ಕುಂಚಿಟಿಗ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು: ನಂಜಾವಧೂತ ಸ್ವಾಮೀಜಿ


Team Udayavani, Jan 26, 2023, 6:35 PM IST

1-addasdasd

ಕೊರಟಗೆರೆ ; ರಾಜ್ಯದಲ್ಲಿ ಅತಿದೊಡ್ಡ ಸಮುದಾಯವಾಗಿರುವ ಒಕ್ಕಲಿಗ ಮತ್ತು ವೀರಶೈವ ಸಮಾಜಗಳನ್ನು ಉಪ ಪಂಗಡಗಳಾಗಿ ಒಡೆಯದಂತೆ ಮತ್ತು ಕುಂಚಿಟಿಗ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸುವಂತೆ ಹಾಗೂ ಬಲಿಜ ಸಮುದಾಯಕ್ಕೆ 2 ಎ ಮೀಸಲಾತಿ ಹಿಂತಿರುಗಿಸುವಂತೆ ಪಟ್ಟನಾಯ್ಕನಹಳ್ಳಿ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಕೋಳಾಲ ಹೋಬಳಿಯ ಚಿಕ್ಕಪಾಲನಹಳ್ಳಿ ಗ್ರಾಮದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪತ್ರಕರ್ತರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಒಕ್ಕಲಿಗ ಮತ್ತು ವೀರಶೈವ ಜನಾಂಗಗಳು ದೊಡ್ಡ ಸಮುದಾಯಗಳಾಗಿವೆ, ಅವುಗಳನ್ನು ಉಪ ಜಾತಿಗಳಾಗಿ ಒಡೆಯುವ ಕೆಲಸವನ್ನು ಯಾವ ಸರ್ಕಾರಗಳು ಮಾಡಬಾರದು, ಈ ಎರಡು ಸಮುದಾಯ ಗಳಲ್ಲಿ ಬಹುತೇಕ ಜನರು ಬಡತನದಲ್ಲಿ ಇದ್ದಾರೆ ಅಂತಹವರಿಗೆ ಹಿಂದುಳಿದ ಮೀಸಲಾತಿ ಕಲ್ಪಿಸಬೇಕಾದ್ದು ಸರ್ಕಾರಗಳ ಕರ್ತವ್ಯ ಈಗಾಗಲೆ ಸರ್ಕಾರವು ಈ ಕೆಲಸ ಮಾಡಿದ್ದು ಅದು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ, ಜನವರಿ 31 ರಂದು ನ್ಯಾಯಾಲಯದಲ್ಲಿ ಇದರ ತೀರ್ಮಾನವಾಗಲಿದ್ದು ಎರಡು ಸಮುದಾಯಕ್ಕೂ ನ್ಯಾಯಯುತ ಮೀಸಲಾತಿ ದೊರೆಯುವ ವಿಶ್ವಾಸವಿದೆ ಎಂದರು.

ಒಕ್ಕಲಿಗ ಸಮುದಾಯದ ಉಪ ಜಾತಿಯಾದ ಕುಂಚಿಟಿಗ ಸಮುದಾಯದ ಒಬಿಸಿ ಮೀಸಲಾತಿ ಸರ್ಕಾರದಲ್ಲಿದ್ದು ಕೂಡಲೆ ಅದನ್ನು ಕೇಂದ್ರ ಸರ್ಕಾರವು ಜಾರಿಗೊಳಿಸ ಬೇಕಿದೆ ಇದಕ್ಕೆ ರಾಜ್ಯಸರ್ಕಾರವು ಸಹ ಒತ್ತಡ ಹಾಕಬೇಕಿದೆ, ಅದೇ ರೀತಿಯಾಗಿ ಬಲಿಜ ಸಮುದಾಯಕ್ಕೆ1994 ರಲ್ಲಿ ಅವರಿಗಿದ್ದ 2ಎ ಮೀಸಲಾತಿಯನ್ನು ಅಂದಿನ ಸರ್ಕಾರ ಯಾವುದೇ ಮಾನ ದಂಡವಿಲ್ಲದೆ ತೆಗೆದು ಹಾಕಿ 2ಎ ಗೆ ಸೇರ್ಪಡೆ ಮಾಡಿರುತ್ತಾರೆ, ರಾಜ್ಯದಲ್ಲಿ ದೊಡ್ಡ ಸಮುದಾಯವಾದ ಬಲಿಜ ಸಮುದಾಯವು ಮತ್ತೆ 2ಎ ಮೀಸಲಾತಿಯನ್ನು ಹಿಂತಿರುಗಿಸುವಂತೆ ಒತ್ತಾಯಿಸಿ ಹೋರಾಟ ಮಾಡುತ್ತಿದ್ದಾರೆ, ಈ ಹೋರಾಟಕ್ಕೆ ನನ್ನ ಬೆಂಬಲವಿದ್ದು ಸಂಭಂದ ಪಟ್ಟ ಸಚಿವರೊಂದಿಗೆ ಮಾತನಾಡುತ್ತೇವೆ. ಶೋಷಿತ ಸಮುದಾಯಗಳು ಯಾವುದೇ ಸರ್ಕಾರಗಳು ಅನ್ಯಾಯ ಮಾಡಬಾರದು ಎಂದರು.

ರಾಜ್ಯದಲ್ಲಿ ಅತ್ಯಂತ ಹಿಂದುಳಿದಿರುವ ಬಲಿಜ ಸಮುದಾಯ 2ಎ ಮೀಸಲಾತಿಗಾಗಿ ಜ.27 ರಂದು ಹಮ್ಮಿಕೊಂಡಿರುವ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲವಿದ್ದು ಸರ್ಕಾರ ತಕ್ಷಣ ಬಲಿಜ ಸಮುದಾಯದ ಮೀಸಲಾತಿ ನೀಡಬೇಕೆಂದು ಪಟ್ಟನಾಯ್ಕನಹಳ್ಳಿ ನಂಜಾವಧೂತ ಸ್ವಾಮೀಜಿ ಬೆಂಬಲ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ತಾಲೂಕು ಒಕ್ಕಲಿಗ ಜಾಗೃತಿ ಸಂಘದ ಅಧ್ಯಕ್ಷ ವಿ.ಕೆ.ವೀರಕ್ಯಾತರಾಯ, ಖಜಾಂಚಿ ಉಮೇಶ್, ಮುಖಂಡರುಗಳಾದ ಬಸವರಾಜು, ಸಂತೋಷಗೌಡ, ನಾಗರಾಜು, ರಾಮಸ್ವಾಮಿ, ಸತೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

1-wqewqe

ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕೇಸ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ssdasd

ಕೊರಟಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ 40 ಮನೆಗಳು ರಾತ್ರೋರಾತ್ರಿ ನೆಲಸಮ

korate

ಸಾರ್ವಜನಿಕ ಕುಂದು-ಕೊರತೆ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

swam

ಉಚಿತ ಸಾಮೂಹಿಕ ವಿವಾಹಕ್ಕೆ ಸಿದ್ದರಬೆಟ್ಟ ಶ್ರೀಗಳಿಂದ ಅರ್ಜಿ ಆಹ್ವಾನ

ರೈತರಿಗೆ ಸಾಗುವಳಿ ಚೀಟಿಗೆ ಮೀನಾಮೇಷ: ಕಂದಾಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ರೈತರಿಗೆ ಸಾಗುವಳಿ ಚೀಟಿ ನೀಡಲು ಮೀನಾಮೇಷ: ಕಂದಾಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಮುಕ ಶಿಕ್ಷಕ ಕರ್ತವ್ಯದಿಂದ ಅಮಾನತು

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಮುಕ ಶಿಕ್ಷಕ ಕರ್ತವ್ಯದಿಂದ ಅಮಾನತು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ