ಕುಣಿಗಲ್ ಹೆಸರಾಂತ ಹೋಟೆಲ್ ಮಾಲೀಕ ಶತಾಯುಷಿ ಭೂತಯ್ಯ ನಿಧನ
Team Udayavani, Sep 5, 2022, 8:36 PM IST
ಕುಣಿಗಲ್ : ಕುಣಿಗಲ್ ಪಟ್ಟಣದ ಹೆಸರಾಂತ ತಟ್ಟೆ ಇಡ್ಲಿ ಹೋಟೆಲ್ ಮಾಲೀಕ ಶತಾಯಿಶಿ ಟಿ.ಎಂ.ಮಹದೇವಯ್ಯ(ಭೂತಯ್ಯ) ಸೋಮವಾರ ಆನಾರೋಗ್ಯದಿಂದ ನಿಧನ ಹೊಂದಿದ್ದಾರೆ.ಅವರಿಗೆ 102 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಮೂರು ಜನ ಗಂಡು, ನಾಲ್ಕು ಜನ ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಸುಮಾರು 50 ವರ್ಷಗಳಿಂದ ತಟ್ಟೆ ಇಡ್ಲಿ ವ್ಯಾಪಾರ ಮಾಡುತ್ತಿದ್ದರು, ಸಚಿವರು, ಚಲನಚಿತ್ರ ನಟ, ನಟಿಯರು, ಗಣ್ಯರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಇಲ್ಲಿಗೆ ಬಂದು ತಟ್ಟೆ ಇಡ್ಲಿ ಸವಿಯುತ್ತಿದ್ದರು, ಭೂತಯ್ಯ ಎಂದೇ ಹೆಸರಾಗಿದ್ದ ಅವರು ಅನಾರೋಗ್ಯ ಹಲವು ದಿನಗಳಿಂದ ಹಾಸಿಗೆ ಇಡಿದಿದ್ದರು. ಅಂತ್ಯಕ್ರಿಯೆ ಮಂಗಳವಾರ ಬೆಳಗ್ಗೆ 11 ಗಂಟೆಗೆ ಪಟ್ಟಣ ವೀರಶೈವ ರುದ್ರ ಭೂಮಿಯಲ್ಲಿ ನೆರವೇರಲಿದೆ ಎಂದು ಅವರ ಪುತ್ರ ಟಿ.ಎಂ.ಶಿವಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ