ನೀರಿನ ಘಟಕಗಳ ನಿರ್ವಹಣೆ ಕೊರತೆ


Team Udayavani, Jan 2, 2020, 3:00 AM IST

neerina-ghata

ಹುಳಿಯಾರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 20 ಸಾವಿರ ಜನಸಂಖ್ಯೆಗೆ ಕೇವಲ ಮೂರು ನೀರಿನ ಘಟಕಗಳು ನೀರು ಪೂರೈಸುತ್ತಿವೆ. ಅದರಲ್ಲೂ ಧರ್ಮಸ್ಥಳ ಸಂಸ್ಥೆಯ ನೀರಿನ ಘಟಕ ಸ್ಥಾಪನೆಯಾದ 2 ವರ್ಷದಿಂದ ತೊಂದರೆಯಿಲ್ಲದೆ ನೀರು ಪೂರೈಸುತ್ತಿದೆ.

ನಾಲ್ಕೈದು ವರ್ಷದ ಹಿಂದೆ ಡಾ.ವಾಟರ್‌ ಸಂಸ್ಥೆಯಿಂದ ಘಟಕ ಸ್ಥಾಪಿಸಲಾಯಿತು. ಅಲ್ಲಿಂದ ಇಲ್ಲಿಯವರೆವಿಗೆ ಶಾಸಕರು, ಸಂಸದರ ನಿಧಿ, ಗ್ರಾಮೀಣ ಕುಡಿಯುವ ನೀರು ಯೋಜನೆ ಸೇರಿ 10 ಘಟಕಗಳು ಸ್ಥಾಪನೆಗೊಂಡಿವೆ. ಆದರೆ ಕೆಲ ಘಟಕಗಳ ನಿರ್ವಹಣೆ ಕೊರತೆಯಿಂದಪಕ್ಕದ ಊರಿನ ಘಟಕಗಳಿಂದ ನೀರು ತರಬೇಕು. ಇಲ್ಲವೇ ಫ್ಲೋರೈಡ್‌ ಯುಕ್ತ ನೀರು ಕುಡಿಯಬೇಕು.

ಹುಳಿಯಾರಿನ ನಾಡಕಚೇರಿ ಬಳಿಯ ಸರ್ಕಾರದ ನೀರಿನ ಘಟಕ, ಪೊಲೀಸ್‌ ಠಾಣೆ ಪಕ್ಕದ ಡಾ.ವಾಟರ್‌ ಘಟಕ ಹಾಗೂ ಪಂಚಾಯಿತಿ ಕಚೇರಿ ಬಳಿಯ ಧರ್ಮಸ್ಥಳ ಸಂಸ್ಥೆಯ ಘಟಕ ಬಿಟ್ಟರೆ ಉಳಿದ ಘಟಕಗಳು ಆಗಾಗ ಕೆಡುತಿರುತ್ತವೆ. ಕೆಟ್ಟು ತಿಂಗಳಾದರೂ ದುರಸ್ತಿ ಮಾಡುವುದಿಲ್ಲ. ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದರೆ ಘಟಕಗಳ ನಿರ್ವಹಣೆ ಹೊಣೆ ಹೊತ್ತವರ ಕಡೆ ಬೆರಳು ಮಾಡುತ್ತಾರೆ.

ತಾಲೂಕು ಕುಡಿಯುವ ನೀರಿನ ಎಂಜಿನಿಯರ್‌, ಗುತ್ತಿಗೆದಾರರು ಸ್ಪಂದಿಸುವುದಿಲ್ಲ. ಕೆಂಕೆರೆ ರಸ್ತೆಯ ಬಿಎಂಎಸ್‌ ಪಕ್ಕದ ಘಟಕ ಕೆಟ್ಟು ವರ್ಷ ಕಳೆದಿದೆ. ವೈ.ಎಸ್‌.ಪಾಳ್ಯ, ಲಿಂಗಪ್ಪನಪಾಳ್ಯ, ಕೋಡಿಪಾಳ್ಯದ ನಿವಾಸಿಗಳು ಶುದ್ಧ ನೀರಿಗೆ ಪರದಾಡಬೇಕು. ಬೈಕ್‌ ಇರುವವರು ಅಕ್ಕಪಕ್ಕದ ಊರಿನ ಘಟಕಗಳಿಂದ ನೀರು ತಂದರೆ ಬೈಕ್‌ ಇಲ್ಲದವರು ಕೊಳವೆ ಬಾವಿ ನೀರು ಕುಡಿಯಬೇಕು.

ದುರ್ಗಾಪರಮೇಶ್ವರಿ ದೇವಾಲಯ ಆವರಣದಲ್ಲಿರುವ ಘಟಕ ನೀರು ಸರಬರಾಜು ಮಾಡಿದ್ದಕ್ಕಿಂತ ಕೆಟ್ಟಿದ್ದೇ ಹೆಚ್ಚು. ಪ್ರಸ್ತುತ ಈ ಘಟಕ ಕೆಟ್ಟಿದ್ದರೂ ದುರಸ್ತಿಗೆ ಇನ್ನೂ ಮುಂದಾಗಿಲ್ಲ. ಎಪಿಎಂಸಿ ಆವರಣದಲ್ಲಿನ ಘಟಕ, ವೈ.ಎಸ್‌.ಪಾಳ್ಯದ ಘಟಕವೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಆರಂಭವಾಗಿಲ್ಲ.

ಘಟಕ ಕೆಟ್ಟರೆ ಅಥವಾ ತಾಂತ್ರಿಕ ಸಮಸ್ಯೆ ತಲೆದೋರಿದರೆ ರಿಪೇರಿ ಮಾಡಲು ಯಾರಿಗೆ ತಿಳಿಸಬೇಕೆಂದು ತಿಳಿಯುವುದಿಲ್ಲ. ಪಪಂ ಅಧಿಕಾರಿಗಳಿಗೆ ಕೇಳಿದರೆ ನಮ್ಮ ಜವಾಬ್ದಾರಿಯಲ್ಲ ಎನ್ನುತ್ತಾರೆ. ನಿರ್ವಹಣೆ ಮಾಡಬೇಕಿರುವ ಕಂಪನಿಯವರು ಘಟಕದ ಹಣ ತಪ್ಪದೆ ಕೊಂಡೊಯ್ಯುತ್ತಾರೆ. 10 ನೀರಿನ ಘಟಕಗಳಿದ್ದರೂ ಶುದ್ಧ ನೀರಿಗೆ ಪರದಾಡುವುದು ತಪ್ಪಿಲ್ಲ.
-ಜಯಲಕ್ಷ್ಮೀ, ಸಾಮಾಜಿಕ ಕಾರ್ಯಕರ್ತೆ

ನೀರಿನ ಘಟಕ ನಿರ್ವಹಣೆ ಬೇರೆ ಬೇರೆ ಕಂಪನಿ ವಹಿಸಿದೆ. ಆದರೆ ಕೆಟ್ಟರೆ ಜನರು ಪಂಚಾಯಿತಿಗೆ ಬಂದು ಕೇಳುತ್ತಾರೆ. ಸಣ್ಣಪುಟ್ಟ ರಿಪೇರಿ ಮಾಡಿಸಿ ನೀರು ಕೊಟ್ಟಿದ್ದೇವೆ. ಎಲ್ಲಾ ಘಟಕ ಪಂಚಾಯ್ತಿಗೆ ಬಿಟ್ಟುಕೊಟ್ಟರೆ ಸಮರ್ಪಕವಾಗಿ ನಿರ್ವಹಿಸುತ್ತೇವೆ.
-ಮಂಜುನಾಥ್‌, ಪಪಂ ಮುಖ್ಯಾಧಿಕಾರಿ

* ಎಚ್‌.ಬಿ.ಕಿರಣ್‌ ಕುಮಾರ್‌

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.