![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ವಿಜ್ಞಾನ ಸಮಾಜದ ಬೆಳವಣಿಗೆಗೆ ಪೂರಕವಾಗಲಿ
Team Udayavani, Dec 31, 2019, 3:00 AM IST
![vijnana-sam_](https://www.udayavani.com/wp-content/uploads/2019/12/vijnana-sam_-620x337.jpg)
ತುಮಕೂರು: ವಿಜ್ಞಾನದ ಆವಿಷ್ಕಾರಗಳು ಮನುಷ್ಯ ಹಾಗೂ ಸಮಾಜದ ಬೆಳವಣಿಗೆಗೆ ಪೂರಕವಾಗಬೇಕು ಹೊರತು ಮಾರಕವಾಗಬಾರದು ಎಂದು ಶ್ರೀ ಸಿದ್ಧಗಂಗಾ ಮಠದ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು. ನಗರದ ಶ್ರೀ ಸಿದ್ಧಗಂಗಾ ಮಠದಲ್ಲಿ ಜಿಲ್ಲಾಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2019-20 ನೇ ಸಾಲಿನ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ವಿಜ್ಞಾನವೆಂಬುದು ಸತ್ಯದ ಅನ್ವೇಷಣೆಯಾಗಿದ್ದು, ವಿಜ್ಞಾನದ ನೂತನ ಆವಿಷ್ಕಾರಗಳು ಮನುಷ್ಯನ ಯೋಗಕ್ಷೇಮಕ್ಕೆ ಅನುಗುಣವಾಗಿರಬೇಕು. ವಿಜ್ಞಾನದ ಆವಿಷ್ಕಾರಗಳಿಂದ ಸೌಲಭ್ಯಗಳು ಹೆಚ್ಚಾದಂತೆ ಮನುಷ್ಯ ಸೋಮಾರಿತನ ಬೆಳೆಸಿಕೊಂಡು ಆರೋಗ್ಯ ಕೆಡಿಸಿಕೊಳ್ಳುತ್ತಿದ್ದಾನೆ. ವಿಜ್ಞಾನದ ಆವಿಷ್ಕಾರಗಳು ಎಷ್ಟು ಬೇಕು ಅಷ್ಟನ್ನೇ ಬಳಸಬೇಕು ಎಂದು ಕಿವಿಮಾತು ಹೇಳಿದರು.
ದೇವರ ಸ್ವರೂಪ: ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಮಾತನಾಡಿ, ಜೀವನದಲ್ಲಿ ನೈಜ ದೇವರ ನೋಡಲು ಸಾಧ್ಯವಿಲ್ಲ. ಆದರೆ, ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಲಕ್ಷಾಂತರ ಭಕ್ತಗಣಕ್ಕೆ ಮಾರ್ಗದರ್ಶನ ನೀಡುತ್ತ ನಡೆದಾಡುವ ದೇವರ ಸ್ವರೂಪರಾಗಿದ್ದರು ಎಂದು ಹೇಳಿದರು.
ವಸ್ತು ಪ್ರದರ್ಶನದಲ್ಲಿ ಮಕ್ಕಳ ಶ್ರಮ ಅತ್ಯುನ್ನತವಾದುದ್ದಾಗಿದೆ. ಶಿಕ್ಷಕರು, ಪೋಷಕರು ಮಕ್ಕಳಿಗೆ ಸದಾ ಪ್ರೋತ್ಸಾಹ ನೀಡಬೇಕು. ಸ್ವರ್ಧಾತ್ಮಕ ಯುಗದಲ್ಲಿ ಖಾಸಗಿ ಶಾಲೆ ಮಕ್ಕಳು ವಿಜ್ಞಾನ ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಸರ್ಕಾರಿ ಶಾಲೆ ಮಕ್ಕಳು ವಿಜ್ಞಾನ ಅಭ್ಯಸಿಸಲು ಹಿಂಜರಿಯುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ಸರ್ಕಾರ ಮಕ್ಕಳಿಗೆ ಇಲಾಖೆಯಿಂದ ಜಾಗೃತಿ ಮೂಡಿಸಬೇಕಾಗಿದೆ ಎಂದು ಸಲಹೆ ನೀಡಿದರು.
ಜಿಪಂ ಉಪಾಧ್ಯಕ್ಷೆ ಶಾರದಾ, ಜಿಪಂ ಸದಸ್ಯ ನರಸಿಂಹಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಂ.ಆರ್. ಕಾಮಾಕ್ಷಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಅಧ್ಯಕ್ಷ ಷಣ್ಮುಖಯ್ಯ, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ರವೀಶ್, ಸೇರಿ ಜಿಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪನ್ಯಾಸಕರು, ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಶಿಕ್ಷಕರು ಮಕ್ಕಳು ಮತ್ತಿತರರಿದ್ದರು.
ಕಣ್ಮನ ಸೆಳೆದ ಪ್ರದರ್ಶನ: ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನಾನಾ ಶಾಲಾ ವಿದ್ಯಾರ್ಥಿಗಳು ಮೂಡಿಸಿದ್ದ ವಸ್ತು ಪ್ರದರ್ಶನ ಕಣ್ಮನ ಸೆಳೆಯಿತು. ಸುಸ್ಥಿರ ಕೃಷಿ ಪದ್ಧತಿ, ಭವಿಷ್ಯದಲ್ಲಿ ಸಾರಿಗೆ ಮತ್ತು ಸಂಪರ್ಕ, ಭವಿಷ್ಯದ ಸಾರಿಗೆ ಮತ್ತು ಸಂವಹನ, ಕೈಗಾರಿಕಾ ಅಭಿವೃದ್ಧಿ, ನೈಸರ್ಗಿಕ ಸಂಪನ್ಮೂಲ ನಿರ್ವಹಣೆ, ಗಣಿತದ ಮಾದರಿ, ಸೋಲಾರ್ ಆಧಾರಿತ ಬಸ್, ಏರ್ಪೊರ್ಟ್, ಮೆಟ್ರೋರೈಲು, ಸ್ಮಾರ್ಟ್ಸಿಟಿ, ಸಮರ್ಥನೀಯ ಕೃಷಿ ಆಚರಣೆ ಸೇರಿ ವಿವಿಧ ಪ್ರದರ್ಶನಗಳು ಆಕರ್ಷಿಸುತ್ತಿದ್ದವು.
ಮಕ್ಕಳಲ್ಲಿ ಶಾಸ್ತ್ರೀಯ ವಿಜ್ಞಾನ ಅಭ್ಯಸಿಸುವ ಗುಣ ಬೆಳೆಸಬೇಕು. ಮಕ್ಕಳಲ್ಲಿ ಉತ್ತಮ ವಿಜ್ಞಾನಿಯಾಗಬೇಕೆಂಬ ಆಸಕ್ತಿ ಕುಂದುತ್ತಿದೆ. ಆದ್ದರಿಂದ ಶಿಕ್ಷಕರು, ಪೋಷಕರು ವಿಜ್ಞಾನಿಯಾಗುವ ಆಸಕ್ತಿ ಮಕ್ಕಳ ಮನಸ್ಸಲ್ಲಿ ಬಿತ್ತಬೇಕು. ಮಕ್ಕಳಲ್ಲಿ ಶಾಸ್ತ್ರೀಯ ವಿಜ್ಞಾನ ಅಭ್ಯಸಿಸುವ ಗುಣ ಬೆಳೆಸಬೇಕು.
-ಶ್ರೀ ಸಿದ್ಧಲಿಂಗ ಸ್ವಾಮೀಜಿ, ಸಿದ್ಧಗಂಗಾ ಮಠಾಧ್ಯಕ್ಷ
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.