ಕೆಂಪೇಗೌಡ ಜಯಂತೋತ್ಸವ ಮೆರವಣಿಗೆ ವೇಳೆ ಲೋಪ : ತಹಶೀಲ್ದಾರ್ ಮಹಬಲೇಶ್ವರ್ ಕ್ಷಮೆ


Team Udayavani, Jun 29, 2022, 11:30 PM IST

ಕೆಂಪೇಗೌಡ ಜಯಂತೋತ್ಸವ ಮೆರವಣಿಗೆ ವೇಳೆ ಲೋಪ : ತಹಶೀಲ್ದಾರ್ ಮಹಬಲೇಶ್ವರ್ ಕ್ಷಮೆ

ಕುಣಿಗಲ್ : ನಾಡಪ್ರಭು ಕೆಂಪೇಗೌಡ ಅವರ ಜಯಂತೋತ್ಸವ ಮೆರವಣಿಗೆ ವೇಳೆಯಲ್ಲಿ ಆದ ಲೋಪದೋಷದ ಸಂಬಂಧ ತಹಶೀಲ್ದಾರ್, ನಾಡ ಹಬ್ಬಗಳ ಸಮಿತಿಯ ಅಧ್ಯಕ್ಷ ಮಹಬಲೇಶ್ವರ ಬೇಷರತ್ ಕ್ಷಮೆ ಕೋರಿದರು.

ಪಟ್ಟಣದಲ್ಲಿ ನಡೆದ ಕೆಂಪೇಗೌಡ ಅವರ ಭಾವಚಿತ್ರ ಮೆರವಣಿಗೆ ವೇಳೆಯಲ್ಲಿ ಆದ ಘಟನೆಯಿಂದ ಉದ್ಬವಿಸಿದ ವಿವಾದ ಸಂಬಂಧ ತಹಶೀಲ್ದಾರ್ ಮಹಬಲೇಶ್ವರ ಅವರ ನ್ಯಾಯಾಲಯದ ಅವರಣದಲ್ಲಿ ವಿವಿಧ ಸಮುದಾಯದ ಮುಖಂಡರ ಸಭೆ ಕರೆದು ಅಂದು ನಡೆದ ಘಟನೆ ಸಂಬಂಧ ಕಾರಣ ಕೇಳಿ ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಲಾಗಿದೆ ಎಂದು ಸಭೆಗೆ ತಿಳಿಸಿದರು.

ಲೋಪದೋಷಕ್ಕೆ ಕಾರಣರಾದವರನ್ನು ತಿಳಿಸುವಂತೆ ಮುಖಂಡರು ತಹಶೀಲ್ದಾರ್ ಅವರನ್ನು ಆಗ್ರಪಡಿಸಿದರು, ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಶಾಸಕರು ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ ಕರೆಯಲಾಗಿತ್ತು, ಆದರೆ ಅದೇ ದಿನ ಎಡಿಯೂರಿಗೆ ಮುಖ್ಯಮಂತ್ರಿಗಳು ಬಂದ ಕಾರಣ ಪೂರ್ವ ಭಾವಿ ಸಭೆಯಲ್ಲಿ ನಾನು ಇರಲಿಲ್ಲ, ಆಚರಣೆ ಸಂಬಂಧ ಒಂದೊಂದು ಇಲಾಖೆಗೆ ಒಂದೊಂದು ಕಾರ್ಯಕ್ರಮವನ್ನು ವಹಿಸಲಾಗಿತು, ಮೆರವಣಿಗೆಗೆ ವಾಹನ ಹಾಗೂ ಡೊಳ್ಳುಕುಣಿತ ಪುರಸಭಾ ಅಧ್ಯಕ್ಷರು ವಹಿಸಿಕೊಂಡಿದರು, ಪುರಸಭೆಯ ಕಸದ ವಾಹನದಲ್ಲಿ ಕೆಂಪೇಗೌಡರ ಭಾವಚಿತ್ರ ಪ್ಲೆಕ್ಸ್ ಕಟ್ಟಲಾಗಿದೆ ಎಂದು ತಿಳಿಯುತ್ತಿದಂತೆ ಸ್ಥಳಕ್ಕೆ ತೆರಳಿ ಕಸದ ವಾಹನದಲ್ಲಿ ಅಳವಡಿಸಿದ ಪ್ಲೆಕ್ಸ್ ಅನ್ನು ತೆಗಿಸಿ ಬೇರೆ ವಾಹನದಲ್ಲಿ ಪ್ಲೆಕ್ಸ್ ಹಾಕಿಸಿ ಮೆರವಣಿಗೆ ಮಾಡಲಾಯಿತು, ಕಸದ ವಾಹನದಲ್ಲಿ ಮಾಡಲಾಗಲಿಲ್ಲ ಎಂದು ಸ್ಪಷ್ಟಪಡಿಸಿದರು.

ತರಾಟೆ : ನಾಡ ಹಬ್ಬಗಳ ಸಮಿತಿಯ ಅಧ್ಯಕ್ಷರಾಗಿರುವ ನೀವು ಮುನ್ನೆಚ್ಚರಿಕೆ ವಹಿಸಬೇಕಾಗಿತ್ತು, ನಾಡಪ್ರಭು ಕೆಂಪೇಗೌಡ ಅವರಿಗೆ ಅಪಮಾನ ಮಾಡಲಾಗಿದೆ ಇದರ ಹೋಣೆಯನ್ನು ನೀವೆ ಹೊರಬೇಕು ಎಂದು ತರಾಟೆ ತೆಗೆದುಕೊಂಡ ಮುಖಂಡರು ತಪ್ಪಸ್ಥ ಅಧಿಕಾರಿಯನ್ನು ಕೂಡಲೇ ಸೇವೆಯಿಂದ ಅಮಾನತು ಪಡಿಸಬೇಕು ಇಲ್ಲವಾದಲ್ಲಿ ಎಲ್ಲಾ ಸಮುದಾಯದೊಂದಿಗೆ ಸೇರಿ ಉಗ್ರ ಹೋರಾಟ ಮಾಡಲಾಗುವುದೆಂದು ಮುಖಂಡರು ಎಚ್ಚರಿಕೆ ನೀಡಿದರು,

ಕೆಂಪೇಗೌಡರ ಬಗ್ಗೆ ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ ಯಾರು ಸಹಾ ಉದ್ದೇಶ ಪೂರಕವಾಗಿ ಅಪಮಾನ ಮಾಡಬೇಕೆಂಬ ಉದ್ದೇಶ ಇರಲಿಲ್ಲ ಆಕಸ್ಮಿಕವಾಗಿ ಆಗಿರುವ ಘಟನೆಯಿಂದ ಮನಸ್ಸಿಗೆ ನೋವಾಗಿದೆ ಎಂದು ಹೇಳಿದ ತಹಶೀಲ್ದಾರ್ ಇದಕ್ಕೆ ಕ್ಷೇಮೆ ಕೋರುತ್ತೇನೆ ಇನ್ನು ಮುಂದೆ ಈ ರೀತಿಯಾಗದಂತೆ ಎಚ್ಚರ ವಹಿಸಲಾಗುವುದು ಇಲ್ಲಿಗೆ ವಿವಾದವನ್ನು ಇಲ್ಲಿಗೆ ನಿಲ್ಲಿಸುವಂತೆ ಮನವಿ ಮಾಡಿದರು, ಈ ಸಂಬಂಧ ಮುಖಂಡರೊಂದಿಗೆ ಚರ್ಚಿಸಿ ನಾಳೆ ತಿಳಿಸುವುದ್ದಾಗಿ ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ಎನ್.ಜಗದೀಶ್ ತಿಳಿಸಿದರು,

ಸಭೆಯಲ್ಲಿ ಪುರಸಭೆ ಮಾಜಿ ಅಧ್ಯಕ್ಷರಾದ ನಳಿನಾಬೈರಪ್ಪ, ಕೆ.ಎಲ್.ಹರೀಶ್, ಸದಸ್ಯ ಈ.ಮಂಜು, ಚುಂಚ ಶ್ರೀ ಮಹಿಳಾ ಸಂಘದ ಅಧ್ಯಕ್ಷೆ ಅನುಸೂಯ, ವಕೀಲ ಸಂಘದ ಅಧ್ಯಕ್ಷ ಬಾಬು, ವಕೀಲ ಸತೀಶ್, ಡಿಎಸ್‌ಎಸ್ ಸಂಚಾಲಕ ವಿ.ಶಿವಶಂಕರ್, ಮುಖಂಡರಾದ ಜಯರಾಮ್, ತರಿಕೆರೆ ಪ್ರಕಾಶ್, ಮಂಜುನಾಥ್, ಮೊದೂರು ಗಂಗಾಧರ್, ದೇವರಾಜ್, ಎನ್.ರಾಜೇಶ್ ಮತ್ತಿತರರು ಇದ್ದರು,

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.