ಪುರಸಭೆ ಸದಸ್ಯೆಯಿಂದ ಎಂಜಿನಿಯರ್‌ ಮೇಲೆ ಹಲ್ಲೆಗೆ ಯತ್ನ!

ಪುರಸಭಾ ಸಾಮಾನ್ಯ ಸಭೆಯಲ್ಲಿ ಘಟನೆ! ಪೆಟ್ಟಿಗೆ ಅಂಗಡಿ ತೆರವು ಸಂಬಂಧ ಆಕ್ರೋಶಗೊಂಡ ಸದಸ್ಯೆ

Team Udayavani, Mar 21, 2021, 8:30 PM IST

ghdsghe

ಕುಣಿಗಲ್‌: ಪೆಟ್ಟಿಗೆಗೆ ಅಂಗಡಿಗಳನ್ನು ತೆರವುಗೊಳಿಸಲು ಮೀನಮೇಷ, ಕುಪಿತಗೊಂಡ ಸದಸ್ಯೆ ಜಯಲಕ್ಷ್ಮೀ ಪರಿಸರ ಎಂಜಿನಿಯರ್‌ ಚಂದ್ರಶೇಖರ್‌ ಅವರನ್ನು ಏಕ ವಚನದಲ್ಲಿ ನಿಂದಿಸಿ, ನೀರಿನ ಬಾಟಲ್‌ನಿಂದ ಹಲ್ಲೆಗೆ ಯತ್ನಿಸಿದ ಘಟನೆ ಪುರಸಭಾ ಸಾಮಾನ್ಯ ಸಭೆಯಲ್ಲಿ ಶನಿವಾರ ನಡೆಯಿತು.

ಇಲ್ಲಿನ ಪುರಸಭೆಯ ಸಭಾಂಗಣದಲ್ಲಿ ಅಧ್ಯಕ್ಷ ಎಸ್‌.ಕೆ.ನಾಗೇಂದ್ರ ಅವರ ಅಧ್ಯಕ್ಷೆತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ 13ನೇ ವಾರ್ಡ್‌ನ ಸದಸ್ಯೆ ಕೆ.ಆರ್‌.ಜಯಲಕ್ಷ್ಮೀ ಮಾತನಾಡಿ, ತುಮಕೂರು ರಸ್ತೆಯ, ಕಾಂಗ್ರೆಸ್‌ ಕಚೇರಿ ಹಾಗೂ ಕೃಷಿ ಇಲಾಖೆಯ ಎದುರಲ್ಲಿ ಕೆಲ ವ್ಯಕ್ತಿಗಳು ಅಕ್ರಮವಾಗಿ ಪೆಟ್ಟಿಗೆಗೆ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದಾರೆ, ಇದರಿಂದ ವಾಹನ ಸಂಚಾರ ಹಾಗೂ ನಾಗರಿಕರಿಗೆ ತಿರುಗಾಡಲು ತೊಂದರೆ ಉಂಟಾಗಿ, ಅಪಘಾತಗಳು ಸಂಭವಿಸಿ ಹಲವು ಮಂದಿ ಗಾಯಗೊಂಡಿದ್ದಾರೆ. ಹಾಗಾಗಿ ಪೆಟ್ಟಿಗೆಗೆ ಅಂಗಡಿಗಳನ್ನು ತೆರವುಗೊಳಿ ಸುವಂತೆ, ಕಳೆದ ವಿಶೇಷ ಸಭೆಯಲ್ಲಿ ಪ್ರಸ್ತಾಪಿಸಲಾಗಿತ್ತು, ಈ ಸಂಬಂಧ ಏನು ಕ್ರಮಕೈಗೊಂಡಿದ್ದೀರಾ ಎಂದು ಪರಿಸರ ಎಂಜಿನಿಯರ್‌ ಚಂದ್ರಶೇಖರ್‌ ಅವರನ್ನು ಏರು ಧ್ವನಿಯಲ್ಲಿ ಪ್ರಶ್ನಿಸಿದರು.

ಅಂಗಡಿ ಗಳಿಗೆ ಅಳವಡಿಸಿರುವ ವಿದ್ಯುತ್‌ ಸಂಪರ್ಕ ಕಡಿತಕ್ಕೆ ಬೆಸ್ಕಾಂಗೆ ಮನವಿ ಸಲ್ಲಿಸಲಾಗಿದೆ, ಆದಾದ ಬಳಿಕ ಅಂಗಡಿಗಳನ್ನು ತೆರವುಗೊಳಿಸುವುದಾಗಿ ಪರಿಸರ ಎಂಜಿನಿಯರ್‌ ಚಂದ್ರಶೇಖರ್‌ ಉತ್ತರಿಸಿದರು. ಇದರಿಂದ ಕೆಂಡಾಮಂಡಲರಾದ ಸದಸ್ಯೆ ಜಯಲಕ್ಷ್ಮೀ ಮೂರು ನಾಲ್ಕು ದಿನದ ಒಳಗೆ ಅಂಗಡಿಗಳು ತೆರವುಗೊಳಿಸುವುದಾಗಿ ತಿಳಿಸಿ ಈಗ ಸಬೂಬು ಹೇಳುತ್ತಿದ್ದೀರಾ ಎಂದು ತರಾಟೆ ತೆಗೆದುಕೊಂಡರು, ಪೆಟ್ಟಿಗೆಗೆ ಅಂಗಡಿ ಮಾಲೀಕ ರಿಂದ ಹಣ ಪಡೆದಿದ್ದೇನೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ, ನನಗೆ ಅಪಮಾನವಾಗಿದೆ ಎಂದು ಚಂದ್ರಶೇಖರ್‌ ಅವರನ್ನು ಏಕ ವಚನದಲ್ಲಿ ನಿಂದಿಸಿ ಟೇಬಲ್‌ ಮೇಲೆ ಇದ್ದ ನೀರಿನ ಬಾಟಲ್‌ ಹಾಗೂ ಖುರ್ಚಿಯಿಂದ ಹಲ್ಲೆ ಮಾಡಲು ಯತ್ನಿಸಿದರು, ಪಕ್ಕದಲ್ಲೇ ಕುಳಿತಿದ್ದ ಪುರಸಭೆ ಸಿಬ್ಬಂದಿ ರೂಪ ಹಲ್ಲೆಯನ್ನು ತಡೆದರು.

ತೆರವಿಗೆ ಕ್ರಮ: ಮುಖ್ಯಾಧಿಕಾರಿ ಕೆ.ಪಿ. ರವಿಕುಮಾರ್‌ ಮಾತನಾಡಿ, ಮಂಗಳವಾರ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಆದರೆ ಸದಸ್ಯರು ಫೋನ್‌ ಮಾಡಿ ಕರ್ತವ್ಯಕ್ಕೆ, ಅಡ್ಡಿ ಪಡಿಸಬಾರದೆಂದು ತಿಳಿಸಿದರು. ಸದಸ್ಯ ಕೆ.ಎಸ್‌.ಕೃಷ್ಣ ಮಾತನಾಡಿ, ಬಿದನಗೆರೆ ಸರ್ವೇ ನಂ 54/1, 54/3 ನಂಬರ್‌ನ ಜಾಗಕ್ಕೆ ಅಭಿವೃದ್ಧಿ ಶುಲ್ಕ ಎಂದು 4.7 ಲಕ್ಷ ರೂ. ಹಣವನ್ನು ಅಧಿಕಾರಿಗಳು ಕಟ್ಟಿಸಿಕೊಂಡಿದ್ದಾರೆ, ಇದು ಕಾನೂನು ನಿಯಮ ಉಲ್ಲಂಘನೆಯಾಗಿದೆ. ಬಡವರಿಗೆ ಒಂದು ನ್ಯಾಯ, ಬಲಾಡ್ಯರಿಗೆ ಒಂದು ನ್ಯಾಯ ಆಗಬಾರದು. ಎಲ್ಲರಿಗೂ ಒಂದೇ ನ್ಯಾಯ ಇರಬೇಕು ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ಈ ಅವ್ಯವಹಾರದಲ್ಲಿ ಅಧ್ಯಕ್ಷರು, ಮುಖ್ಯಾಧಿಕಾರಿ ಶಾಮೀಲಾಗಿ ಬಲಾಡ್ಯರಿಂದ ಹಣ ಪಡೆದಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ದೂರು ಕೇಳಿ ಬರುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ಸದಸ್ಯ ರಂಗಸ್ವಾಮಿ ಧ್ವನಿಗೂಡಿಸಿದರು, ಇದರಿಂದ ಕೆರಳಿದ ಅಧ್ಯಕ್ಷ ಎಸ್‌.ಕೆ.ನಾಗೇಂದ್ರ ನನ ° ಅಧಿಕಾರ ಅವಧಿಯಲ್ಲಿ ಯಾವೊಬ್ಬ ವ್ಯಕ್ತಿಯಿಂದ ಒಂದು ನಯಾ ಪೈಸೆ ಪಡೆದಿಲ್ಲ ಪ್ರಾಮಾಣಿಕವಾಗಿ ಜನರ ಕೆಲಸ ಮಾಡುತ್ತಿದ್ದೇನೆ ಎಂದು ತಿರುಗೇಟು ನೀಡಿದರು. ಉಪಾಧ್ಯಕ್ಷೆ ಮಂಜುಳಾ, ಸ್ಥಾಯಿ ಸಮಿತಿ ಅಧ್ಯಕ್ಷ ಸಮಿವುಲ್ಲಾ, ಸದಸ್ಯರಾದ ಅರುಣ್‌ಕುಮಾರ್‌, ರಾಮು, ನಾಗರಾಜು, ದೇವರಾಜು ಇದ್ದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.