ಕೊರಟಗೆರೆ ಪಟ್ಟಣದಲ್ಲಿ ಕಾನೂನು ಅರಿವು ಜಾಥಾ

ಭಾರತ ದೇಶದ ಪ್ರತಿ ಪ್ರಜೆಗೂ ಕಾನೂನು ಅರಿವು ಅಗತ್ಯ: ನ್ಯಾಯಾಧೀಶ ಶ್ರೀನಾಥ್

Team Udayavani, Nov 2, 2022, 6:42 PM IST

11-fsd

ಕೊರಟಗೆರೆ: ಭಾರತ ದೇಶದ ಪ್ರತಿಯೊಬ್ಬ ನಾಗರಿಕನಿಗೆ ಸಂವಿಧಾನದ ಕಾನೂನಿನ ಅರಿವು ಅಗತ್ಯ. ದೇಶದ ಪ್ರತಿಯೊಬ್ಬ ಪ್ರಜೆಯ ತಮ್ಮ ಹಕ್ಕು ಮತ್ತು ಕರ್ತವ್ಯದ ಬಗ್ಗೆ ಕಾನೂನಿನ ಅರಿವು ಪಡೆಯಬೇಕಿದೆ. ಸೆ.31ರಿಂದ ನ.13 ರವರೆಗೆ ಕಾನೂನು ಅರಿವಿನ ಜಾಥಾ ಕಾರ್ಯಕ್ರಮ ಗ್ರಾಪಂ ಮಟ್ಟದಲ್ಲಿಯು ನಡೆಯುತ್ತಿದೆ ಎಂದು ಕೊರಟಗೆರೆ ಪಟ್ಟಣದ ಜೆಎಂಎಫ್‌ಸಿ ಸಿವಿಲ್ ನ್ಯಾಯಾಧೀಶ ಜೆ.ಎನ್.ಶ್ರೀನಾಥ್ ತಿಳಿಸಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊರಟಗೆರೆ ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ವತಿಯಿಂದ ಕೊರಟಗೆರೆ ಪಟ್ಟಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಉಚಿತ ಕಾನೂನು ನೆರವು ಮತ್ತು ಸಲಹೆ ಕಾರ್ಯಕ್ರಮದ ಜಾಥಾವನ್ನು ಉದ್ದೇಶಿಸಿ ಮಾತನಾಡಿದರು.

ಬಡಜನರ ಅನುಕೂಲಕ್ಕಾಗಿ ರಾಷ್ಟ್ರ ಮಟ್ಟದಿಂದ ಗ್ರಾಪಂಯ ಮೂಲಕ ಪ್ರತಿ ಗ್ರಾಮಕ್ಕೂ ಕಾನೂನು ಅರಿವು ಜಾಗೃತಿ ನಡೆಯುತ್ತೀದೆ. ಉಚಿತ ಕಾನೂನು ಅರಿವು ಜಾಥದಿಂದ ಆಗುವ ಉಪಯೋಗದ ಬಗ್ಗೆ ಪ್ರತಿಯೊಬ್ಬ ನಾಗರೀಕರು ಕಾಳಜಿ ವಹಿಸಬೇಕಿದೆ. ಜನತಾ ನ್ಯಾಯಾಲಯಗಳ ಮೂಲಕ ಪ್ರಕರಣ ಇತ್ಯರ್ಥಗೊಳಿಸಿ ಜನರಿಗೆ ತ್ವರಿತವಾಗಿ ನ್ಯಾಯ ದೊರಕಿಸುವ ಲೋಕಾ ಅದಾಲತ್ ಕಾರ್ಯಕ್ರಮವು ನ್ಯಾಯಾಲಯದಲ್ಲಿ ನ.೧೨ರಂದು ನಡೆಯಲಿದೆ ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಬಿ.ಎಲ್.ನಾಗರಾಜು ಮಾತನಾಡಿ ನ್ಯಾಯಾಲಯದಲ್ಲಿ ೩ತಿಂಗಳಿಗೊಮ್ಮೆ ರಾಷ್ಟ್ರೀಯ ಲೋಕಾ ಅದಾಲತ್ ಕಾರ್ಯಕ್ರಮ ಜರುಗಲಿದೆ. ನ.೧೧ರಂದು ಕೊರಟಗೆರೆ ನ್ಯಾಯಾಲಯದಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಷ್ಟ್ರೀಯ ಲೋಕಾ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಲೋಕಾ ಅದಾಲತ್ ಕಾರ್ಯಕ್ರಮದಲ್ಲಿ ಎಲ್ಲಾ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಮಾಡುವ ಉದ್ದೇಶದಿಂದ ಕಾನೂನು ಅರಿವು ಜಾಥಾ ನಡೆಯುತ್ತೀದೆ ಎಂದು ತಿಳಿಸಿದರು.

ವಕೀಲರ ಸಂಘದ ಹಿರಿಯ ವಕೀಲರಾದ ಟಿ.ಕೃಷ್ಣಮೂರ್ತಿ ಮಾತನಾಡಿ ಸಂವಿಧಾನದ ಅಡಿಯಲ್ಲಿ ಸರ್ವರಿಗೂ ನ್ಯಾಯ ಒದಗಿಸುವ ಉದ್ದೇಶದಿಂದ ಉಚಿತ ಕಾನೂನು ನೆರವು ಮತ್ತು ಅರಿವು ಜಾಥಾ ನಡೆಯುತ್ತೀದೆ. ರಾಷ್ಟ್ರೀಯ ರಾಜ್ಯ ಮಟ್ಟದಿಂದ ಗ್ರಾಪಂಯವರೆಗೆ ಉಚಿತ ಕಾನೂನು ನೆರವಿನ ಸೇವೆಯನ್ನು ಎಲ್ಲಾ ವರ್ಗದ ಬಡಜನತೆ ಪಡೆದು ಕೊಳ್ಳಬೇಕಿದೆ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಶಿವಕುಮಾರ್, ಖಜಾಂಚಿ ಮಲ್ಲಿಕಾರ್ಜುನ್, ಜಂಟಿ ಕಾರ್ಯದರ್ಶಿ ಹುಸೇನ್‌ಪಾಷ, ಸಂತೋಷ್ ಲಕ್ಷ್ಮಿ ವಕೀಲರಾದ ಜಿ.ಎಂ.ಕೃಷ್ಣಮೂರ್ತಿ, ಶಿವರಾಮಯ್ಯ, ನಾಗೇಂದ್ರಪ್ಪ, ಪುಟ್ಟರಾಜಯ್ಯ, ಸಂಜೀವರಾಜು, ನರಸಿಂಹರಾಜು, ಕೃಷ್ಣಮೂರ್ತಿ, ರಾಮಚಂದ್ರಪ್ಪ, ಕೃಷ್ಣಪ್ಪ, ಅನಿಲ್, ಮಧೂಸೂಧನ್, ಕೆ.ಸಿ.ನಾಗರಾಜು, ವೃಷಬೇಂದ್ರಸ್ವಾಮಿ, ಸಂತೋಷ, ಹನುಮಂತರಾಜು, ತಿಮ್ಮರಾಜು ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.