ಕೆರೆಗಳ ಜೋಡಣೆಗೆ ಯೋಜನೆ ಸಿದ್ಧ

ಮೂಲ ಸೌಲಭ್ಯ ಕಲ್ಪಿಸುವುದರಿಂದ ಕೆರೆಯ ಅಂದ ಹೆಚ್ಚಳ: ಶಾಸಕ ಜಿ.ಬಿ.ಜ್ಯೋತಿ ಗಣೇಶ್‌

Team Udayavani, Jun 6, 2019, 12:07 PM IST

tk-tdy-1..

ತುಮಕೂರು ನಗರದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ನಡೆದ ನಗರದ ಗೆದ್ದಲಹಳ್ಳಿಯ ಗಾರೆನರಸಯ್ಯನಕಟ್ಟೆ ಕೆರೆಯನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಶಾಸಕ ಜಿ.ಬಿ.ಜ್ಯೋತಿ ಗಣೇಶ್‌ ಚಾಲನೆ ನೀಡಿದರು.

ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 8 ಕೆರೆಗಳ ಜೋಡಣೆ ಕಾರ್ಯಕ್ಕೆ ಯೋಜನೆ ಸಿದ್ಧಪಡಿಸ ಲಾಗಿದೆ ಎಂದು ಶಾಸಕ ಜಿ.ಬಿ.ಜ್ಯೋತಿ ಗಣೇಶ್‌ ತಿಳಿಸಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಹಾನಗರಪಾಲಿಕೆ, ಮೈತ್ರಿ, ಕನ್ನಡ ಸಾತ್ಯ ಪರಿಷತ್‌, ಪತಂಜಲಿ ಶಿಬಿರ, ನಾಗರಿಕ ಹಿತರಕ್ಷಣಾ ವೇದಿಕೆ, ಕಲ್ಪತರು ನಾಗರಿಕ ವೇದಿಕೆ ಮತ್ತಿತರ ಸ್ವಯಂ ಸೇವಾ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ನಗರದ 30ನೇ ವಾರ್ಡ್‌ ಗೆದ್ದಲಹಳ್ಳಿಯ ಗಾರೆನರಸಯ್ಯನಕಟ್ಟೆ ಕೆರೆಯನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದ ಅವರು ಮಾತನಾಡಿದರು.

ಮುಳ್ಳು ಬೇಲಿಗಳನ್ನು ತೆರವುಗೊಳಿಸಿ: ಸ್ಮಾರ್ಟ್‌ಸಿಟಿ ಯೋಜನೆಯಡಿ ನಗರದ ಸುತ್ತಮುತ್ತ ಇರುವ 8 ಕೆರೆಗಳನ್ನು ಜೋಡಿಸುವ ಕಾರ್ಯಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ಪಾಲಿಕೆ ವತಿಯಿಂದ ಕೈಗೊಂಡಿ ರುವ ಗಾರೆನರಸಯ್ಯನಕಟ್ಟೆ ಕೆರೆಯ ಸ್ವಚ್ಛತೆಯನ್ನು ಪಾಲಿಕೆಯ ಪೌರ ಕಾರ್ಮಿಕರು, ಅಧಿಕಾರಿ- ಸಿಬ್ಬಂದಿಗಳ ಸಹಕಾರದಲ್ಲಿ ಇಂದಿನಿಂದ ಹತ್ತು ದಿನ ಗಳವರೆಗೆ ನಡೆಸಲಾಗುವುದು. ಕೆರೆಗಳ ಸುತ್ತ ಇರುವ ಮುಳ್ಳು ಬೇಲಿಗಳನ್ನು ತೆರವುಗೊಳಿಸಿ, ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಕೆರೆಯ ಅಂದವನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಭೂಬಾಲನ್‌, ಆರೋಗ್ಯಾಧಿಕಾರಿ ಡಾ. ನಾಗೇಶ್‌, ಪಾಲಿಕೆ ಸದಸ್ಯ ವಿಷ್ಣುವರ್ಧನ ಮತ್ತಿತರರು ಉಪಸ್ಥಿತರಿದ್ದರು.

ಗಿಡಗಳನ್ನು ನೆಟ್ಟು ಸಂಭ್ರುಸಿದ ಸದಸ್ಯರು: ಪಾಲಿಕೆ ವ್ಯಾಪ್ತಿಯ ಎಲ್ಲಾ 35 ವಾರ್ಡ್‌ಗಳಲ್ಲಿ ಬುಧವಾರ ಆಯಾ ಸದಸ್ಯರು ತಮ್ಮ ವಾರ್ಡ್‌ ವ್ಯಾಪ್ತಿಯಲ್ಲಿ ಹೊಂಗೆ, ಬೇವು ಮತ್ತಿತರ ತಲಾ 10 ಸಸಿಗಳನ್ನು ನೆಟ್ಟು ವಿಶ್ವ ಪರಿಸರ ದಿನವನ್ನು ಆಚರಿಸಿ ಸಂಭ್ರುಸಿದರು. ವಾರ್ಡ್‌ ಸಂಖ್ಯೆ 11ರ ರಾಜೀವ್‌ಗಾಂಧಿ ನಗರದ ಪಾರ್ಕ್‌ನಲ್ಲಿ ಮೇಯರ್‌ ಲಲಿತಾ ರವೀಶ ಅವರು ಸಾಂಕೇತಿಕವಾಗಿ ಗಿಡ ನೆಟ್ಟು ಪರಿಸರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಗಿರಿಜಾ ಧನಿಯಾ ಕುಮಾರ್‌, ಮಂಜುಳ ಆದರ್ಶ್‌, ದೀಪಶ್ರೀ ಮಹೇಶ್‌ ಮತ್ತಿತರರು ಹಾಜರಿದ್ದರು.

ರೈತರು ಬೇವು, ಹೊಂಗೆ ಮರ ಬೆಳೆಸಿ:

ಮನುಷ್ಯ ಸೇರಿದಂತೆ ಜೀವ ಸಂಕುಲಕ್ಕೆ ಅತ್ಯಗತ್ಯವಾಗಿ ಬೇಕಿರುವ ಆಮ್ಲಜನಕ ವನ್ನು ಹೆಚ್ಚಾಗಿ ಹೊರ ಸೂಸುವ ಬೇವು ಮತ್ತು ಹೊಂಗೆ ಮರಗಳನ್ನು ರೈತರು ತಮ್ಮ ಜಮೀನಿನ ಬದುವಿನಲ್ಲಿ ಬೆಳೆಸಬೇಕು ಎಂದು ವಕೀಲ ಜ್ಞಾನಮೂರ್ತಿ ಸಲಹೆ ನೀಡಿದರು.

ಹಂದನಕೆರೆ ಹೋಬಳಿಯ ಗೂಬೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಸಸಿ ನೆಡುವ ಕಾರ್ಯ ಕ್ರಮದಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮರ ಗಳನ್ನು ಕಡಿಯುತ್ತಿರುವುದರಿಂದ ಭೂಮಿಯ ತಾಪ ಮಾನ ಹೆಚ್ಚಾಗಿ ಅನೇಕ ಪ್ರಕೃತಿ ವಿಕೋಪಗಳು ಸಂಭವಿ ಸುತ್ತಿವೆ.

ಈ ತಾಪಮಾನ ಹೀಗೆಯೇ ಹೆಚ್ಚಾ ಗುತ್ತಾ ಹೋದರೆ ಜಗತ್ತಿನ ಶೇ.25ರಷ್ಟು ತೇವಾಂಶ ಒಣಗಿ ಜೀವ ಸಂಕುಲ ಬದುಕುವುದೇದುತ್ಸರವಾಗುತ್ತದೆ. ಹಾಗಾಗಿ ಎಲ್ಲರೂ ಎಚ್ಚೆತ್ತುಕೊಂಡು ಗಿಡಮರಗಳನ್ನು ಬೆಳೆಸಬೇಕು ಎಂದರು.

ಮನೆಗಳ ಸುತ್ತಮುತ್ತ ಕೈ ತೋಟ ಮಾಡಿ: ವೈದ್ಯೆ ಎನ್‌.ರಾಧಿಕಾ ಮಾತನಾಡಿ, ಮನೆಗಳ ಸುತ್ತಮುತ್ತ ಕೈ ತೋಟ ಮಾಡಬೇಕು. ಮನೆಗೆ ಅಗತ್ಯವಿರುವ ಹಣ್ಣಿನ ಗಿಡಗಳನ್ನಾದರೂ ಬೆಳೆದು ವೈಯಕ್ತಿಕ ಆರೋಗ್ಯದ ಜೊತೆಗೆ ಪರಿಸರದ ಆರೋಗ್ಯ ಕಾಪಾಡ ಬಹುದಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಮನೆ ಸುತ್ತಮುತ್ತಲ ಪ್ರದೇಶ ವನ್ನು ವ್ಯರ್ಥವಾಗಿ ಬಿಡದೆ ಮರಗಿಡಗಳನ್ನು ಬೆಳಸಿ ಎಂದು ಕಿವಿಮಾತು ಹೇಳಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಗೋವಿಂದರಾಜು, ಗ್ರಾಪಂ ಸದಸ್ಯರಾದ ಸುರೇಶ್‌, ಜಯಲಕ್ಷಮ್ಮ ಇತರ‌ರಿದ್ದರು.

ಟಾಪ್ ನ್ಯೂಸ್

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.