavani, Jul 24, 2022, 6:57 PM IST
ಕೊರಟಗೆರೆ: ಕೋಳಾಲ ಹೋಬಳಿಯ ನೀಲಗೊಂಡನಹಳ್ಳಿಯಲ್ಲಿ ವರದಕ್ಷಿಣೆ ಕಿರುಕುಳ ನೀಡಿ ಗೃಹಿಣಿಯೊಬ್ಬಳನ್ನು ಕೊಲೆ ಮಾಡಲಾಗಿದ್ದು,ಪೊಲೀಸರು ಆಕೆಯ ಗಂಡ ,ಅತ್ತೆ ಮತ್ತು ಮಾವನನ್ನು ಬಂಧಿಸಿರುವ ಘಟನೆ ಜರುಗಿದೆ.
ಗೃಹಿಣಿ ಸುಶ್ಮಿತಾ(26) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಆರೋಪಿಗಳಾದ ಗಂಡ ನಾಗೇಶ್, ಮಾವ ರಾಮ ಕೃಷ್ಣಪ್ಪ, ಅತ್ತೆ ಶಾರದಮ್ಮ ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.
ಕೋಳಾಲ ಪೋಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಮತ್ತು ಪಿಎಸ್ಐ ಮಹಾಲಕ್ಷ್ಮಮ್ಮ ಘಟನಾ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.