ಕುಣಿಗಲ್: ಮನೆ ಬಿಟ್ಟು ಹೊಗದ ಅತ್ತೆಗೆ ಸೊಸೆಯಿಂದ ಮಾರಣಾಂತಿಕ ಹಲ್ಲೆ

 ಸ್ಥಿತಿ ಚಿಂತಾಜನಕ : ಆಸ್ಪತ್ರೆಗೆ ದಾಖಲು

Team Udayavani, Nov 4, 2022, 10:13 PM IST

1–dasdsad

ಕುಣಿಗಲ್ : ಮನೆ ಬಿಟ್ಟು ಹೊಗದ ಅತ್ತೆಯ ಮೇಲೆ ಸೊಸೆ ಕಬ್ಬಿಣ ಪೈಪ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಪಟ್ಟಣದ ಕೆಆರ್‌ಎಸ್ ಆಗ್ರಹಾರದಲ್ಲಿ ಶುಕ್ರವಾರ ನಡೆದಿದೆ.

ಮೂಲತಃ ಅಮೃತೂರು ಹೋಬಳಿ, ಗಜನಪಾಳ್ಯ ಗ್ರಾಮದ ವಾಸಿ ಹಾಲಿ ಕುಣಿಗಲ್ ಪಟ್ಟಣದ ಕೆಆರ್‌ಎಸ್ ಆಗ್ರಹಾರದ ಚಿಕ್ಕತಾಯಮ್ಮ (65) ಸೋಸೆ ಸೌಮ್ಯಳಿಂದ ಹಲ್ಲೆಗೆ ಒಳಗಾದ ವೃದ್ದೆ.

  ಘಟನೆ ವಿವರ
ಚಿಕ್ಕತಾಯಮ್ಮ ಅವರಿಗೆ ಶಿವಕುಮಾರ್ ಹಾಗೂ ಎನ್.ಶಂಕರ್ ಇಬ್ಬರು ಗಂಡು ಮಕ್ಕಳಿದ್ದು, ಶಿವಕುಮಾರ್ ಬೆಂಗಳೂರಿನಲ್ಲಿ ವಾಸವಾಗಿದ್ದಾನೆ ಇನ್ನೊಬ್ಬ ಮಗ ಎನ್.ಶಂಕರ್ ಅವರೊಂದಿಗೆ ಚಿಕ್ಕತಾಯಮ್ಮ ಕೆ.ಆರ್.ಎಸ್ ಆಗ್ರಹಾರದ ರೇವಣ್ಣ ಎಂಬುವರ ಮನೆಯಲ್ಲಿ ಕಳೆದ ಒಂದು ವರೆ ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ವಾಸವಾಗಿರುತ್ತಾರೆ.

ಎನ್.ಶಂಕರ್ ಅವರು ಸೌಮ್ಯಳೊಂದಿಗೆ ಮದುವೆಯಾಗಿದ್ದು ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಇರುತ್ತಾರೆ,  ಬೆಂಗಳೂರಿನಲ್ಲಿ ಇರುವ ಶಿವಕುಮಾರ್ ಅವರ ಮನೆಗೆ ಹೋಗು ಎಂದು ಸೋಸೆ ಸೌಮ್ಯಳು ತನ್ನ ಅತ್ತೆ ಚಿಕ್ಕತಾಯಮ್ಮನಿಗೆ ಒತ್ತಾಯ ಮಾಡುತ್ತಾ ಪದೇ, ಪದೇ ಮಾನಸಿಕ ಹಾಗೂ ದೈಹಿಕವಾಗಿ ಹಿಂದೆ ನೀಡುತ್ತಿದ್ದರು ಎನ್ನಲಾಗಿದ್ದು, ಈ ಸಂಬಂಧ ಹಲವು ಭಾರಿ ಸೌಮ್ಯಳಿಗೆ ಮನೆಯ ಅಕ್ಕಪಕ್ಕದವರು ಬುದ್ದಿವಾದ ಹೇಳಿದರು ಎನ್ನಲಾಗಿದ್ದು, ಹೀಗಿದ್ದರೂ ಶುಕ್ರವಾರ (ನ4) ಬೆಳಗ್ಗೆ ಚಿಕ್ಕತಾಯಮ್ಮ ಅವರ ಮನೆಯಲ್ಲಿ ಗಲಾಟೆ ನಡೆಯುತ್ತಿರುವ ಶಬ್ದ ಕೇಳಿ ಬಂದಿದೆ. ಅಷ್ಟರಲ್ಲಿ ಶಂಕರ್ ಅವರ ಮಕ್ಕಳಾದ ಗೌತಮಿ ಮತ್ತು ಸಹನಾ ಮನೆಯಿಂದ ಹೊರಗಡೆ ಬಂದು ನಮ್ಮ ಅಮ್ಮ ಅಜ್ಜಿಗೆ ಹೊಡೆಯುತ್ತಿದ್ದಾರೆ ಎಂದು ಅಳುತ್ತಿದ್ದರು.

ಮನೆಯ  ಪಕ್ಕದ ನಾಗೇಂದ್ರ ಹಾಗೂ ಹೆಚ್.ವಿ.ಲಕ್ಷ್ಮಣ್‌ಗೌಡ ಅವರು ಚಿಕ್ಕತಾಯಮ್ಮ ಅವರ ಮನೆ ಒಳಗೆ ಹೋಗಿ ನೋಡಿದಾಗ ಸೋಸೆ ಸೌಮ್ಯ ಅವರು ಕೈಯಲ್ಲಿ ಅತ್ತೆ ಜುಟ್ಟನ್ನು ಇಡಿದು ಎಳೆದಾಡುತ್ತಾ ಕಬ್ಬಿಣದ ಪೈಪ್‌ನಿಂದ ತಲೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ತೀವ್ರತರಹದ ಗಾಯ ಉಂಟು ಮಾಡಿ ಅವಾಚ್ಯ ಶಬ್ದಗಳಿಂದ ಬೈದು ನಿನ್ನನು ಕೊಲೆ ಮಾಡಿಯೇ ತೀರುತ್ತೇನೆ ಎಂದು ಹೇಳಿದಿದ್ದಾರೆ ಎಂದು ದೂರು ದಾಖಲಾಗಿದೆ.

ಎಚ್.ವಿ.ಲಕ್ಷ್ಮಣ್‌ಗೌಡ ಹಾಗೂ ನಾಗೇಂದ್ರ ಅವರು ಸೌಮ್ಯ ಅವರ ಕೈಯಲ್ಲಿ ಇದ್ದ ಕಬ್ಬಿಣದ ಪೈಪ್ ಅನ್ನು ಕಿತ್ತುಕೊಂಡು ತೀವ್ರವಾಗಿ ಗಾಯಗೊಂಡಿದ ಅತ್ತೆ ಚಿಕ್ಕತಾಯಮ್ಮ ನನ್ನು ಅಂಬ್ಯೂಲೆನ್ಸ್ನಲ್ಲಿ ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಂದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ, ಚಿಕ್ಕತಾಯಮ್ಮನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದ್ದು ಈ ಸಂಬಂಧ ಹೆಚ್.ವಿ.ಲಕ್ಷ್ಮಣಗೌಡ ಕುಣಿಗಲ್ ಠಾಣೆಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.