ಕುಣಿಗಲ್ : ಧಾರಾಕಾರ ಮಳೆಗೆ ಮನೆ ಗೋಡೆ, ಕಾಲೇಜು ಕಾಂಪೌಂಡ್, ಸೇತುವೆ ಕುಸಿತ
22 ವರ್ಷದ ಬಳಿಕ ತುಂಬಿ ಹರಿದ ಕುಣಿಗಲ್ ಚಿಕ್ಕ ಕೆರೆ
Team Udayavani, Aug 2, 2022, 9:17 AM IST
ಕುಣಿಗಲ್ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ್ದಾಗಿ ಮನೆಯ ಗೋಡೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಂಪೌಂಡ್ ಹಾಗೂ ಸೇತುವೆ ಕುಸಿತಗೊಂಡಿದ್ದು, ತಗ್ಗು ಪ್ರದೇಶದ ಬಡಾವಣೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ಥವ್ಯಸ್ಥಗೊಂಡಿದೆ.
ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ್ದಾಗಿ ಪಟ್ಟಣದ ಬೈರಾಗಿ ಮಠ ಬೀದಿಯ ರೇವಣ್ಣ ಅವರಿಗೆ ಸೇರಿದ ಮನೆಯ ಗೋಡೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಂಪೋಡ್, ಸೇತುವೆ ಸಂಪೂರ್ಣವಾಗಿ ಕುಸಿದಿದ್ದು, ರಸ್ತೆ ಹಾಳಾಗಿದೆ, ಇದರಿಂದ ಕಾಲೇಜಿಗೆ ವಿದ್ಯಾರ್ಥಿಗಳು ಹೊಗಲು ತೊಂದರೆ ಉಂಟಾಗಿದೆ, ಕಾಲೇಜು ಮುಂಭಾಗದ ಚರಂಡಿಯಲ್ಲಿ ಮಳೆಯ ನೀರು ಬೊರ್ಗರೆಯುತ್ತಿದೆ, ರಸ್ತೆಯಲ್ಲಿ ಎರಡು ಅಡಿಗೂ ಹೆಚ್ಚು ನೀರು ಹರಿದು ವಾಹನಗಳ ಸಂಚಾರಕ್ಕೆ ನಾಗರೀಕರು ತಿರುಗಾಡಲು ತೊಂದರೆ ಉಂಟಾಗಿತ್ತು, ಪಟ್ಟಣದ ಮಿಷನ್ ಕಾಂಪೋಡ್, ಹೌಸಿಂಗ್ ಬೋರ್ಡ್ ಕಾಲೋನಿ ಮೊದಲಾದ ತಗ್ಗು ಪ್ರದೇಶ ಬಡಾವಣೆಯ ಮನೆಗಳಿಗೆ ನೀರು ನುಗ್ಗಿ ಇಡೀ ರಾತ್ರಿ ಜನರು ನೀರು ಹೊರ ಹಾಕುವ ಕೆಲಸದಲ್ಲಿ ತೊಡಗಿದರು.
ಇದನ್ನೂ ಓದಿ : ಸುಬ್ರಹ್ಮಣ್ಯ ಗುಡ್ಡ ಕುಸಿದು ಮಕ್ಕಳು ಮೃತಪಟ್ಟ ಪ್ರಕರಣ: ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ
22 ವರ್ಷದ ಬಳಿಕ ಚಿಕ್ಕಕೆರೆ ಕೆರೆ ಕೋಡಿ : ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಚಿಕ್ಕಕೆರೆ 22 ವರ್ಷದ ಬಳಿಕ ಸಂಪೂರ್ಣವಾಗಿ ತುಂಬಿ ಭರ್ತಿಯಾಗಿ ಕೋಡಿ ಬಿದ್ದಿರುವುದು ಈ ಭಾಗದ ನಾಗರೀಕರ ಹಾಗೂ ರೈತರ ಸಂತಸಕ್ಕೆ ಕಾರಣವಾಗಿದೆ, ಮೂಡಲ್ ಕುಣಿಗಲ್ ಕೆರೆ ನೋಡೋಕೆ ಒಂದು ವೈಭೋಗ ಮೂಡಿ ಬರುತ್ತಾನೆ ಚಂದಿರಾಮ ಎಂಬ ಜಾನಪದ ಗೀತೆ ಒಳಗೊಂಡಿರುವ ಐತಿಹಾಸಿಕ ಹೆಸರಾಂತ ಕುಣಿಗಲ್ ದೊಡ್ಡಕೆರೆ ಕೋಡಿ ಬಿದ್ದಿದೆ,
ಮಾರ್ಕೋನಹಳ್ಳಿ ಜಲಾಶಯಕ್ಕೆ 20 ಸಾವಿರ ಕ್ಯೂಸೆಕ್ಸ್ ಒಳ ಹರಿವು : ದಿನೇ, ದಿನೇ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ತುರುವೇಕೆರೆ ಸೇರಿದಂತೆ ಮೊದಲಾದ ಕೆರೆಗಳು ತುಂಬಿ ಕೋಡಿ ಬಿದ್ದಿರುವ ಕಾರಣ ಮಾರ್ಕೋನಹಳ್ಳಿ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ, ಸೋಮವಾರ ಜಲಾಶಯಕ್ಕೆ ೬೫೦೦ ಕ್ಯೂಸೆಕ್ಸ್ ನೀರು ಹರಿದು ಬರುತ್ತಿತು, ಆದರೆ ಮಂಗಳವಾರ 20 ಸಾವಿರಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ, ಈ ಪ್ರಮಾಣದ ನೀರನ್ನು ಶಿಂಷಾ ನದಿಗೆ ಹದಿರು ಬಿಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
Globant; ಮನೆಯಿಂದಲೇ 30,000 ಮಂದಿ ಕೆಲಸ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?