60 ವರ್ಷ ಮೇಲ್ಪಟ್ಟ ರೈತರಿಗೂ ಸಾಲ ಸೌಲಭ್ಯ


Team Udayavani, Sep 25, 2022, 4:29 PM IST

tdy-14

ಬರಗೂರು: 60 ವರ್ಷ ಮೇಲ್ಪಟ್ಟ ರೈತರಿಗೆ ಸಾಲ ಸೌಲಭ್ಯ ನೀಡಬಾರದೆಂಬ ಸರ್ಕಾರದ ಆದೇಶವಿದ್ದರೂ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ರಾಜಣ್ಣ ಅವರ ಸಹಕಾರ ಮತ್ತು ರೈತರ ಮೇಲಿನ ಅಭಿಮಾನದಿಂದಾಗಿಕಾನೂನು ಕಟ್ಟಳೆಗಳನ್ನು ಪರಿಗಣಿಸಿ, ಸಾಲ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಡಿಸಿಸಿ ಬ್ಯಾಂಕ್‌ನಿರ್ದೇಶಕ, ಸಂಘದ ಅಧ್ಯಕ್ಷ ಜಿ.ಎನ್‌. ಮೂರ್ತಿ ಭರವಸೆ ನೀಡಿದರು.

ಶಿರಾ ತಾಲೂಕಿನ ಬರಗೂರಿನ ಆಂಜನೇಯ ಸ್ವಾಮಿ ಗ್ರಾಮಾಂತರ ಪ್ರೌಢಶಾಲಾ ಆವರಣದಲ್ಲಿ ಪಿಎಸಿಸಿಯಿಂದ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿ, ನಮ್ಮ ಸಂಘದಲ್ಲಿ ರೈತರು ಸಾಲ ಸೌಲಭ್ಯ ಪಡೆಯಲು ಅಲೆಯುವ ಅಗತ್ಯವಿಲ್ಲ. ಕಚೇರಿ ಸಿಬ್ಬಂದಿ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿದರೆ ಸಾಕು. ಇತ್ತೀಚೆಗೆ ಕೆಲ ತಾಂತ್ರಿಕ ಸಮಸ್ಯೆಗಳಿಂದ ಸಾಲ ಮನ್ನಾ ಆದ ರೈತರಿಗೆ ಸಾಲ ನೀಡಲು ಸಾಧ್ಯವಾಗುತ್ತಿಲ್ಲ. ಕೆಲವೇ ತಿಂಗಳಿಗಳಲ್ಲಿ ಸೌಲಭ್ಯ ದೊರೆಯಲಿದೆ ಎಂದು ವಿವರಿಸಿದರು.

ನಾಲ್ಕೂವರೆ ಕೋಟಿ ರೂ. ಸಾಲ: ಜಿಲ್ಲೆಯಲ್ಲಿ ಒಟ್ಟು 234 ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳಿವೆ. ಜಿಲ್ಲಾ ಸಹಕಾರ ಬ್ಯಾಂಕ್‌ನಿಂದ 700 ಕೋಟಿ ರೂ. ಸಾಲ ನೀಡಲಾಗಿದೆ. ಜಿಲ್ಲೆಯಲ್ಲಿ ಪಹಣಿ ಇರುವಂತಹ ಎಲ್ಲಾ ರೈತರಿಗೂ ಸಾಲ ಸೌಲಭ್ಯ ನೀಡುವ ಸಹಕಾರ ಸಂಘ ಎಂದರೆ ಅದು ಬರಗೂರು ಪಿಎಸಿಸಿ. 1,280 ರೈತರಿಗೆ 3.75 ಕೋಟಿ ರೂ. ಸಾಲ ಕೊಟ್ಟಿದ್ದೆವು. ಸಿದ್ದರಾಮಯ್ಯ, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಒಂದೊಂದು ಬಾರಿ ರೈತರ ಸಾಲ ಆಗಿದ್ದು, ನಂತರ ಸಂಘದಿಂದ ನಾಲ್ಕೂವರೆ ಕೋಟಿ ರೂ. ಅನ್ನು ರೈತರಿಗೆ ನೀಡಿದ್ದೇವೆ ಎಂದರು.

ಇಷ್ಟೊಂದು ಸಾಲ ನೀಡಿರುವುದು ಸರ್ಕಾರದ ಹಣದಿಂದಲ್ಲ. ಜಿಲ್ಲಾ ಸಹಕಾರ ಬ್ಯಾಂಕ್‌, ರೈತರಿಂದ ಸಂಗ್ರಹವಾದ ಡಿಪಾಸಿಟ್‌ನಿಂದ. ಸರ್ಕಾರ ಮಾಡದ ಕೆಲಸವನ್ನು ನಮ್ಮ ಜಿಲ್ಲಾ ಸಹಕಾರ ಬ್ಯಾಂಕ್‌ ಮಾಡುತ್ತಿದೆ ಎಂದು ತಿಳಿಸಿದರು.

ಲಾಭದಾಯಕ ಹಂತಕ್ಕೆ ತಪುಪಿದೆ: ವಿಎಸ್‌ ಎಸ್‌ಎನ್‌ ಮಾಜಿ ಅಧ್ಯಕ್ಷ ಕೃಷ್ಣೇಗೌಡ ಮಾತನಾಡಿ, 2015ರಲ್ಲಿ ನಮ್ಮ ಸಂಘ ಬಹಳಷ್ಟು ನಷ್ಟದಲ್ಲಿತ್ತು. ನಂತರ ಅಭಿವೃದ್ಧಿ ಕಾರ್ಯಗಳ ಮೂಲಕ, ರೈತರಿಗೆ ಸಾಲ ಸೌಲಭ್ಯ ನೀಡಿ, ಅದರಿಂದ ಸರ್ಕಾರದಿಂದ ಬಂದಂತಹ ಸಬ್ಸಿಡಿ ಹಣವನ್ನು ಕ್ರೋಡೀಕರಿಸಿದ ಪರಿಣಾಮ, ಈ ಹಿಂದೆ ಇದ್ದ 24 ಲಕ್ಷ ರೂ. ಸಾಲ ತೀರಿಸಿ ನಮ್ಮ ಸಹಕಾರ ಸಂಘ ಲಾಭದಾಯಕ ಹಂತಕ್ಕೆ ತಪುಪಿದೆ ಎಂದು ಹೇಳಿದರು.

ಬಡ್ಡಿ ರಹಿತ ಸಾಲ ಪಡೆದು ನೆಮ್ಮದಿ ಜೀವನ: ಸಂಘದ ನಿರ್ದೇಶಕ ಡಿ.ಎನ್‌.ಪರಮೇಶ್‌ ಗೌಡ ಮಾತನಾಡಿ, ಹಲವು ಬ್ಯಾಂಕ್‌ಗಳಲ್ಲಿ ಬಡ್ಡಿ ಮೂಲಕ ರೈತರು ಸಾಲ ಪಡೆಯುತ್ತಿದ್ದಾರೆ. ಆದರೆ, ಜಿಲ್ಲಾ ಸಹಕಾರ ಬ್ಯಾಂಕಲ್ಲಿ ರೈತರು ಬಡ್ಡಿ ರಹಿತ ಸಾಲ ಪಡೆದು ನೆಮ್ಮದಿ ಜೀವನ ನಡೆಸುತ್ತಿದ್ದಾರೆ. ಇದಕ್ಕೆ ಸ್ಪಂದಿಸಿದ ಜಿಲ್ಲಾ ಸಹಕಾರ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌. ರಾಜಣ್ಣ, ರಾಜೇಂದ್ರ ರಾಜಣ್ಣ ಅವರ ಸಹಕಾರದಿಂದ ಸಾಧ್ಯವಾಗಿದೆ ಎಂದು ವಿವರಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ: ಈ ವೇಳೆ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಸಹಕಾರ ಸಂಘದ ಉಪಾಧ್ಯಕ್ಷ ಬಿ.ಸಿ.ಸತೀಶ್‌, ಡಿಸಿಸಿ ಬ್ಯಾಂಕ್‌ ಬರಗೂರು ಶಾಖಾವ್ಯವಸ್ಥಾಪಕ ಗುರುಪ್ರಕಾಶ್‌, ಸಂಘದ ನಿರ್ದೇಶಕರಾದ ಕೃಷ್ಣೇಗೌಡ, ಜಯರಾಮೇಗೌಡ, ಮದ್ದೇಗೌಡ, ಪರಮೇಶ್‌ಗೌಡ, ನಂಜೇಗೌಡ, ನಾಗರಾಜು, ನಿರ್ಮಲಾ, ಶೈಲಜಾ, ದೊಡ್ಡ ಬೋರಪ್ಪ, ರಾಮಣ್ಣ, ಕೃಷ್ಣಮೂರ್ತಿ, ಕೃಷ್ಣಪ್ಪ, ಸಹಕಾರ ಸಂಘದ ಸಿಇಒ ಆರ್‌.ತಿಮ್ಮರಾಜು, ಗುಮಾಸ್ತ ಮಹಂತೇಶ್‌, ಸಹಾಯಕ ರಾಜಣ್ಣ,ಗಡಿನಾಡ ತೋಟಗಾರಿಕೆ ಕಂಪನಿ ಅಧ್ಯಕ್ಷ ಡಾ.ಚಂದ್ರಶೇಖರ್‌, ಸಿಇಒ ಶಿವಣ್ಣ, ರೈತ ಸಂಘದಅಧ್ಯಕ್ಷ ಲಕ್ಷ್ಮಣಗೌಡ, ರೈತ ಮುಖಂಡ ಮುಕುಂದಪ್ಪ ಇತರರು ಇದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.