ಹಳ್ಳಿಗಳಲ್ಲಿ ಏರುತ್ತಿದೆ ಚುನಾವಣೆ ಕಾವು


Team Udayavani, Dec 20, 2020, 8:27 PM IST

ಹಳ್ಳಿಗಳಲ್ಲಿ ಏರುತ್ತಿದೆ ಚುನಾವಣೆ ಕಾವು

ಮಧುಗಿರಿ: ದೇಶದಲ್ಲಿ ಗ್ರಾಪಂ ಚುನಾವಣೆ ಬಡವರ ಚುನಾವಣೆಯಾಗಿ ಉಳಿದಿತ್ತು. ಆದರೆ ಈಗ ಆ ಚುನಾವಣೆ ಕೂಡ ಶ್ರೀಮಂತರ ಚುನಾವಣೆಯಾಗಿ ಮಾರ್ಪಟ್ಟಿದ್ದು, ಲಕ್ಷಗಟ್ಟಲೆ ಖರ್ಚು ಮಾಡಲು ಅಭ್ಯರ್ಥಿಗಳು ತುದಿಗಾಗಲ್ಲಿ ನಿಂತಿದ್ದು, ತಾಲೂಕಿನಲ್ಲಿ ಚುನಾವಣಾ ಕಣ ರಂಗೇರಿದೆ. ಹಾಲಿ- ಮಾಜಿ ಶಾಸಕರ ತೆರೆಮರೆಯ ತಂತ್ರದಲ್ಲಿ ಬಿಜೆಪಿ ಕೂಡ ಖಾತೆ ತೆರೆಯುವ ಹುಮ್ಮಸ್ಸಿನಲ್ಲಿದೆ.

ತಾಲೂಕಿನಲ್ಲಿ 39 ಪಂಚಾಯ್ತಿಗಳಿದ್ದು, ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗ,ಹಿಂದುಳಿದ ಬಿ ವರ್ಗ ಹಾಗೂ ಸಾಮಾನ್ಯ ವರ್ಗ ಸೇರಿದಂತೆ ಒಟ್ಟು 615 ಕ್ಷೇತ್ರಗಳಿವೆ. ಈಗಾಗಲೇ ಸರಿ ಸುಮಾರು ಎಲ್ಲ ಕ್ಷೇತ್ರಗಳಿಗಳಿಂದ 2400ಕ್ಕೂ ಹೆಚ್ಚು ನಾಮಪತ್ರ ಸಲ್ಲಿಕೆಯಾಗಿದ್ದು, ಹಲವು ಕ್ಷೇತ್ರಗಳಲ್ಲಿ ಏಕನಾಮಪತ್ರ ಸಲ್ಲಿಕೆಯಿಂದ ಅವಿರೋಧ ಆಯ್ಕೆ ನಡೆದಿದೆ. ಕಳೆದ ಬಾರಿಯೂ ಕಾಂಗ್ರೆಸ್‌ ಬೆಂಬಲಿತರ ಸಂಖ್ಯೆ ಹೆಚ್ಚಾಗಿದ್ದು, ಈ ಬಾರಿಯೂ ಅದೇ ಫ‌ಲಿತಾಂಶ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ.

ಜೆಡಿಎಸ್‌ ಕೂಡ ಈ ತಂತ್ರಗಾರಿಕೆಯಲ್ಲಿ ಹಿಂದೆ ಬೀಳದೆ ಹೆಚ್ಚು ಸ್ಥಾನಗಳನ್ನು ಪಡೆಯಲು ಶಾಸಕರು ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗುತ್ತಿದ್ದಾರೆ. ಆದರೆಎರಡೂ ಪಕ್ಷದಲ್ಲಿ ಅಸಮಾಧಾನ ಹೆಚ್ಚಾಗಿದ್ದು,ಮಾಜಿ ಶಾಸಕರು ಮಾತ್ರ ಈ ಅಸಮಾಧಾನ ತಣಿಸುವ ಕಾರ್ಯಕ್ಕೆ ಮುಂದಾಗದೆ ಕಾರ್ಯಕರ್ತರ ಅಸಮಾಧಾನ ತಮ್ಮ ಮೇಲೆ ಬಾರದಂತೆ ಎಚ್ಚರ ವಹಿಸಿದ್ದಾರೆ. ಆದರೆ ಹಾಲಿ ಶಾಸಕರು ಮಾತ್ರ ಗ್ರಾಪಂ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಸುತ್ತಿದ್ದು, ಆತ್ಮವಿಶ್ವಾಸದಿಂದ ಪಕ್ಷದ ಅಭ್ಯರ್ಥಿಗಳಿಗೆಚುನಾವಣೆ ಎದುರಿಸಲು ಸಭೆಯಲ್ಲಿ ಶಕ್ತಿ ತುಂಬುತ್ತಿದ್ದಾರೆ.

ಬಿಜೆಪಿಗೆ ಖಾತೆ ತೆರೆಯುವ ತವಕ: ತಾಲೂಕಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಲು ಆಯ್ದ ಕ್ಷೇತ್ರಗಳಿದ್ದು, ಅಲ್ಲಿ ಗೆಲುವು ಸಾಧಿಸಲು ತಾಲೂಕು ಅಧ್ಯಕ್ಷರು ಶ್ರಮವಹಿಸುತ್ತಿದ್ದು, ಪುರವರ ಹೋಬಳಿಯ ಹಲವು ಕಡೆ ಹಾಗೂ ಕಸಬಾ ಹೋಬಳಿಯ ಬಿಜವರ ಗ್ರಾಪಂನಲ್ಲಿ ಹೊಸ ಸಾಹಸಕ್ಕೆ ಮುಂದಾಗಿದೆ.

ಮತಬೇಟೆಗೆ ಅಭ್ಯರ್ಥಿಗಳ ಆಮಿಷ: ಈಗಾಗಲೇ ಗ್ರಾಮಗಳಲ್ಲಿ ಪ್ರತಿದಿನ ಹಬ್ಬದ ವಾತಾವರಣವಿದ್ದು, ರಾತ್ರಿಯಾದರೆ ಮೋಜು ಮಸ್ತಿಯ ಪಾರ್ಟಿಗಳು ನಡೆಯುತ್ತಿವೆ. ಮತದಾನದ ಹಿಂದಿನ ದಿನದಲ್ಲಿ ಮಾಡಬಹುದಾದ ಆಮಿಷಗಳಿಗೆ ಈಗಾಗಲೇ ಬೆಳ್ಳಿಯ ನಾಣ್ಯ, ಸೀರೆ, ಮೂಗುತಿ ಸೇರಿದಂತೆ ಕುಕ್ಕರ್‌ ಹಾಗೂ ಇತರೆ ವಸ್ತುಗಳನ್ನು ಖರೀದಿಸುವತ್ತ ಅಭ್ಯರ್ಥಿಗಳು ಮುಂದಾಗಿದ್ದು, ಕುರುಡು ಕಾಂಚಾಣವು ಕತ್ತಲಲ್ಲಿ ಸದ್ದು ಮಾಡಲು ತಯಾರಾಗಿದೆ. ಮತದಾರರಿಗೆ ಜಾಗೃತಿ ಮೂಡಿಸುವ ಬಗ್ಗೆ ಆಯೋಗ ಮಾಡಿದ ಮನವಿಯನ್ನು ಜನತೆ ಗಂಭೀರವಾಗಿ ಪರಿಗಣಿಸಿಲ್ಲದಂತೆ ಕಂಡು ಬರುತ್ತಿದೆ. ಕೊರೊನಾ ಸಮಯದಲ್ಲಿ ವಲಸಿಗರಿಗೆ ಗ್ರಾಮಕ್ಕೆ ನಿಷಿದ್ಧ ಹೇರಿದ್ದ ವರೂ ಈಗ ರೆಡ್‌ ಕಾರ್ಪೆಟ್‌ ಹಾಸಿ ಬನ್ನಿ, ನಮಗೆ ಮತ ಹಾಕಿ ಎಂದು ಬೇಡುತ್ತಿರುವ ಕಾಲ ಬಂದಿದೆ.

ಗ್ರಾಪಂ ಚುನಾವಣೆಯಲ್ಲಿ ಈ ಬಾರಿ ಪದವೀಧರರು ಸ್ಪರ್ಧೆ ಮಾಡಿರುವುದು ಸ್ವಾಗತಾರ್ಹ.ಈ ಸಂಪ್ರದಾಯು ಮುಂದೆ ಹೆಚ್ಚಾಗಬೇಕಿದ್ದು, ಗ್ರಾಪಂನಲ್ಲಿ ನಡೆಯುವ ಯಾವುದೇ ಅವ್ಯವಹಾರಕ್ಕೆ ಬ್ರೇಕ್‌ ಹಾಕಬಹುದು. ಡಾ.ವಿಶ್ವನಾಥ್‌, ಚುನಾವಣಾಧಿಕಾರಿ, ಮಧುಗಿರಿ

 

ಮಧುಗಿರಿ ಸತೀಶ್‌

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.