ಭೂಮಿಗೆ ಯೋಗ್ಯ ಬೆಲೆ ಸಿಗುವವರೆಗೂ ಭೂಮಿ ನೀಡಲ್ಲ


Team Udayavani, Jan 30, 2019, 7:29 AM IST

bhoomige.jpg

ತಿಪಟೂರು: ರೈತರ ಭೂಮಿಗೆ ಯೋಗ್ಯ ಬೆಲೆ ಸಿಗುವವರೆಗೂ ಹಾಗೂ ರೈತರ ಅನುಮತಿ ಇಲ್ಲದೆ ಜಮೀನುಗಳಲ್ಲಿ ರಸ್ತೆ ಕಾಮಗಾರಿ ಪ್ರಾರಂಭ ಮಾಡಲು ಬಿಡುವುದಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ 206ರ ಸಂತ್ರಸ್ತರ ಹೋರಾಟ ಸಮಿತಿ ಹಾಗೂ ರೈತ ಕಾರ್ಮಿಕ ಸಂಘಟನೆಗಳ ಪದಾಧಿ ಕಾರಿಗಳು ಅಧಿಕಾರಿಗಳಿಗೆ ಎಚ್ಚರಿಸಿದರು.

ನಗರದ ರೈತಭವನದಲ್ಲಿ ರಾಷ್ಟ್ರೀಯ ಹೆದ್ದಾರಿ 206ರ ಸಂತ್ರಸ್ತರ ಹೋರಾಟ ಸಮಿತಿ ಹಾಗೂ ರೈತ ಕಾರ್ಮಿಕ ಸಂಘಟನೆಯಿಂದ ನಡೆದ ಸುದ್ದಿ ಗೋಷ್ಠಿಯಲ್ಲಿ ಆರ್‌ಕೆಎಸ್‌ ಸಂಚಾಲಕ ಎನ್‌.ಎಸ್‌.ಸ್ವಾಮಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬೈಪಾಸ್‌ ರಸ್ತೆ ನಿರ್ಮಾಣ ಮಾಡಲು ರೈತರ ಜಮೀನುಗಳಿಗೆ ಸರಿಯಾದ ಪರಿಹಾರ ಹಣ ನೀಡದಿದ್ದ ಕಾರಣ ಉಪವಿಭಾಗಾಧಿಕಾರಿ ಕಚೇರಿಯ ಎದುರು ನಿರಂತರ ಪ್ರತಿಭಟನೆ ಹಮ್ಮಿ ಕೊಳ್ಳಲಾಗಿತ್ತು.

ಆದರೆ, ಸಂಬಂಧಿಸಿದ ಪ್ರಾದೇಶಿಕ ಅಧಿಕಾರಿ, ಜಿಲ್ಲಾಧಿಕಾರಿ ಹಾಗೂ ವಿಶೇಷ ಭೂಸ್ವಾಧೀನ ಅಧಿಕಾರಿಗಳೊಂದಿಗೆ ರೈತರ ಸಮ್ಮುಖ ದಲ್ಲಿ ಚರ್ಚಿಸಿ ನ್ಯಾಯ ಒದಗಿಸಲಾಗುತ್ತದೆ ಎಂದು ತಿಳಿಸಿದ್ದರಿಂದ ಪ್ರತಿಭಟನೆ ತಾತ್ಕಾಲಿಕವಾಗಿ ಹಿಂತೆಗೆದುಕೊಳ್ಳಲಾಗಿತ್ತು. ಇದರ ವಿಚಾರವಾಗಿ ತಿಪಟೂರು ಡಿವೈಎಸ್‌ಪಿ ಕಲ್ಯಾಣ್‌ಕುಮಾರ್‌ ನಮ್ಮೊಂದಿಗೆ ಮಾತನಾಡಿ ಜ.31ರ ನಂತರ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಇಲ್ಲಿಗೆ ಬಂದು ರೈತ ರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳ ಲಿದ್ದಾರೆ ಎಂಬ ಭರವಸೆ ನೀಡಿದ್ದು, ರೈತರೆಲ್ಲರೂ ಚರ್ಚಿಸಿ ತಾಳ್ಮೆಯಿಂದ ಕಾಯುತ್ತಿದ್ದೇವೆ ಎಂದು ತಿಳಿಸಿದರು.

ಉಗ್ರ ಹೋರಾಟ: ಒಂದು ವೇಳೆ ಸಭೆ ವಿಫ‌ಲ ವಾದರೆ ಉಗ್ರ ಹೋರಾಟ ಮಾಡಲಾಗುತ್ತದೆ. ಗುಬ್ಬಿ ತಾಲೂಕಿನ ರಾಯಬಾಗದಲ್ಲಿ ನೋಟಿಸ್‌ ನೀಡದೆ ರೈತರ ಜಮೀನುಗಳಲ್ಲಿ ಕಾಮಗಾರಿ ಪ್ರಾರಂಭಿಸ ಲಾಗಿದೆ. ರೈತರಿಗೆ ಬರಬೇಕಾದ ಪರಿಹಾರದ ಹಣ ಕೈಸೇರುವವರೆಗೂ ಕಾಮಗಾರಿ ನಡೆಯಲು ಬಿಡು ವುದಿಲ್ಲ. ಅಲ್ಲದೇ ಭೂಮಿ ಕಳೆದುಕೊಂಡಿರುವ ನೂರಾರು ರೈತರು ಸಂಕಷ್ಟದಲ್ಲಿದ್ದಾರೆ.

ಈ ಬಗ್ಗೆ ವಿವಿಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು ನಮ್ಮ ನೋವಿನ ಮನವಿ ನೀಡಲಾಗುತ್ತದೆ. ಗ್ರಾಪಂ ಅಡಿಯಲ್ಲಿ ಬರುವ ಭೂಮಿಗಳನ್ನು ಗ್ರಾಮಗಳೆಂದು ಪರಿ ಗಣಿಸಬೇಕೆಂದು ಹಾಗೂ ಬೈಪಾಸ್‌ ನಿರ್ಮಾಣ ಕೈಬಿಟ್ಟು ಫ್ಲೈಓವರ್‌ ನಿರ್ಮಾಣ ಮಾಡಿದರೆ ರೈತರ ಕೃಷಿ ಭೂಮಿಗಳು ಉಳಿಯುತ್ತವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಚಿಂತನೆ ನಡೆಸಬೇಕೆಂದರು.

ಸುದ್ದಿಗೋಷ್ಠಿಯಲ್ಲಿ ರೈತಸಂಘದ ಬೆನ್ನಾಯ್ಕನಹಳ್ಳಿ ದೇವರಾಜು, ತಿಮ್ಮಲಾಪುರ ದೇವರಾಜು, ಆರ್‌ಕೆಎಸ್‌ ಲೋಕೇಶ್‌, ಹುಚ್ಚಗೊಂಡನಹಳ್ಳಿ ಲೋಕೇಶ್‌, ಶ್ರೀಕಾಂತ್‌, ಮನೋಹರ್‌, ಅಶೋಕ್‌, ಶಿವಲಿಂಗಯ್ಯ, ನಂಜಾಮರಿ ಸೇರಿದಂತೆ ಬೈರ ನಾಯಕನಹಳ್ಳಿ, ಮಾದೀಹಳ್ಳಿ, ಹುಚ್ಚಗೊಂಡನಹಳ್ಳಿ, ಈಡೇನಹಳ್ಳಿ, ಶೆಟ್ಟಿಹಳ್ಳಿ, ಕರಡಿ ಗ್ರಾಮದ ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.