ಪಟಾಕಿ ಸಿಡಿದು ಸಹಕಾರಿ ಸಚಿವ ಕೆ.ಎನ್.ಆರ್. ಕಣ್ಣಿಗೆ ಗಾಯ: ಆಸ್ಪತ್ರೆ ಯಲ್ಲಿ ಚಿಕಿತ್ಸೆ
Team Udayavani, Jun 11, 2023, 8:13 AM IST
ಕುಣಿಗಲ್: ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಅವರ ಕಣ್ಣಿಗೆ ಪಟಾಕಿ ಸಿಡಿದು ಗಾಯಗೊಂಡ ಘಟನೆ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಜೂ.11ರ ಭಾನುವಾರ ಬೆಳಗ್ಗೆ ನಡೆದಿದೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎನ್. ರಾಜಣ್ಣ ಅವರು ಭಾನುವಾರ ಶಕ್ತಿ ಯೋಜನೆಗೆ ಚಾಲನೆ ನೀಡಲು ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದರು.
ಈ ಬಗ್ಗೆ ವಿಷಯ ತಿಳಿದ ಕೆಎನ್ ಆರ್ ಅಭಿಮಾನಿಗಳು, ಹಿತೈಷಿಗಳು, ಕಾಂಗ್ರೆಸ್ ಕಾರ್ಯಕರ್ತರು ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿಗೌಡ ಸರ್ಕಲ್ ಬಳಿ ಕಾರನ್ನು ತಡೆದು ಪುಪ್ಪ ಮಾಲೆಹಾಕಿ ಅಭಿನಂದಿಸಿ, ಬಳಿಕ ಸಮೀಪದಲ್ಲೇ ಪಟಾಕಿ ಹಚ್ಚಿ ಸಿಡಿಸಿದರು. ಈ ಸಂದರ್ಭ ಸಚಿವ ರಾಜಣ್ಣ ಧರಿಸಿದ ಕನ್ನಡಕ ತೆಗೆಯುವುದು ಹಾಗೂ ಪಟಾಕಿ ಸಿಡಿಯುವುದು ಒಂದೇ ಸಮಯವಾಗಿತ್ತು. ಪಟಾಕಿಯ ಕಿಡಿ ನೇರವಾಗಿ ಬಲ ಕಣ್ಣಿಗೆ ಬಂದು ಸಿಡಿಯಿತು. ತಕ್ಷದ ಇಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿ ನೇತ್ರ ತಜ್ಞ ಡಾ.ರವಿಕುಮಾರ್ ಅವರಿಂದ ಚಿಕಿತ್ಸೆ ಪಡೆದು, ಬಳಿಕ ಹಾಸನಕ್ಕೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!