ತನ್ನ ಪತ್ನಿಯನ್ನು ಹಿಡಿದುಕೊಂಡ ಎಂಬ ವಿಚಾರಕ್ಕೆ ಕೆಲಸಗಾರನ ಕೊಲೆ; ಆರೋಪಿಗೆ ಜೀವವಾಧಿ ಶಿಕ್ಷೆ

ಲೋಕೇಶನಿಗೆ ಜೀವವಾಧಿ ಶಿಕ್ಷೆ: ಒಂದು ಲಕ್ಷ ದಂಡ : ನ್ಯಾಯಾಲಯ ತೀರ್ಪು  

Team Udayavani, Nov 19, 2022, 9:42 AM IST

news1

ಕುಣಿಗಲ್ : ಪತ್ನಿಯನ್ನು ಹಿಡಿದುಕೊಂಡಿದ್ದ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ತೋಟದ ಕೆಲಸಗಾರನನ್ನು ಸಾಯಿಸಿ ಸುಟ್ಟು ಹಾಕಿದ್ದ ಆರೋಪಿ ಲೋಕೇಶ ಎಂಬವನಿಗೆ ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ಕೆ.ಬಿ.ಗೀತಾ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ತಾಲೂಕಿನ ಹುಲಿಯೂರುದುರ್ಗ ಹೋಬಳಿ ನಿಡಸಾಲೆ ಗ್ರಾಮದ ಜಯರಾಮನ ಕೊಲೆ ಸಂಬಂಧಪಟ್ಟಂತೆ ಲೋಕೇಶ ಎಂಬವರಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಘಟನೆ ವಿವರ : ಆರೋಪಿ ಲೋಕೇಶನ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ನಿಡಸಾಲೆ ಗ್ರಾಮದ ಜಯರಾಮನ್ನು 2016ರ ಸೆ. 7 ರಂದು ತೋಟದಲ್ಲಿ ಕೆಲಸ ಮಾಡುವಾಗ ಲೋಕೇಶನ ಪತ್ನಿಯನ್ನು ಜಯರಾಮ ಹಿಡಿದುಕೊಳ್ಳಲು ಹೋಗಿದ್ದಾನೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಲೋಕೇಶ ಎಂಬಾತ ಜಯರಾಮನನ್ನು ಕೊಲೆ ಮಾಡಲು ನಿಶ್ಚಯಿಸಿಕೊಂಡಿದ್ದ.

ಅದರಂತೆ ಲೋಕೇಶ ಸೆ. 8 ರಂದು ಸಂಜೆ ಕೂಲಿಯಾಳು ಜಯರಾಮನ ಜತೆ ಅಂಗಡಿ ಬಳಿಗೆ ಹೋಗಿ 200 ರೂ. ಯ ಮಧ್ಯಪಾನದ ಪ್ಯಾಕೆಟ್‌ಗಳನ್ನು ತೆಗೆದುಕೊಂಡು ಆತನ ಅಡಿಕೆ ಮತ್ತು ಬಾಳೆ ತೋಟಕ್ಕೆ ಹೋಗಿ ಬರೋಣ ಎಂದು ಬೈಕ್‌ನಲ್ಲಿ ಕರೆದುಕೊಂಡು ಹೋಗಿ ಜಯರಾಮನಿಗೆ ಮಧ್ಯಪಾನ ಕುಡಿಸಿದ್ದು, ಆತ ಮಧ್ಯಪಾನದ ನಶೆಯಲ್ಲಿದ್ದಾಗ ಲೋಕೇಶ ಬಿದಿರು ದೊಣ್ಣೆಯಿಂದ ಜಯರಾಮನ ತಲೆಗೆ ಹೊಡೆದು ಪ್ರಜ್ಞೆ ತಪ್ಪಿಸಿ ನಂತರ ಜಯರಾಮನ ಲುಂಗಿಯಿಂದ ಕುತ್ತಿಗೆ ಬಿಗಿದು ಆತ ಮೃತಪಟ್ಟ ಬಳಿಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಜಯರಾಮನನ್ನು ಲುಂಗಿಯಿಂದ ಅಡಿಕೆ ಮರಕ್ಕೆ ನೇತು ಹಾಕಿ ಲೋಕೇಶ ಮನೆಗೆ ವಾಪಸ್ಸಾಗಿದ್ದಾನೆ.

ಮಾರನೇ ದಿನ ಎಂದರೆ ಸೆ.9 ರಂದು ವೈಕುಂಠಮೂರ್ತಿ ಎಂಬವರು ದೇವರ ಪೂಜೆಗೆ ಬಾಳೆಕಂದನ್ನು ಕೊಯ್ಯಲು ಲೋಕೇಶನ ತೋಟಕ್ಕೆ ಹೋಗಿದ್ದಾಗ ಮೃತ ಜಯರಾಮ ಬಿದ್ದಿರುವುದನ್ನು ನೋಡಿ ಮಧ್ಯಪಾನ ಮಾಡಿ ಮಲಗಿರಬಹುದೆಂದು ತಿಳಿದು ವಾಪಸ್ಸಾಗಿದ್ದಾರೆ.

ಕೃತ್ಯ ಎಸಗಿದ್ದ ಲೋಕೇಶ ಕೃತ್ಯ ಮರೆಮಾಚುವ ಉದ್ದೇಶದಿಂದ ಎರಡನೇ  ಆರೋಪಿ ಮೇಘೇಶನೊಂದಿಗೆ ಚರ್ಚೆಸಿ ಮೃತ ಜಯರಾಮನ ಶವವನ್ನು ಸುಟ್ಟು ಹಾಕಲು ನಿಶ್ಚಯಿಸಿ ಮೇಘೇಶನನ್ನು ಕರೆದುಕೊಂಡು ಟ್ಯಾಕ್ಟರ್ ಶೇಡ್‌ನಲ್ಲಿ ಇಟ್ಟಿದ್ದ ಡೀಸೆಲ್ ಹಾಗೂ ಹಳೇ ಟಯರ್ ಹಾಗೂ ಮೃತದೇಹವನ್ನು ಓಮಿನಿ ಕಾರಿನಲ್ಲಿ ಇಟ್ಟುಕೊಂಡು ಮದ್ದೂರು ತಾಲೂಕು ಆತಗೂರು ಹೋಬಳಿ ಗೊಲ್ಲರದೊಡ್ಡಿಗೆ ಹೋಗುವ ಸಾರ್ವಜನಿಕ ರಸ್ತೆ ಪಕ್ಕದ ಸಾಮಾಜಿಕ ಅರಣ್ಯ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ ಶವಕ್ಕೆ ಡೀಸಲ್ ಸುರಿದು, ಟೈರ್ ಇಟ್ಟು ಸುಟ್ಟು ಶವವನ್ನು ಹಾಕಿದ್ದಾರೆ ಎಂದು ಅಂದಿನ ಕುಣಿಗಲ್ ವೃತ್ತ ನಿರೀಕ್ಷ ಎ.ಎನ್.ಅಶೋಕ್‌ಕುಮಾರ್ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದರು.

ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಆರೋಪಿ ಲೋಕೇಶನಿಗೆ ಜೀವವಾಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿದೆ. ದಂಡ ಕಟ್ಟಲು ತಪ್ಪಿದರೇ ಹೆಚ್ಚುವರಿಯಾಗಿ ಆರು ತಿಂಗಳು ಶಿಕ್ಷೆ ನೀಡಿದೆ.

ವಾದವನ್ನು ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಾರ್ವಜನಿಕ ಅಭಿಯೋಜಕ ಹನುಮಂತರಾಯತಾಳಿಕೇರಿ ಮಂಡಿಸಿದರು. ಎರಡನೇ ಆರೋಪಿ ಮೇಘೇಶನನ್ನು ದೋಷಮುಕ್ತಗೊಳಿಸಿ ನ್ಯಾಯಾಲಯ ಆದೇಶಿಸಿದೆ.

ಟಾಪ್ ನ್ಯೂಸ್

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-5

ದೇವಸ್ಥಾನ ಜೀರ್ಣೋದ್ದಾರ ವೇಳೆ: ಚೋಳರಕಾಲದ 65 ಚಿನ್ನದ ನಾಣ್ಯ ಪತ್ತೆ

ಜಗತ್ತೇ ಸಿದ್ಧಗಂಗಾ ಮಠದತ್ತ ಆಕರ್ಷಿಸಿದ ವ್ಯಕ್ತಿತ್ವ ಪೂಜ್ಯರದ್ದು

ಜಗತ್ತೇ ಸಿದ್ಧಗಂಗಾ ಮಠದತ್ತ ಆಕರ್ಷಿಸಿದ ವ್ಯಕ್ತಿತ್ವ ಪೂಜ್ಯರದ್ದು

ಕೊರಟಗೆರೆ: ಚೆಕ್ ಪೋಸ್ಟ್ ತೆರೆಯಲು ಸ್ಥಳ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿ

ಕೊರಟಗೆರೆ: ಚೆಕ್ ಪೋಸ್ಟ್ ತೆರೆಯಲು ಸ್ಥಳ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿ

tdy-19

ಅನುಮತಿಯಿಲ್ಲದೇ ಜಾಹೀರಾತು ಅಂಟಿಸಿದರೆ ಶಿಕ್ಷೆ

ಶ್ರೀನಿವಾಸ್‌ ಸೇರ್ಪಡೆಗೆ ಕಾಂಗ್ರೆಸಿಗರ ವಿರೋಧ

ಶ್ರೀನಿವಾಸ್‌ ಸೇರ್ಪಡೆಗೆ ಕಾಂಗ್ರೆಸಿಗರ ವಿರೋಧ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

1-saddsadsad

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ 22 ಪ್ರಯಾಣಿಕರಿದ್ದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ