ಕೊರಟಗೆರೆ: ಮೂತ್ರ ವಿಸರ್ಜನೆಗೆ ಹೋದ ಬಾಲಕರ ಮೇಲೆ ಚಿರತೆ ದಾಳಿ
Team Udayavani, Dec 10, 2022, 8:58 PM IST
ಕೊರಟಗೆರೆ; ಮೂತ್ರ ವಿಸರ್ಜನೆಗೆ ಮನೆಯಿಂದ ಹೊರಗಡೆ ಬಂದ ಇಬ್ಬರೂ ಬಾಲಕರ ಮೇಲೆ ಚುರತೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ಇರಕಸಂದ್ರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕೆಂಪರಾಜು ಮಕ್ಕಳಾದ ಚೇತನ್ ಹಾಗೂ ಧನುಷ್ ಇಬ್ಬರೂ ಇಂದು ಬೆಳಿಗ್ಗೆ ಮೂತ್ರ ವಿಸರ್ಜನೆಗೆ ಹೊರಗಡೆ ಬಂದಾಗ ಚಿರತೆ ಇಬ್ಬರೂ ಬಾಲಕರ ಮೇಲೆ ಎರಗಿ ಗಾಯಗೊಳಿಸಿದೆ.
ಈ ವೇಳೆಯಲ್ಲಿ ಬಾಲಕರು ಕಿರುಚಿ ಕೊಂಡಾಗ ಮನೆಯವರು ಹಾಗೂ ಸ್ಥಳೀಯರು ಮಕ್ಕಳನ್ನು ರಕ್ಷಣೆ ಮಾಡಿ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.ಮಕ್ಕಳ ಕಾಲಿನ ಭಾಗಕ್ಕೆ ಪರಚಿದ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಚಿರತೆ ಮಕ್ಕಳ ಮೇಲೆ ದಾಳಿ ಮಾಡಿದ ಘಟನಾ ಸ್ಥಳಕ್ಕೆ ಕೊರಟಗೆರೆ ವಲಯ ಅರಣ್ಯಾಧಿಕಾರಿ ಸುರೇಶ್ ಭೇಟಿ ನೀಡಿದ್ದರು.
ನಂತರ ಮಾತನಾಡಿ ಈಗಾಗಲೇ ಒಂದು ಬೋನ್ ಇಡಲಾಗಿದ್ದು ಮತ್ತೊಂದು ಬೋನ್ ಸಹ ಇಂದು ಇಡಲಾಗಿದೆ. ಚಿರತೆ ಹಿಡಿಯಲು ಬೇಕಾದ ಅಗತ್ಯವಾದ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಉದಯವಾಣಿ ಪತ್ರಿಕೆಗೆ ಮಾಹಿತಿ ನೀಡಿದರು.
ಇದನ್ನೂ ಓದಿ: ಜಮ್ಮು-ಕಾಶ್ಮೀರ: ಪಾಕಿಸ್ತಾನದ ಉಗ್ರ, ಜೈಶ್ ಕಮಾಂಡರ್ನ ಮನೆ ಧ್ವಂಸ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!