ಹೂವು, ತರಕಾರಿ ಕೇಳುವವರೇ ಇಲ್ಲ!


Team Udayavani, May 1, 2021, 4:41 PM IST

ಹೂವು, ತರಕಾರಿ ಕೇಳುವವರೇ ಇಲ್ಲ!

ತುಮಕೂರು: ಶೈಕ್ಷಣಿಕ ನಗರದಲ್ಲಿ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಬಂದ್‌ ನಿಂದ ಹಲವರಿಗೆ ತೊಂದರೆ ಆಗುತ್ತಿದೆ. ಸರ್ಕಾರದ ನಿಯಮದಂತೆ 10ಗಂಟೆಗೆ ತರಕಾರಿ ಮಾರುಕಟ್ಟೆಗಳು ಸಂಪೂರ್ಣ ಬಂದ್‌ ಆಗುತ್ತಿರುವುದರಿಂದ ಮಾರುಕಟ್ಟೆಗೆ ರೈತರು ತಂದಿದ್ದ ತರಕಾರಿ, ಹೂ,ಹಣ್ಣುಗಳು ಮಾರಾಟವಾಗದೇ ಅನ್ನದಾತರು ಸಂಕಷ್ಟ ಪಡುತ್ತಿದ್ದಾರೆ.

ನಗರದ ಅಂರಸನಹಳ್ಳಿ ಹೂ, ಹಣ್ಣು ತರಕಾರಿ ಮಾರುಕಟ್ಟೆ ಶ್ರೀ ಸಿದ್ಧಿವಿನಾಯಕ ತರಕಾರಿ ಮಾರುಕಟ್ಟೆಹೊರ ಪೇಟೆ ತರಕಾರಿ ಮಾರುಕಟ್ಟೆಗಳಲ್ಲಿ ಬೆಳಗ್ಗೆ 6ಗಂಟೆಯಿಂದ 10ರವರೆಗೆ ಹೂ,ಹಣ್ಣು ತರಕಾರಿ ಮಾರಾಟಕ್ಕೆ ಅವಕಾಶವಿದ್ದು, ಬೆಳಗ್ಗೆ 10 ಗಂಟೆಯ ನಂತರ ಮಾರಾಟಕ್ಕೆ ಅವಕಾಶವಿಲ್ಲ. ಇದರಿಂದ ಬೆಳಗಿನ ಜಾವವೇ ಎದ್ದು ತರಕಾರಿ ತೆಗೆದುಕೊಂಡು ಮಾರುಕಟ್ಟೆಗೆ ಬಂದಿ ರುವ ರೈತರಿಗೆ ಸಂಕಷ್ಟ ಎ‌ದುರಾಗಿದೆ. ಮಾರುಕಟ್ಟೆಗೆ ಬಂದಿರುವ ಹೂವು ಕೇಳುವವರಿಲ್ಲ, ತರಕಾರಿ ಕೊಳ್ಳುವ ವರಿಲ್ಲ ಮಾರುಕಟ್ಟೆಗೆ ಹೂ, ತರಕಾರಿ ತಂದಿದ್ದ ರೈತರು ಪರದಾಟ ನಡೆಸಿದ ದೃಶ್ಯ ಶುಕ್ರವಾರ ಕಂಡು ಬಂದಿತು.

ಗ್ರಾಹಕರು ಮಾರುಕಟ್ಟೆಯತ್ತ ಸುಳಿಯುತ್ತಿಲ್ಲ: ಸದಾ ಜನರಿಂದ ತುಂಬಿರುತ್ತಿದ್ದ ಅಂತರಸನಹಳ್ಳಿ ಹೂ, ಹಣ್ಣು, ತರಕಾರಿ ಮಾರುಕಟ್ಟೆಯಲ್ಲಿ ಬೆಳಗ್ಗೆ 6 ರಿಂದ 10ಗಂಟೆ ವರೆಗೆ ತರಕಾರಿ ಮಾರಾಟ ಮಾಡಲು ಅವಕಾಶವಿದ್ದರೂ, ಮಾರುಕಟ್ಟೆ ಬಂದ್‌ ರೀತಿಯೇ ಇದ್ದು ನಿರೀಕ್ಷೆಯಷ್ಟು ಗ್ರಾಹಕರು ಮಾರುಕಟ್ಟೆಯತ್ತ ಸುಳಿಯಲಿಲ್ಲ. ನಗರ ಸೇರಿದಂತೆ ಜಿಲ್ಲಾದ್ಯಂತ ಕೋವಿಡ್ ಸೋಂಕು ಪ್ರಕರಣ ಗಳು ತ್ವರಿತಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಕೈಗೊಂಡಿರುವ ಕೆಲ ಕಟ್ಟುನಿಟ್ಟಿನ ಕ್ರಮಗಳಿಂದ ರೈತ ಸಮೂಹ ಪರದಾಡುವಂತಾಗಿದೆ.

ಅಂತರಸನಹಳ್ಳಿ ಮಾರುಕಟ್ಟೆ ಸುಸಜ್ಜಿತವಾಗಿದ್ದುವಿಶಾಲ ವಾಗಿದೆ. ತರಕಾರಿ ಮಾರಾಟ ಮಾಡುವ ರೈತರು ಮತ್ತು ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತಹ ಸ್ಥಳ ‌ ಇದಾಗಿದೆ. ಆದರೂ ಏಕಾಏಕಿ ತರಕಾರಿ ಮಾರಾಟ ದಲ್ಲಿ ಏರುಪೇರು ಆಗಿರುವುದರಿಂದ ತರಕಾರಿ ತಂದಿರುವ ರೈತರು ಮಾರಾಟವಾಗದೇ ತೊಂದರೆ ಅನುಭವಿಸುತ್ತಿದ್ದಾರೆ. ತುಮಕೂರು ಸುತ್ತಮುತ್ತ ತರಕಾರಿಬೆಳೆದು ಜೀವನ ನಡೆಸುವ ಕುಟುಂಬಗಳೇ ಹೆಚ್ಚು ಇದ್ದು, ಪ್ರತಿದಿನ ಮಾರುಕಟ್ಟೆಗೆ ತಂದು ತರಕಾರಿ, ಸೊಪ್ಪು, ಹೂವು, ಹಣ್ಣು ಮಾರಿ ಜೀವನ ನಡೆಸುತ್ತಿದ್ದರು.

ನಿರೀಕ್ಷಿತ ಬೆಲೆ ಸಿಗುತ್ತಿಲ್ಲ: ಈ ಮಾರುಕಟ್ಟೆಗೆ ದೂರದ ಊರು ಗಳಿಂದ ಈರುಳ್ಳಿ ಸೇರಿದಂತೆ ಇನ್ನಿತರೆ ತರಕಾರಿ ಗಳನ್ನು ಮಾರುಕಟ್ಟೆಗೆ  ಬಾಡಿಗೆ ವಾಹನ ಮಾಡಿಕೊಂಡು ರೈತರು ಮಾರುಕಟ್ಟೆ ತರುತ್ತಾರೆ. ಆದರೆ, ಮಾರುಕಟ್ಟೆಯಲ್ಲಿ ನಿರೀಕ್ಷಿತ ಬೆಲೆ ಸಿಗುತ್ತಿಲ್ಲ. ಖರೀದಿ ಸ್ಥಗಿತ ‌ಗೊಂಡಿರುವುದಕ್ಕೆರೈತರು ಬೇಸರ ವ್ಯಕ್ತಪಡಿಸುತ್ತಿದ್ದರು. ಮಾರುಕಟ್ಟೆಯಲ್ಲಿ ತರಕಾರಿ ಮಾರಾಟವಾಗದೇ ರಸ್ತೆಯಲ್ಲಿ ಮಾರಾಟ ಮಾಡಲೂ ಅವಕಾಶವಿಲ್ಲ. ಇಂದು ತಂದ ತರಕಾರಿ ಇಂದೇಮಾರಾಟವಾಗಬೇಕು. ಆದರೆ, ಮಾರಾಟಕ್ಕೆ ನೀಡಿರುವ

ಸಮಯ ತೀರಾ ಕಡಿಮೆ ಇದೆ. ದೂರದ ಊರುಗಳಿಂದ ಹೊತ್ತು ತಂದಿದ್ದ ತರಕಾರಿಯನ್ನು ರಸ್ತೆ ಬದಿಯಲ್ಲಿ ಮಾರಾಟಕ್ಕೆ ಮುಂದಾದ ರೈತರಿಗೆ ಅವಕಾಶ ನೀಡದೆ ಪೊಲೀ ಸರು ತರಕಾರರು ತೆಗೆದಿದ್ದರು. ಇದಕ್ಕೆ ತರಕಾರಿ ಬೆಳೆದ ರೈತರ ನೋವು ಹೇಳತೀರದಾಗಿದೆ. ತರಕಾರಿ ಯನ್ನು ಮಾರುಕಟ್ಟೆಗೆ ತಂದಿರುವ ರೈತರು ಆಡಳಿತ ನಡೆಸುವ ಅಧಿಕಾರಿಗಳು ಮತ್ತು ಕರ್ತವ್ಯ ನಿರತ ಪೊಲೀಸರ ಕೆಲ ಧೋರಣೆಗೆ ಆಕ್ರೋಶ ವ್ಯಕ್ತಪಡಿ‌ಸುತ್ತಿದ್ದರು.

ಹೂವಿನ ಬೆಲೆ ಕುಸಿತ: ಅಂತರಸನಹಳ್ಳಿ ಮಾರುಕಟ್ಟೆಯಲ್ಲಿ ಹೂವಿನ ವ್ಯಾಪಾರ ನಿರೀಕ್ಷೆಯಂತೆ ಕಂಡುಬರಲಿಲ್ಲ. ಹೂವಿನ ದರ ಪಾತಾಳಕ ಕ್ಕೆ  ಕುಸಿದಿದ್ದರಿಂದ ‌ ಹೂವು ಬೆಳೆಗಾ ರರುಬೇಸರ ವ್ಯಕ್ತಪಡಿಸಿ ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಊರುಗಳಿಗೆ ತೆರಳಿದರು. ಕನಕಾಂಬರ, ಕಾಕಡ, ಸೇವಂತಿಗೆ ಸೇರಿದಂತೆ ಇನ್ನಿತರೆ ಹೂವುಗಳ ಸಂಪೂರ್ಣ ಕುಸಿದಿದ್ದು, ಹೂ ಕೇಳುವವರೇ ಇಲ್ಲ 10 ರೂ.ಗೆ ಮಾರು ಎಂದರೂ ಬೇಡ ಎನ್ನುತ್ತಿದ್ದಾರೆ. ಲಾಕ್‌ಡೌನ್‌ ಹಿನ್ನೆಲೆ ಯಾವುದೇ

ದೇವತಾ ಕಾರ್ಯಗಳು, ಸಭೆ, ಸಮಾರಂಭಗಳು ನಡೆಯದಿರು ವುದು ಹೂವಿನ ಬೆಲೆ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಹಾಲಿನ ಮತ್ತು ಹಾಲಿನ ಉತ್ಪನ್ನಗ ‌ಳಿಗೆ ರಾತ್ರಿವರೆಗೂ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅದರಂತೆ ಅಂತರಸನಹಳ್ಳಿ ಮಾರುಕಟ್ಟೆಯಲ್ಲಿ ತರಕಾರಿ, ಹೂವು, ಹಣ್ಣುಗಳ ಮಾರಾಟಕ್ಕೆ ಸಾಮಾಜಿಕ ಅಂತರದಲ್ಲಿ ಮಾರಾಟ ಮಾಡಲು ಅವಕಾಶ ನೀಡಬೇಕು. ಈ ಬಗ ಜಿಲ್ಲಾಡಳಿತ, ಜಿಲ್ಲಾ ಸಚಿವರು ಗಮನ ಹರಿಸಬೇಕು ಎಂದು ರೈತರು, ಮಂಡಿ ವರ್ತಕರು ಆಗ್ರಹಿಸಿದ್ದಾರೆ.

ಲಾಕ್‌ಡೌನ್‌ನಿಂದ ಅತಂತ್ರ :

ಜಿಲ್ಲೆಯಲ್ಲಿ 30,009 ಹೆಕ್ಟೇರ್‌ ಪ್ರದೇಶದಲ್ಲಿ ಹಣ್ಣಿನಬೆಳೆಗಳನ್ನು ರೈತರು ಬೆಳೆಯುತ್ತಾರೆ. 7,057 ಹೆಕ್ಟೇರ್‌ ಪ್ರದೇಶದಲ್ಲಿ ತರಕಾರಿ, 2,047 ಹೆಕ್ಟೇರ್‌ ಪ್ರದೇಶ ದಲ್ಲಿ ಹೂವಿನ ಬೆಳೆಗಳನ್ನು ರೈತರುಬೆಳೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚು ಟೊಮೇಟೊ,ಬೆಂಡೆ ಕಾಯಿ, ಗೆಣಸು, ಸೌತೇಕಾಯಿ, ಕ್ಯಾರೇಟ್‌, ಹುರಳಿ ಕಾಯಿ, ಮೆಣಸಿನಕಾಯಿ, ಹಾಗಲಕಾಯಿ,ಸೊಪ್ಪು ಸೇರಿದಂತೆ ವಿವಿಧ ಬಗೆಯ ತರಕಾರಿಯನ್ನು ಜಿಲ್ಲೆಯ ರೈತರು ಬೆಳೆಯುತ್ತಾರೆ.ತುಮಕೂರು ಸುತ್ತ ಮುತ್ತ ಹೆಚ್ಚು ತರಕಾರಿ ಸೊಪ್ಪು ಬೆಳೆಯುವ ರೈತರಿದ್ದಾರೆ. ಅವರ ಬದುಕು ಲಾಕ್‌ ಡೌನ್‌ನಿಂದ ಅತಂತ್ರವಾಗಿದೆ.

ಜಿಲ್ಲಾಡಳಿತ ಗಮನ ಹರಿಸಲಿ :

ನಾವು ಲಕ್ಷಾಂತರ ರೂ. ಖರ್ಚುಮಾಡಿ ತರಕಾರಿ ಬೆಳೆದಿದ್ದೇವೆ. ಲಾಕ್‌ಡೌನ್‌ನಿಂದ ಬೆಳೆದ ತರಕಾರಿ ಬೆಳೆ ಮಾರಲು ಅವಕಾಶ ವಿಲ್ಲ. ಸರ್ಕಾರ ಇದಕ್ಕೆ ಅನುಕೂಲ ಮಾಡಬೇಕು. ಈ ಬಗ್ಗೆ  ಜಿಲ್ಲಾಡಳಿತ ಗಮನ ಹರಿಸಬೇಕು. ಹಾಲು ಮಾರಾಟಕ್ಕೆ ಅವಕಾಶ ನೀಡಿರುವಂತೆ ಹೂವು, ತರಕಾರಿ ಹಣ್ಣು ಮಾರಾಟ ಮಾಡಲು ಅವಕಾಶ ಕಲ್ಪಿಸಲಿ ಎನ್ನುತ್ತಾರೆ ರೈತ ಶ್ರೀನಿವಾಸ್‌.

ನಂದಿನಿ ಹಾಲಿನ ಮಳಿಗೆಯಲ್ಲಿ ಹಾಲಿನ ಮಾರಾಟಕ್ಕೆ ಬೆಳಗ್ಗೆ 6 ರಿಂದ ಸಂಜೆ 8 ಗಂಟೆಯವರೆಗೆ ಸರ್ಕಾರ ಅವಕಾಶ ನೀಡಿದೆ. ಅದೇ ರೀತಿ ನಮ್ಮ ರೈತರುಮಾರುಕಟ್ಟೆಗೆ ತರುವ ತರಕಾರಿ, ಹೂವು,ಹಣ್ಣು ಮಾರಿಕೊಳ್ಳಲು ಅವಕಾಶಕಲ್ಪಿಸಬೇಕು. ಇದರಿಂದ ತರಕಾರಿ ಬೆಳೆದಿರುವ ರೈತರಿಗೆ ಹೆಚ್ಚು ಅನುಕೂಲ ಆಗುತ್ತದೆ. – ಶಂಕರಪ್ಪ, ರೈತ ಮುಖಂಡ

ಲಾಕ್‌ಡೌನ್‌ನಿಂದ ಜಿಲ್ಲೆಯಲ್ಲಿ ತರಕಾರಿಬೆಳೆದಿರುವ ರೈತರಿಗೆತೊಂದರೆ ಉಂಟಾಗುತ್ತಿದೆ. ಆದ್ದರಿಂದ ಅವರಿಗೆ ತೊಂದರೆ ಆಗಬಾರದು ಎಂದು ತೋಟಗಾರಿಕೆ ಇಲಾಖೆಯಿಂದ ಸಹಾಯವಾಣಿ 0816-2970310ತೆರೆದಿದ್ದು, ರೈತರಿಗೆ ಮಾರುಕಟ್ಟೆ ವ್ಯವಸ್ಥೆ ಮಾಡಿಕೊಡಲಾಗುವುದು.ಇತರೆ ಮಾಹಿತಿಗೆ ರೂತರು ಸಂಪರ್ಕಿಸಬಹುದು.– ಬಿ.ರಘು, ಉಪನಿರ್ದೇಶಕ, ತೊಟಗಾರಿಕೆ ಇಲಾಖೆ

 

– ಚಿ.ನಿ.ಪುರುಷೋತ್ತಮ್‌.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.