ಜಮೀನು ಒತ್ತುವರಿ: ಸ್ವಾಮೀಜಿ ಮೇಲೆ ದುಷ್ಕರ್ಮಿಗಳ ಹಲ್ಲೆ
Team Udayavani, Jun 30, 2020, 6:43 AM IST
ಕುಣಿಗಲ್: ಮಠದ ಜಮೀನು ಒತ್ತುವರಿ ಮಾಡಿಕೊಂಡಿರುವ ಕಿಡಿಗೇಡಿಗಳು ಸ್ವಾಮೀಜಿ ಮೇಲೆ ಹಲ್ಲೆ ಮಾಡಿ, ಮಠದ ಮೇಲೆ ಕಲ್ಲು ತೂರಾಟ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ತಾಲೂಕಿನ ಅಲ್ಕೆರೆ ಸಿದ್ಧಗಂಗಾ ಶಾಖಾ ಮಠದಲ್ಲಿ ಭಾನುವಾರ ರಾತ್ರಿ ನಡೆದಿದೆ. ತಾಲೂಕಿನ ಸಿದ್ಧಗಂಗಾ ಶಾಖಾ ಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಹಲ್ಲೆಗೊಳಗಾದವರು.
ಅಲ್ಕೆರೆ ಸಿದ್ಧಗಂಗಾ ಮಠದ ಹೆಸರಿನಲ್ಲಿ 20 ಎಕರೆ ಜಮೀನಿದ್ದು, ಈ ಪೈಕಿ ಗ್ರಾಮಸ್ಥರ ಮನವಿ ಮೇರೆಗೆ ಲಿಂಗೆ„ಕ್ಯ ಶಿವಕುಮಾರ ಮಹಾ ಸಾಮೀಜಿ ಅವರು ಗ್ರಾಮದ ಸರಕಾರಿ ಪ್ರೌಢಶಾಲೆಗೆ 2 ಎಕರೆ ಜಮೀನನ್ನು ದಾನವಾಗಿ ನೀಡಿದ್ದಾರೆ. ಉಳಿಕೆ ಜಮೀನಿನಲ್ಲಿ ಅಕ್ಕಪಕ್ಕದ ರೈತರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಅಲ್ಕೆರೆ ಸಿದ್ಧಗಂಗಾ ಮಠದ ಸ್ವಾಮೀಜಿ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅಗತ್ಯ ದಾಖಲಾತಿಗಳನ್ನು ಸಿದ್ಧಪಡಿಸಿಕೊಂಡು ಸರ್ವೆ ಮಾಡಿಸಿ ಒತ್ತುವರಿ ತೆರವಿಗೆ ಮುಂದಾಗಿದ್ದರು.
ಈ ಸಂಬಂಧ ಸರ್ವೆ ಕಾರ್ಯವೂ ಮುಗಿದು ಒತ್ತವರಿ ತೆರವು ಮಾಡಿಕೊಡಲು ಒತ್ತು ವರಿದಾರರಿಗೂ ತಿಳಿಸಲಾಗಿತ್ತು. ಭಾನು ವಾರ ಸಂಜೆ ಮಠದ ಜಮೀನು ಹದ್ದು ಬಸ್ತು ಮಾಡಿಕೊಳ್ಳಲು ಸ್ವಾಮೀಜಿ ಕೆಲಸ ಮಾಡಿಸುವ ವೇಳೆ ಒತ್ತುವರಿದಾರರು ಏಕಾಏಕಿ ದಾಳಿ ಮಾಡಿ ಸ್ವಾಮೀಜಿ ಮೇಲೆ ಹಲ್ಲೆ ನಡೆಸಿ ಮಠದ ಮೇಲೆ ಕಲ್ಲು ತೂರಿ ಮಠದ ಕಿಟಕಿ ಗಾಜುಗಳಿಗೆ ಹಾನಿ ಮಾಡಿದ್ದಾರೆ.
ಸಾಮೀಜಿ ಅವರಿಗೆ ಯಾವುದೇ ಗಾಯವಾಗಿಲ್ಲ. ಸಾಮೀಜಿ ಮೇಲೆ ಹಲ್ಲೆ ನಡೆಸಿ ಮಠಕ್ಕೆ ಕಲ್ಲು ತೂರಿರುವ ಒತ್ತುವರಿದಾರರ ವಿರುದ್ಧ ಕುಣಿಗಲ್ ಪೋಲಿಸರು ಪ್ರಕರಣ ದಾಖ ಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ. ವಿಷಯ ತಿಳಿದು ಸೋಮವಾರ ಶಾಸಕ ಡಾ.ರಂಗನಾಥ್, ಡಿವೈಎಸ್ಪಿ ಜಗದೀಶ್ ಸ್ಥಳಕ್ಕೆ ಭೇಟಿ ನೀಡಿ ಸ್ವಾಮೀಜಿ ಅವ ರೊಂದಿಗೆ ಗ್ರಾಮಸ್ಥರ ಸಭೆ ನಡೆಸಿ ಒತ್ತುವರಿ ಯಾಗಿರುವ ಮಠದ ಜಮೀನು ತೆರವು ಮಾಡಿಕೊಡಬೇಕೆಂದು ಸೂಚಿಸಿದ್ದಾರೆ.