ವಸ್ತು ಪ್ರದರ್ಶನ ಹೊಸತನದಿಂದ ಕೂಡಿರಲಿ


Team Udayavani, Nov 10, 2019, 6:20 PM IST

tk-tdy-2

ತುಮಕೂರು: ಶಿರಾ ತಾಲೂಕು ಪಟ್ಟನಾಯಕನ ಹಳ್ಳಿಯಲ್ಲಿ 2020ರ ಜ.16ರಿಂದ 22ರವರೆಗೆ ನಡೆಯಲಿರುವ ಶ್ರೀ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಜಾತ್ರೆಯಲ್ಲಿ ವಿವಿಧ ಇಲಾಖೆಗಳಿಂದ ಏರ್ಪಡಿಸುವ ವಸ್ತುಪ್ರದರ್ಶನ ಹೊಸತನದಿಂದ ಕೂಡಿರಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್‌ ಅಧಿಕಾರಿಗಳಿಗೆ ಸೂಚಿಸಿದರು.

ಪ್ಲಾಸ್ಟಿಕ್‌ ಬಳಸಬಾರದು: ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿ, ಇಲಾಖೆ ಕಾರ್ಯಕ್ರಮ ಹಾಗೂ ಸಾಧನೆ ಕುರಿತು ಮಳಿಗೆ ತೆರೆದು ವಸ್ತುಪ್ರದರ್ಶನ ಏರ್ಪಡಿಸಬೇಕು. ವಸ್ತುಪ್ರದರ್ಶನದಲ್ಲಿ ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ಎಲ್ಲ ಇಲಾಖೆಗಳು ಸಾರ್ವಜನಿಕ ಅರಿವು ಮೂಡಿಸಬೇಕು. ಫ್ಲೆಕ್ಸ್‌ ಮತ್ತಿತರ ಪ್ರಚಾರ ಸಾಮಗ್ರಿಗಳಿಗೆ ಪ್ಲಾಸ್ಟಿಕ್‌ ಬಳಸಬಾರದು ಎಂದು ತಾಕೀತು ಮಾಡಿದರು.

ಉಪಯುಕ್ತ ಮಾಹಿತಿ ನೀಡಿ: ಶಿಕ್ಷಣ, ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ, ಮೀನುಗಾರಿಕೆ, ಕೈಮಗ್ಗ ಮತ್ತು ಜವಳಿ, ವಾರ್ತಾ ಮತ್ತು ಸಾರ್ವಜನಿಕ, ಆರೋಗ್ಯ, ಯುವ ಸಬಲೀಕರಣ ಮತ್ತು ಕ್ರೀಡಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿ ಒಟ್ಟು 13 ಇಲಾಖೆಗಳು ವಸ್ತು ಪ್ರದರ್ಶನದಲ್ಲಿ ಭಾಗ ವಹಿಸಲಿವೆ. ಕಾಟಾಚಾರಕ್ಕೆ ಮಳಿಗೆ ತೆರೆಯದೆ ಜನರಿಗೆ ಉಪಯುಕ್ತ ಮಾಹಿತಿ ನೀಡಬೇಕು. ಇದಕ್ಕಾಗಿ ಸಿಬ್ಬಂದಿ ನೇಮಿಸಬೇಕು ಎಂದು ಹೇಳಿದರು.

ಶಿಕ್ಷಣ ಇಲಾಖೆಯಿಂದ ಮಕ್ಕಳಿಗಾಗಿ ವಿಜ್ಞಾನ ವಸ್ತುಪ್ರದರ್ಶನ ಏರ್ಪಡಿಸುವುದರೊಂದಿಗೆ ನಾಸಾ ವಿಜ್ಞಾನಿಗಳನ್ನು ಕರೆಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಬೇಕು. ಎಸ್‌ಎಸ್‌ಎಲ್‌ಸಿ ನಂತರ ಯಾವ ಕೋರ್ಸ್‌ ಓದಬೇಕೆಂಬ ಉಪಯುಕ್ತ ಮಾಹಿತಿ ಒದಗಿಸಬೇಕೆಂದರು.

ಸೆಲ್ಫಿಪಾಯಿಂಟ್‌ ವ್ಯವಸ್ಥೆ ಮಾಡಿ: ಅರಣ್ಯ ಇಲಾಖೆಯಿಂದ ಬೀಜದುಂಡೆ ತಯಾರಿಕೆ, ನೆಡು ತೋಪು ನಿರ್ಮಾಣದ ಪ್ರಾತ್ಯಕ್ಷಿಕೆಯೊಂದಿಗೆ ವಿವಿಧ ಸಸಿ ಪ್ರದರ್ಶನಕ್ಕಿಟ್ಟು ಮಾಹಿತಿ ನೀಡಬೇಕು. ಜನಾ ಕರ್ಷಣೆಗಾಗಿ ಪರಿಸರ ರಕ್ಷಣೆ ಬಗ್ಗೆ ಘೋಷವಾಕ್ಯ ಬರೆಸಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹಿರಿಯರು ಹಾಗೂ ಮಕ್ಕಳಿಗಾಗಿ ಪ್ರತ್ಯೇಕವಾಗಿ ಸೆಲ್ಫಿ  ಪಾಯಿಂಟ್‌ ವ್ಯವಸ್ಥೆ ಮಾಡಬೇಕು. ಉಚಿತ ರಕ್ತದಾನ ಶಿಬಿರ, ಆರೋಗ್ಯ, ದಂತ ತಪಾಸಣಾ ಶಿಬಿರ ಏರ್ಪಡಿಸಬೇಕು. ಹಾವು, ನಾಯಿ ಕಡಿತಕ್ಕೆ ಪ್ರಥಮ ಚಿಕಿತ್ಸೆ ಕುರಿತು ವಿಡಿಯೋ ಪ್ರದರ್ಶಿಸಲು, ಅಸ್ಪೃಶ್ಯತೆ ನಿವಾರಣೆಗೆ ಸಂಬಂಧಿಸಿ ಬೀದಿ ನಾಟಕ ಹಮ್ಮಿ ಕೊಳ್ಳಲು, ಅಲಂಕಾರಿಕ ಮೀನು, ವಸ್ತು  ಪ್ರದರ್ಶಿಸಲು, ಸಿರಿಧಾನ್ಯಗಳಿಂದ ಆಹಾರ ತಯಾರಿಸುವ ಪ್ರಾತ್ಯಕ್ಷಿಕೆ ನೀಡಲು ಆಯಾ ಇಲಾಖೆಗಳಿಗೆ ಸಲಹೆ ನೀಡಿದರು.

ಜಿಪಂ ಉಪಕಾರ್ಯದರ್ಶಿ ಕೃಷ್ಣಮೂರ್ತಿ, ಯೋಜನಾಧಿಕಾರಿ, ಮಂಜುನಾಥ್‌, ಶಿರಾ ತಾಪಂ ಇಒ ಮೋಹನ್‌, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲಲಿತಾ ಕುಮಾರಿ ಇದ್ದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.