ಯೋಗ ಲಕ್ಷ್ಮೀ ನರಸಿಂಹಸ್ವಾಮಿಗೆ ಕುಂಭಾಭಿಷೇಕ


Team Udayavani, Feb 16, 2020, 3:00 AM IST

yoga-lakshmi

ತುಮಕೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿ ಆದಿಯಾಗಿ ಪೀಠಾಧಿಗಳಾಗಿದ್ದವರು ಕರಿಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದ ಬಗ್ಗೆ ಮಠದ ಇತಿಹಾಸದಲ್ಲಿ ಉಲ್ಲೇಖವಿದೆ ಎಂದು ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ತಿಳಿಸಿದರು.

ತಾಲೂಕಿನ ದೇವರಾಯನದುರ್ಗದ ಶ್ರೀ ಯೋಗ ಲಕ್ಷ್ಮೀ ನರಸಿಂಹಸ್ವಾಮಿ ಕುಂಭಾಭಿಷೇಕ ಮಹೋತ್ಸವ ಹಾಗೂ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿ, ಸಕಲ ಪಾಪ ದೋಷ ನಿವಾರಣೆಗೆ ಕರಿಗಿರಿ ಕ್ಷೇತ್ರ ಪ್ರಸಿದ್ಧವಾಗಿದೆ. 12 ವರ್ಷಕ್ಕೊಮ್ಮೆ ಕುಂಭಾಭಿಷೇಕ ಹಾಗೂ ಕಳಸಾಭಿಷೇಕ ನಡೆಸಿಕೊಂಡು ಬರಲಾಗುತಿದ್ದು, ಹಾವೇರಿಯ ವೇದ ವಿದ್ವಾಂಸ ವೇದವ್ಯಾಸಾಚಾರ್‌ ನಿರ್ಮಿಸಿರುವ ರಜತ ಕವಚ ಅರ್ಪಿಸಲಾಗಿದೆ ಎಂದು ತಿಳಿಸಿದರು.

ಕರಿಗಿರಿ ಕ್ಷೇತ್ರಕ್ಕೂ ಮಂತ್ರಾಲಯಕ್ಕೂ ನಿಕಟ ಸಂಬಂಧವಿದೆ. ದೇಗುಲದ ಅಭಿವೃದ್ಧಿ ವಿಚಾರಕ್ಕೆ ಶ್ರೀಮಠ ಸಿದ್ಧವಿದ್ದು, ಕುಂಬಾಭಿಷೇಕ ಮಹೋತ್ಸವದ ಅಂಗವಾಗಿ ದೇಗುಲಕ್ಕೆ ರಜತ ಕೊಬ್ಬರಿಗೆ ಹುಂಡಿ ಅರ್ಪಿಸಲಾಗಿದ್ದು, ದೇವಿಗೆ ಪೀಠವನ್ನು ಮಠದಿಂದ ನಿರ್ಮಿಸಿ ನೀಡಲು ಸಂಕಲ್ಪ ಮಾಡಿರುವುದಾಗಿ ತಿಳಿಸಿದರು.

ತಾಲೂಕು ತಹಶೀಲ್ದಾರ್‌ ಮೋಹನ್‌ ಮಾತನಾಡಿ, ಶಾಸ್ತ್ರೋಸ್ತ್ರವಾಗಿ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು. ಮುಜರಾಯಿ ಮತ್ತು ಧಾರ್ಮಿಕ ಧತ್ತಿ ಇಲಾಖೆ ದೇವರಾಯನದುರ್ಗ ದೇಗುಲದ ಕಾರ್ಯನಿರ್ವಾಹಣಾಧಿಕಾರಿ ಎಚ್‌.ಸವಿತಾ ಮಾತನಾಡಿದರು.

ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಊರ್ಡಿಗೆರೆ ಕರಿಗಿರಿಯಪ್ಪ, ಅರ್ಚಕ ಡಿ.ಎನ್‌.ನರಸಿಂಹಭಟ್ಟರ್‌, ಆಗಮಿಕ ವಾಸುದೇವಭಟ್ಟರ್‌, ಪ್ರಧಾನ ಅರ್ಚಕ ವೆಂಕಟರಾಜು ಭಟ್ಟರ್‌, ಡಿ.ಕೆ.ಲಕ್ಷ್ಮೀನಾರಾಯಣ ಭಟ್ಟರ್‌, ಕಂದಾಯಾಧಿಕಾರಿ ಪಿ.ಶಿವಣ್ಣ ಸೇರಿ ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ದೇಗುಲ ಅಭಿವೃದ್ಧಿ ಮಂಡಳಿ ಸದಸ್ಯರು ಇದ್ದರು.

ರಜತ ಕವಚ ಸಮರ್ಪಣೆ: ರಾಜ್ಯದ ಐತಿಹಾಸಿಕ ಪ್ರಸಿದ್ಧ ದೇವಾಲಯಗಳೊಂದಾದ ದೇವರಾಯನ ದುರ್ಗದ ಶ್ರೀ ಯೋಗ ನರಸಿಂಹ ಸ್ವಾಮಿಗೆ 12 ವರ್ಷಕ್ಕೊಮ್ಮೆ ನಡೆಯುವ ಕುಂಭಾಭಿಷೇಕ ಮಹೋತ್ಸವ ನೆರವೇರಿತು. ಪೂಜಾ ಕಾರ್ಯಕ್ರಮ ಬೆಳಗ್ಗೆಯಿಂದಲೇ ನಡೆದವು. ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಶ್ರೀ ಯೋಗ ಲಕ್ಷ್ಮೀನರಸಿಂಹ ಸ್ವಾಮಿಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ರಜತ ಕವಚ ಸಮರ್ಪಿಸಿದರು.

ವಿವಿಧ ಪೂಜಾ ಕಾರ್ಯಕ್ರಮ: ಕುಂಭಾಭಿಷೇಕದ ಅಂಗವಾಗಿ ಶುಕ್ರವಾರ ಪುಣ್ಯಾಹ ವಾಚನ, ಕಳಶಾರಾಧನೆ, ಪಂಚಗವ್ಯಸ್ನಪನ, ಛಾಯಾಸ್ನಾಪನ, ಶಾಂತಿಹೋಮ, ಪ್ರಧಾನ ಹೋಮಗಳು, ಪಾರಾಯಣಗಳು, ಮಹಾನಿವೇದನ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಮಾಡಲಾಯಿತು.

ಸಂಜೆ 6 ಗಂಟೆಗೆ ಶುದ್ಧಿ ಪುಣ್ಯಾಹ, ಪಾರಾಯಣ, ಮಹಾ ಕುಂಭಾರಾಧನೆ, ಪ್ರಧಾನ ಹೋಮ, ಜೀವಾದಿತತ್ವ ಹೋಮಗಳು, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆದವು. ಶನಿವಾರ ಬೆಳಗ್ಗೆಯಿಂದ ಕಳಶಾರಾಧನೆ, ಪ್ರಧಾನ ಹೋಮಗಳು, ಶಾಂತಿ ಹೋಮ, ಪೂರ್ಣಾಹುತಿ, ಕುಂಭೋದ್ವಾಸನೆ, ವಿಮಾನಗೋಪುರ ಮತ್ತು ರಾಜಗೋಪುರ ಕುಂಭಾಭಿಷೇಕ, ಬಲಿಪ್ರಧಾನ, ಶ್ರೀಯರಿಗೆ ಪಂಚಾಮೃತ ಅಭಿಷೇಕ‌, ಅಲಂಕಾರ, ಮಹಾನಿವೇದನ, ಮಹಾಮಂಗಳಾರತಿ ಸೇರಿ ಪೂಜಾ ಕಾರ್ಯಕ್ರಮ ನಡೆದವು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.