

Team Udayavani, May 28, 2020, 6:37 AM IST
ಕುಣಿಗಲ್: ಲಾಕ್ಡೌನ್ ವೇಳೆಯಲ್ಲಿ ಉದ್ಯೋಗ ವಿಲ್ಲದೆ ತೀವ್ರ ಸಂಕಷ್ಟದಲ್ಲಿ ಸಿಲುಕಿರುವ ಬೀದಿ ಬದಿ ವ್ಯಾಪಾರಿಗಳು ಹಾಗೂ ಶ್ರಮಿಕ ವರ್ಗದವರು ಖಾಸಗಿ ಫೈನಾನ್ಸ್ ಅವರಿಂದ ಶೋಷಣೆಗೆ ಒಳಗಾಗುವುದನ್ನು ತಪ್ಪಿಸುವ ದಿಸೆಯಲ್ಲಿ ಡಿಸಿಸಿ ಬ್ಯಾಂಕ್ನಿಂದ ಸಾಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿದರು.
ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಬಡವರು ಬಂಧು ಯೋಜನಡಿಯಲ್ಲಿ ಪಟ್ಟಣದ ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಶ್ರಮಿಕ ವರ್ಗದ ಸುಮಾರು 70 ಜನ ಫಲಾನುಭವಿಗಳ ಶೂನ್ಯ ಉಳಿತಾಯ ಖಾತೆಗೆ ಸಾಲದ ಮೊತ್ತವನ್ನು ಜಮಾ ಮಾಡಿದ ಆದೇಶ ಪತ್ರ ವಿತರಿಸಿ ಮಾತನಾಡಿದರು. ಸಣ್ಣ ಮತ್ತು ಅತಿ ಸಣ್ಣ ಬೀದಿ ಬದಿ ವ್ಯಾಪಾರಸ್ಥರನ್ನು ಆರ್ಥಿಕವಾಗಿ ಪುನಶ್ಚೇತನಗೊಳಿಸಲು ಅವರು ಮಾಡುವ ವ್ಯಾಪಾರಕ್ಕನುಸಾರ ಹಣಕಾಸಿನ ಅವಶ್ಯಕತೆಗೆ ಅನುಗುಣವಾಗಿ ಸಾಲ ನೀಡಲಾಗುವುದು.
ಅಲ್ಲದೆ ಸಲೂನ್ ಅಂಗಡಿ, ಮಡಿವಾಳ ಸೇರಿದಂತೆ ಹಿಂದುಳಿದ ವರ್ಗದವರು ಮಾಡುವ ಕುಲ ಕಸುಬುಗಳ ವ್ಯಾಪಾರದ ಅಂಗಡಿಗಳಿಗೆ ಬ್ಯಾಂಕ್ ಯಾವುದೇ ರೀತಿಯ ಆಧಾರ ಇಲ್ಲದೆ ಸಾಲದ ಚೆಕ್ಗಳನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಿದೆ ಎಂದರು. ಸಾಲ ಸೌಲಭ್ಯ ಪಟ್ಟಣಕ್ಕೆ ಸೀಮಿತವಾಗದೇ ಗ್ರಾಮೀಣ ಪ್ರದೇಶದ ಬೀದಿ ಬದಿ ವ್ಯಾಪಾರಿಗಳಿಗೂ ಸಹಕಾರ ಸಂಘಗಳ ಮೂಲಕ ಪಕ್ಷಾತೀತವಾಗಿ ಎಲ್ಲರಿಗೂ ಸೌಲಭ್ಯ ನೀಡಲಾಗುವುದೆಂದು ತಿಳಿಸಿದರು.
ಬ್ಯಾಂಕ್ ನಿರ್ದೇಶಕರಾದ ಬಿ.ಶಿವಣ್ಣ, ಬಿ.ಎಸ್. ದೇವರಾಜ್, ಎಂ.ಡಿ. ಕುಬೇಂದ್ರನಾಯ್ಕ, ಸ್ಥಳೀಯ ಬ್ಯಾಂಕ್ ವ್ಯವಸ್ಥಾಪಕ ದಯಾಸಾಗರ್, ವಿಎಸ್ಎಸ್ ಎನ್ ಅಧ್ಯಕ್ಷರಾದ ಗಂಗಶಾನಯ್ಯ, ಐ.ಜಿ.ರಮೇಶ್, ಬೋರೇಗೌಡ, ಉಪಾಧ್ಯಕ್ಷ ಹಾಲುವಾಗಿಲು ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಪುರಸಭಾ ಸದಸ್ಯ ರಂಗಸ್ವಾಮಿ ಇದ್ದರು.
Ad
ಸಾರ್ವಜನಿಕ ಸ್ಮಶಾನದ ಅಭಿವೃದ್ಧಿಗೆ ಮೀನಾಮೇಷ: ಎ.ಸಿ., ಡಿ.ಸಿ. ಸೂಚನೆಗೂ ಕೇರ್ ಮಾಡದ ಗ್ರಾ.ಪಂ.
Koratagere: ಕಲ್ಲುಕ್ವಾರೆ ಅವಘಡ; ಓರ್ವ ಸಾವು, ಇಬ್ಬರಿಗೆ ಗಾಯ
ಕ್ಯಾಂಟರ್-ಕಾರು ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃ*ತ್ಯು
ಪ್ರಧಾನಿ ಮೋದಿ ಬಿಜೆಪಿಯ ಮಾರ್ಗದರ್ಶಕ ಮಂಡಳಿಗೆ ಹೋಗಬೇಕು: ಕೆ.ಎನ್.ರಾಜಣ್ಣ
Koratagere: ನಿದ್ದೆ ಮಂಪರು… ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ರಕ್…
America: ಕಾರು-ಮಿನಿ ಟ್ರಕ್ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ
Arrested: ಕರೆ ಮಾಡಲು ಕೊಟ್ಟ ಮೊಬೈಲ್ ವಾಪಸ್ ಕೇಳಿದ್ದಕ್ಕೆ ಹಲ್ಲೆ: ಬಂಧನ
ರಸ್ತೆಯಲ್ಲಿ ಕಾರು ತಗುಲಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾರಕಾಸ್ತ್ರ ತೋರಿಸಿ ಪ್ರಾಣ ಬೆದರಿಕೆ
Bengaluru: ವರದಕ್ಷಿಣೆ: ಡಿವೈಎಸ್ಪಿ ವಿರುದ್ಧ ಕೇಸ್
High Court: ಗಾರ್ಡನ್ ಅಲ್ಲ, ಫ್ಲೆಕ್ಸ್ ಸಿಟಿ: ಹೈಕೋರ್ಟ್ ಚಾಟಿ
You seem to have an Ad Blocker on.
To continue reading, please turn it off or whitelist Udayavani.