ಸಾವಿರ ಅಡಿ ಕೊರೆದರೂ ಬರೀ ಧೂಳು!

ತಾಲೂಕಿನ 43 ಹಳ್ಳಿಗಳಲ್ಲಿ ನೀರಿಗೆ ತತ್ವಾರ „ ಹಳ್ಳಿಗಳ ಬೋರ್‌ವೆಲ್‌ನಲ್ಲಿ ಅಂತರ್ಜಲ ಕುಸಿತ

Team Udayavani, Apr 5, 2021, 4:09 PM IST

ಸಾವಿರ ಅಡಿ ಕೊರೆದರೂ ಬರೀ ಧೂಳು!

ತುಮಕೂರು: ಅಂತರ್ಜಲ ಬತ್ತಿ ಹೋಗುತ್ತಿದೆ. ಸಾವಿರ ಅಡಿವರೆಗೆ ಭೂಮಿ ಕೊರೆದರೂ ಬರೀ ಧೂಳೇ, ಧೂಳುಬರುತ್ತಿದೆ. ಮಳೆಗಾಲ ಆರಂಭವಾದರೂ ಒಂದು ಹನಿಮಳೆ ಬಿದ್ದಿಲ್ಲ. ಬಿಸಿಲಿನ ತಾಪಮಾನ ದಿನೇ ದಿನೆತೀವ್ರಗೊಳ್ಳುತ್ತಿದ್ದು, ಶೈಕ್ಷಣಿಕ, ಧಾರ್ಮಿಕ ನಾಡು ತುಮಕೂರು ತಾಲೂಕಿನಲ್ಲಿ ನೀರಿನ ಸಮಸ್ಯೆ ತೀವ್ರವಾಗುತ್ತಿದೆ.

ತಾಲೂಕಿನ ಕೆಲವು ಗ್ರಾಮಗಳಲ್ಲಿ ಹಾಕಿದ ಬೋರ್‌ ವೆಲ್‌ಗ‌ಳಲ್ಲಿ ಅಂತರ್ಜಲ ಮಟ್ಟದಲ್ಲಿ ಕುಸಿತ ಉಂಟಾಗಿದೆ.ನೀರು ಸಮರ್ಪಕವಾಗಿ ಬರದೇ ಕೆಲವು ಹಳ್ಳಿಗಳಲ್ಲಿ ಬೋರ್‌ವೆಲ್‌ ನಿಂತು ಹೋಗಿವೆ. ಕೆಲವು ಗ್ರಾಮಗಳಲ್ಲಿ ಬೋರ್‌ವೆಲ್‌ನಲ್ಲಿ ನೀರು ಇದ್ದರೂ ವಿದ್ಯುತ್‌ತೊಂದರೆಯಿಂದ ನಿರಂತರವಾಗಿ ನೀರು ಕೊಡಲು ಸಾಧ್ಯವಾಗದೇಕುಡಿವ ನೀರಿನ ಸಮಸ್ಯೆ ಹಲವು ಗ್ರಾಮಗಳಲ್ಲಿ ಕಂಡುಬರುತ್ತಿದೆ.

ಬರೀ ಗ್ರಾಮಗಳಲ್ಲಿ ಅಲ್ಲ, ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲೂ ನೀರಿನ ಸಮಸ್ಯೆ ತಾಂಡವವಾಡುತ್ತಿದೆ. ತುಮಕೂರು, ತಿಪಟೂರು, ಶಿರಾ ನಗರಗಳಲ್ಲಿ, ಮಧುಗಿರಿ, ಪಾವಗಡ, ಚಿಕ್ಕನಾಯಕನಹಳ್ಳಿ, ಕುಣಿಗಲ್‌, ಕೊರಟಗೆರೆ, ಗುಬ್ಬಿ, ತುರುವೇಕೆರೆ ಪಟ್ಟಣಗಳಲ್ಲಿ ನೀರಿನ ಸಮಸ್ಯೆ ಈಗ ಪ್ರಾರಂಭವಾಗಿದೆ.

ತಾಲೂಕುಮಟ್ಟದ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿದ್ದು, 43 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಕಂಡು ಬಂದಿದೆ. ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಬಗೆಹರಿಸಲು ಮುಂದಾಗಿದ್ದಾರೆ. ಮುಂದೆ ಇದೇ ರೀತಿ ಬೇಸಿಗೆ ಹೆಚ್ಚಾದರೆ ಇನ್ನು ಹಲವು ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಈ ಬಗ್ಗೆ ಹೆಚ್ಚು ಗಮನ ಹರಿಸಿ ನೀರಿನ ಸಮಸ್ಯೆ ಬರದಂತೆ ನಿಗಾವಹಿಸುವುದು ಅಗತ್ಯವಾಗಿದೆ.

ನೀರಿನ ಸಮಸ್ಯೆಯಿರುವ ಗ್ರಾಮಗಳು: ತುಮಕೂರುತಾಲೂಕಿನಲ್ಲಿ 43 ಗ್ರಾಮ ಕುಡಿವ ನೀರಿನ ಸಮಸ್ಯೆಇರುವ ಗ್ರಾಮಗಳೆಂದು ಅಧಿಕಾರಿಗಳುಗುರುತಿಸಿದ್ದಾರೆ. ಅವುಗಳೆಂದರೆ ಬೆಳಗುಂಬ,ಬಿದರಕಟ್ಟೆ, ಕಟ್ಟಿಗೊಲ್ಲಹಳ್ಳಿ, ಚನ್ನಿಗಪ್ಪನ ಪಾಳ್ಯ,ಬಳ್ಳಗೆರೆ, ನರಸೀಪುರ, ಕುಂದೂರು ಕ್ರಾಸ್‌, ಬೆಳಗುಂಬತಾಂಡ್ಯ, ಗಂಗನಾಲ, ಕೊಟ್ಟನಹಳ್ಳಿ, ಬಾಣಾವಾರ,ಮೈಲನಹಟ್ಟಿ, ಮಾನಂಗಿ, ಹೊಸೂರು, ಗಂಗಸಂದ್ರ, ಮುಳುಕುಂಟೆ, ಕೋಡೀಪಾಳ್ಯ, ವಿರೂಪಸಂದ್ರ,ಕುರುವಕುಂಟೆ, ಜುಂಜಯ್ಯನ ಪಾಳ್ಯ, ಚಕ್ಕಗೊಲ್ಲಹಳ್ಳಿ, ದೊಡ್ಡಗೊಲ್ಲಹಳ್ಳಿ, ಬೊಮ್ಮನಹಳ್ಳಿ, ಜೆ.ಎಸ್‌.ಪಾಳ್ಯ, ಕಲ್ಲಹಳ್ಳಿ, ಶಂಭೋಹಳ್ಳಿ, ಗೊರಗೊಂಡನಹಳ್ಳಿ, ಕೋರಾ, ಕೊತ್ತಿಹಳ್ಳಿ, ತಮ್ಮಡಿಹಳ್ಳಿ, ಚಿಕ್ಕಕೊರಟಗೆರೆ, ಬೊಮ್ಮನಹಳ್ಳಿ, ನಾಗವಲ್ಲಿ, ಚಿಕ್ಕಗುಂಡಗಲ್ಲು, ಪಾಲಸಂದ್ರ, ಪುರಕಟ್ಟೆ ಕಾವಲ್‌, ಅಪ್ಪಿನಾಯಕನಹಳ್ಳಿ, ಲಿಂಗನಹಳ್ಳಿ, ಹುಚ್ಚಬಸವನಹಳ್ಳಿ, ಯಲ್ಲಾಪುರ, ಅಜ್ಜಗೊಂಡನಹಳ್ಳಿ, ರಂಗನಪಾಳ್ಯ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮವೆಂದು ಗುರುತಿಸಲಾಗಿದೆ

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ :

ತುಮಕೂರು, ಮಧುಗಿರಿ, ಕುಣಿಗಲ್‌ ಸೇರಿದಂತೆ ಇತರೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಲಾಗಿದೆ. ಗ್ರಾಪಂಗಳು 15ನೇಹಣಕಾಸು ಯೋಜನೆ ಶೇ. 25ರಷ್ಟು ಅನುದಾನ ಸಮಪರ್ಕವಾಗಿಬಳಸಬೇಕು ಎಂದು ಗ್ರಾಮೀಣ ನೀರು ಸರಬರಾಜು ಮತ್ತುನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಕೆ.ಮುತ್ತಪ್ಪ ತಿಳಿಸಿದರು. ಕುಣಿಗಲ್‌ ತಾಲೂಕಿನ ಹುಲಿಯೂರು ದುರ್ಗ,ಹುತ್ರಿದುರ್ಗ ಹೋಬಳಿ ವ್ಯಾಪ್ತಿಯಲ್ಲಿ ಕುಡಿವ ನೀರಿನ ಸಮಸ್ಯೆಇದೆ. ಅಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ತಾಲೂಕಿನಲ್ಲಿ43 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿಸಿದರು.

ಖಾಸಗಿ ಬೋರ್‌ ವೆಲ್‌ನಿಂದ ನೀರು :

ತುಮಕೂರು ತಾಲೂಕಿನ ಯಲ್ಲಾಪುರದಲ್ಲಿ ಕುಡಿವ ನೀರಿನಸಮಸ್ಯೆ ಹಿನ್ನೆಲೆ ಅಲ್ಲಿಗೆ ಟ್ಯಾಂಕರ್‌ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ನಾಗವಲ್ಲಿಯಲ್ಲಿಖಾಸಗಿ ಬೋರ್‌ವೆಲ್‌ಸಹಾಯದಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಈಗಸಮಸ್ಯಾತ್ಮಕ ಗ್ರಾಮಗಳಲ್ಲಿಯೂ ನೀರಿನ ಸಮಸ್ಯೆ ಉಲ್ಬಣವಾಗಿತ್ತಿದೆ.

ಕುಡಿವ ನೀರಿನ ಸಮಸ್ಯೆ ಬರದಂತೆ ಅಗತ್ಯಕ್ರಮ ವಹಿಸಲು ಅಧಿಕಾರಿ ಗಳಿಗೆ ಸೂಚನೆ ನೀಡ ಲಾಗಿದೆ. ನೀರಿನಸಮಸ್ಯೆ ಇರುವ ಗ್ರಾಮಗಳಲ್ಲಿ ಗ್ರಾಪಂ ಯಿಂದ 15ನೇಹಣಕಾಸು ಯೋಜನೆಯಲ್ಲಿಶೇ.25ರಷ್ಟು ಹಣವನ್ನುಬಳಸಿ ನೀರಿನ ಸಮಸ್ಯೆ ನೀಗಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.  ● ಡಿ.ಸಿ.ಗೌರಿಶಂಕರ್‌, ಗ್ರಾಮಾಂತರ ಶಾಸಕ

ಹಲವು ಗ್ರಾಮೀಣ ಪ್ರದೇಶದಲ್ಲಿಅಂತರ್ಜಲ ಕುಸಿದು ಬೋರ್‌ವೆಲ್‌ಗಳಲ್ಲಿ ನೀರಿನ ಪ್ರಮಾಣ ಕಡಿಮೆ ಆಗುತ್ತಿದೆ.ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ಮೂಲಕ ನೀರಿನ ಸಮಸ್ಯೆ ನೀಗಿಸಲು ಕ್ರಮ ಕೈಗೊಂಡಿದ್ದೇವೆ. ●ಕೆ.ಮುತ್ತಪ್ಪ, ಕಾರ್ಯಪಾಲಕ ಎಂಜಿನಿಯರ್‌

 

– ಚಿ.ನಿ.ಪುರುಷೋತ್ತಮ್‌.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.