ಪ್ರಾಣಿ-ಪಕ್ಷಿಗಳಿಗೆ ನೀರು, ಆಹಾರದ ಕೊರತೆ


Team Udayavani, Apr 20, 2021, 8:32 PM IST

ಪ್ರಾಣಿ-ಪಕ್ಷಿಗಳಿಗೆ ನೀರು, ಆಹಾರದ ಕೊರತೆ

ತುಮಕೂರು: ಬೆಳಗಾರದರೆ ಚಿಲಿ..ಪಿಲಿ ಸದ್ದುಮಾಡುತ್ತಿದ್ದ ಪಕ್ಷಿಗಳು, ಬೆಟ್ಟ, ಗುಡ್ಡಗಳಿಗೆ ಹೋದರೆ ಅಲ್ಲಿ ಕಣ್ಣಿಗೆ ಕಾಣುತ್ತಿದ್ದ ಸಣ್ಣಪುಟ್ಟ ಪ್ರಾಣಿಗಳು, ಎಲ್ಲೆಂದರಲ್ಲಿ ಮರಕ್ಕೆ ನೇತು ಹಾಕಿಕೊಂಡು ಸದ್ದು ಮಾಡುತ್ತಿದ್ದ ಬಾವಲಿಗಳ ಸಂತತಿ ಕಾಣದಾಗುತ್ತಿದ್ದು, ಅಲ್ಲಿ ಇಲ್ಲಿ ಉಳಿದಿರುವ ಪ್ರಾಣಿ-ಪಕ್ಷಿಗಳು ರೈತರು ತಾವು ಬೆಳೆದಿರುವ ಹಣ್ಣಗಳನ್ನು ರಕ್ಷಣೆ ಮಾಡಿಕೊಳ್ಳಲು ಅಳವಡಿಸಿರುವ ಬಲೆಗೆ ಬಿದ್ದು ಸಾವಿರಾರು ಪಕ್ಷಿಗಳು ಬಲಿಯಾಗಿವೆ.

ಪ್ರಕೃತಿಯಲ್ಲಿ ಎಲ್ಲ ಪ್ರಾಣಿ-ಪಕ್ಷಿಗಳು, ಗಿಡ-ಮರಗಳು ಇರಬೇಕು. ಆಹಾರ ಸರಪಳಿಯಲ್ಲಿ ಒಂದಕ್ಕೆ ಒಂದು ಸಂಬಂಧದಂತೆ ಇದ್ದು, ಪ್ರಕೃತಿಯಲ್ಲಿ ಅಸಮತೋಲನ ಉಂಟಾಂಗದಂತೆ ಎಲ್ಲವೂ ಇದ್ದಾಗ ಅದು ಉತ್ತಮ ಪರಿಸರ ಆಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿಪರಿಸರದಲ್ಲಿ ಉಂಟಾಗುತ್ತಿರುವ ಏರುಪೇರಿನಿಂದ ಪರಿಸರದಲ್ಲಿ ಅಸಮತೋಲನ ಉಂಟಾಗುತ್ತಿದೆ.

ಕಾಣದಾಗುತ್ತಿದೆ ಪಕ್ಷಿಗಳ ಸಂತತಿ: ಪ್ರತಿದಿನ ಬೆಳಗಿನವೇಳೆಯಲ್ಲಿ ಮನೆ ಅಂಗಳದಲ್ಲಿ ಚಿಲಿಪಿಲಿ ಗುಟ್ಟುತ್ತಿದ್ದ ಗುಬ್ಬಚ್ಚಿಗಳು ಈಗ ನಮ್ಮಿಂದ ಕಾಣದಾಗುತ್ತಿವೆ. ಮನೆಯ ಮುಂದೆ ಕುಳಿತು ಕಾ..ಕಾ ಎಂದು ತನ್ನ ಇಂಡನ್ನು ಕರೆಯುತ್ತಿದ್ದ ಕಾಗೆಗಳ ಸಂತತಿಯೂ ಹಂತ- ಹಂತವಾಗಿ ಕಡಿಮೆ ಆಗುತ್ತಿದೆ. ಗಿಳಿ, ಕೋಗಿಲೆ, ಬುಲ್‌ಬುಲ್‌, ಮಿಂಚುಳ್ಳಿ, ಮರಕುಟಿಗ, ಬೆಳ್ಳಕ್ಕಿ, ಗೂಬೆ ಹೀಗೆ ಹಲವು ಬಗೆಯ ಪಕ್ಷಿಗಳ ಸಂಕುಲಹಂತ-ಹಂತವಾಗಿ ಕಡಿಮೆಯಾಗುತ್ತಿವೆ. ಇದಕ್ಕೆಕಾರಣ ಪಕ್ಷಿಗಳಿಗೆ ಆಹಾರದ ಕೊರತೆ ಜೊತೆಗೆ ನೀರಿನ ಕೊರತೆ ಪ್ರಮುಖ ವಾಗಿದೆ. ಅಲ್ಲದೆ ಮನುಷ್ಯನದುರಾಸೆಯಿಂದ ಇಂತಹ ಅಮೂಲ್ಯ ಪಕ್ಷಿ ಸಂಕುಲ ಕಡಿಮೆ ಆಗುತ್ತಿದೆ.

ಬೆಳಗಿನ ಜಾವ ಹಕ್ಕಿಗಳು, ಚಿಟ್ಟೆಗಳು, ಮೊಲ, ಜಿಂಕೆ, ಕಡವೆ, ಮುಂಗಸಿ ಮುಂತಾದ ಪ್ರಾಣಿಗಳು ಆಹಾರಾನ್ವೇಷಣೆಯಲ್ಲಿ ತೊಡಗಿರುತ್ತವೆ. ಮುಸ್ಸಂಜೆ, ರಾತ್ರಿ ಆರಂಭವಾದ ತಕ್ಷಣ ಚಿರತೆ, ಕರಡಿ, ಕಾಡುಹಂದಿ, ಕಾಡು ಪಾಪ, ಪತಂಗಗಳು, ಹಾವು, ಕಪ್ಪೆಗಳು ಆಹಾರ ಹುಡುಕಲು ಪ್ರಾರಂಭಿಸುತ್ತವೆ. ಇಂತಹ ವೇಳೆಯಲ್ಲಿ ಕಾಡಿನುದ್ದಕ್ಕೂ ಇರುವ ರಸ್ತೆಗಳಲ್ಲಿ ಬೆಳಗಿನಿಂದ ರಾತ್ರಿವರೆಗೂ ಮಾನವರ ಓಡಾಟ ನಿರಂತರವಾಗಿರುವುದರಿಂದ ಪ್ರಾಣಿ, ಪಕ್ಷಿಗಳ ಖಾಸಗಿಜೀವನಕ್ಕೆ ತೊಂದರೆ ಉಂಟಾಗುತ್ತಿದೆ. ಇದರಿಂದ ಪಕ್ಷಿಗಳು ಪ್ರಾಣಿಗಳು ತಮ್ಮ ಜೀವ ಕಳೆದುಕೊಳ್ಳುತ್ತಿವೆ.

ಬಲೆಗಳಿಗೆ ಪಕ್ಷಿಗಳು ಬಲಿ: ರೈತರು ಬೆಳೆದ ಬೆಳೆ‌ಗಳನ್ನುಪ್ರಾಣಿ-ಪಕ್ಷಿಗಳು ತಿಂದು ಬಿಡುತ್ತವೆ ಎಂದು ರೈತರು ಅಳವಡಿಸುವ ಬಲೆಗಳಿಗೆ ಪ್ರಾಣಿ ಪಕ್ಷಿಗಳು ಬಿದ್ದು ಮೃತಪಡುತ್ತಿವೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಶಿರಾ, ಪಾವಗಡ, ಮಧುಗಿರಿ, ಕೊರಟಗೆರೆ, ಗುಬ್ಬಿ ತಾಲೂಕುಗಳಲ್ಲಿ ಆರ್ಥಿಕಬೆಳೆಯಾದ ದಾಳಿಂಬೆ ಬೆಳೆಯನ್ನು ವ್ಯಾಪಕವಾಗಿ ಬೆಳೆಯುತ್ತಾರೆ. ಬೆಳೆದಂತಹ ಹಣ್ಣುಗಳನ್ನು ತಿನ್ನಲು ಬರುವ ಪಕ್ಷಿಗಳನ್ನು ಹಿಮ್ಮೆಟಿಸಲು ಇಡೀ ದಾಳಿಂಬೆತೋಟದ ಸುತ್ತ ಮತ್ತು ಮೇಲ್ಭಾಗದಲ್ಲಿ ಬಲೆಯನ್ನುಹರಡಿ ಪಕ್ಷಿಗಳು ಬಲೆಯಲ್ಲಿ ಸಿಕ್ಕಿ ಬೀಳುವಂತೆ ಮಾಡಿಸಾವಿರಾರು ಪಕ್ಷಿಗಳ ಸಾವಿಗೆ ಕಾರಣರಾಗುತ್ತಿದ್ದಾರೆ.

ಪಕ್ಷಿಗಳಿಗೆ ತೊಂದರೆ ಇರುವುದಿಲ್ಲ: ಈ ಹಿಂದೆ ಜಮೀನಿಗೆ ಬರುವ ಪಕ್ಷಿಗಳನ್ನು ಹಿಮ್ಮೆಟಿಸಲು ಯಾಂತ್ರಿಕ ವಿಧಾನಗಳಾದ ಬೆದರುಗೊಂಬೆಗಳನ್ನು ಅಳವಡಿಸುವುದು, ಡಬ್ಬಗಳಿಂದ ಶಬ್ದ ಮಾಡುವುದು,ಇತ್ತೀಚಿನ ದಿನಗಳಲ್ಲಿ ಮನುಷ್ಯ ಕೂಗುವ ರೀತಿಯಲ್ಲಿ ಸಂಗೀತದ ಹಾರ್ನ್ಗಳನ್ನು ಅಳವಡಿಸಿ ಪಕ್ಷಿಗಳನ್ನು ಹಿಮ್ಮೆಟಿಸುತ್ತಿದ್ದಾರೆ. ಇದರಿಂದ ಪಕ್ಷಿಗಳಿಗೆ ತೊಂದರೆಇರುವುದಿಲ್ಲ. ಆದರೆ, ಹೆಚ್ಚಿನ ರೈತರು ಇಡೀ ತೋಟಕ್ಕೆ ಬಲೆಯನ್ನು ಹರಡಿ ಅಪರೂಪದ ಪಕ್ಷಿಗಳು, ನಿಶಾಚರಿಬಾವಲಿಗಳ ಸಾವಿಗೆ ಕಾರಣರಾಗಿದ್ದಾರೆ.ಅಮೂಲ್ಯ ಪ್ರಾಣಿ-ಪಕ್ಷಿಗಳನ್ನು ಸಂರಕ್ಷಿಸುವಜವಾಬ್ದಾರಿ ಎಲ್ಲರ ಮೇಲಿದೆ.

ಪ್ರಾಣಿ ಪಕ್ಷಿಗಳ ಸಾವಿಗೆಕಾರಣವಾಗುವವರ ಮೇಲೆ ಕಾನೂನು ರೀತಿ ಕ್ರಮಕೈಗೊಳ್ಳುವ ಅವಕಾಶ ವಿದೆ. ಈ ಬಗ್ಗೆ ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಳ್ಳಬೇಕಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಪಕ್ಷಗಳು ಜಮೀನಿಗೆ ಬರದಂತೆ ಬಲೆ ಹಾಕಿ ಪಕ್ಷಿಗಳ ಸಾವಿಗೆ ಯಾರು ಕಾರಣ ರಾಗಿದ್ದಾರೆ ಅವರನ್ನು ಪತ್ತೆ ಹಚ್ಚಿ ಅಂತಹವರ ಮೇಲೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಪರಿಸರದ ನಾಶ ಹಾಗೂ ಸಾವಿರಾರು ಪಕ್ಷಿಗಳ ಸಾವಿಗೆ ಕಾರಣವಾದ ರೈತರಕ್ರಮಕ್ಕೆ ವನ್ಯಜೀವಿ ಜಾಗೃತಿ ನಿಸರ್ಗ ಸಂಸ್ಥೆಯ ಅಧ್ಯಕ್ಷ ಬಿ.ವಿ.ಗುಂಡಪ್ಪ ಒತ್ತಾಯಿಸಿದ್ದಾರೆ.

ಪ್ರಾಣಿ-ಪಕ್ಷಿ ಸಂಕುಲ ಉಳಿಸಿ :

ತುಮಕೂರು ಜಿಲ್ಲೆಯ ಹಣ್ಣಿನ ತೋಟಗಳಲ್ಲಿ ಅಳವಡಿಸಿರುವ ಬಲೆಯಲ್ಲಿ ಸಿಲುಕಿ ಮೃತಪಟ್ಟಿರುವ ಪಕ್ಷಿಗಳ ಸಂಕುಲವನ್ನು ನೋಡಿದರೆ ಮನಃ ಕಲಕುತ್ತದೆ. ಈ ರೀತಿ ಪಕ್ಷಿಗಳ ಅವನತಿಗೆ ಕಾರಣ ರಾಗಿರುವವರು ಯಾರೇ ಆಗಿರಲಿ ಅಂತಹವರಮೇಲೆ ಜಿಲ್ಲಾಧಿಕಾರಿ ಮತ್ತು ಅರಣ್ಯ ಅಧಿಕಾರಿಗಳು ಅಗತ್ಯ ಕಾನೂನು ರೀತಿ ಕ್ರಮಕೈಗೊಂಡುಅಮೂಲ್ಯ ವಾಗಿರುವ ಪ್ರಾಣಿ, ಪಕ್ಷಿಗಳ ಸಂಕುಲವನ್ನು ಉಳಿಸಬೇಕು ಎನ್ನುವುದು ಉದಯವಾಣಿ ಪತ್ರಿಕೆ ಕಾಳಜಿಯಾಗಿದೆ.

ರೈತರು ಪಕ್ಷಿಗಳು ತಮ್ಮ ಜಮೀನಿಗೆ ಬರದಂತೆ ಬಲೆ ಹಾಕುವುದನ್ನುಸಂಪೂರ್ಣ ನಿಷೇಧಿಸಲು ಜಿಲ್ಲಾಧಿಕಾರಿಗಳು ಕಠಿಣಕ್ರಮ ತೆಗೆದುಕೊಳ್ಳಲುಕೃಷಿ ಸಹಾಯಕರಿಗೆಆದೇಶಿಸಬೇಕು. ಅರಣ್ಯಇಲಾಖೆ ಅಂತಹವರ ವಿರುದ್ಧ ವನ್ಯಜೀವಿ ಕಾಯ್ದೆ 1972ರ ಅಡಿಯಲ್ಲಿಕಾನೂನು ಕ್ರಮ ತೆಗೆದುಕೊಂಡು ವಿನಾಶದ ಅಂಚಿನಲ್ಲಿರುವ ಪಕ್ಷಿಗಳನ್ನು ಸಂರಕ್ಷಿಸಬೇಕು. – ಬಿ.ವಿ.ಗುಂಡಪ್ಪ, ಅಧ್ಯಕ್ಷ, ವನ್ಯಜೀವಿ ಜಾಗೃತಿ ನಿಸರ್ಗ ಸಂಸ್ಥೆ

ಯಾವುದೇ ಪ್ರಾಣಿ-ಪಕ್ಷಿಗಳ ಜೀವಕ್ಕೆಹಾನಿಯಾಗುವಂತಿಲ್ಲ. ಆ ರೀತಿ ಬಲೆಗಳನ್ನು ಅಳವಡಿಸಿಪ್ರಾಣಿ-ಪಕ್ಷಗಳ ಸಾವಿಗೆಕಾರಣರಾದವರ ಮೇಲೆ ಮುಲಾಜಿಲ್ಲದೇಪ್ರಕರಣ ದಾಖಲಿಸುತ್ತೇವೆ. ಈ ರೀತಿ ಬಲೆಅಳವಡಿಸಿದ್ದ ಮಧುಗಿರಿಯ ಫಾರ್ಮ್ನಲ್ಲಿಪಕ್ಷಿಗಳು ಸಾವನ್ನಪ್ಪಿದ್ದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ.ಅಂತಹ ಯಾವುದೇ ಪ್ರಕರಣ ಇದ್ದರೂ ಅಂತಹವರ ಮೇಲೆ ಕಾನೂನುರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. – ಎಚ್‌.ಸಿ.ಗಿರೀಶ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ, ತುಮಕೂರು

 

– ಚಿ.ನಿ.ಪುರುಷೋತ್ತಮ್‌.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.