ಮಧುಗಿರಿ: ಕರು ಮೇಲೆ ಕರಡಿ ದಾಳಿ
Team Udayavani, Feb 26, 2022, 9:20 PM IST
ಮಧುಗಿರಿ: ಮನೆಯ ಮುಂದೆ ಕಟ್ಟಿ ಹಾಕಿದ್ದ ಕರುವೊಂದರ ಮೇಲೆ ಕರಡಿಯೊಂದು ದಾಳಿ ಮಾಡಿದ ಘಟನೆ ಶನಿವಾರ(ಫೆ.26) ಸಂಜೆ ನಡೆದಿದೆ.
ತಾಲೂಕಿನ ಐಡಿ ಹಳ್ಳಿ ಹೋಬಳಿಯ ಪುಲಮಾಚಿ ಗ್ರಾಮದ ನಾಗಮ್ಮ ಎಂಬುವರಿಗೆ ಸೇರಿದ ಕರುವೊಂದನ್ನು ಮನೆಯ ಮುಂದೆ ಕಟ್ಟಿ ಹಾಕಿದ್ದರು.ಕರಡಿ ದಾಳಿಯಿಂದ ಕರು ಸ್ಥಳದಲ್ಲಿಯೇ ಸಾವನ್ನೊಪ್ಪಿದೆ.
ಸುಮಾರು 7 ರಿಂದ 8 ಕರಡಿಗಳು ರಾತ್ರಿಯಲ್ಲಿ ಗ್ರಾಮಕ್ಕೆ ಆಗಮಿಸಿ ಹಸು-ಕರುಗಳ ಮೇಲೆ ದಾಳಿ ಮಾಡುವುದರಿಂದ ರೈತರು ಆತಂಕದಲ್ಲಿದ್ದು ಸಂಬಂಧಪಟ್ಟ ಅಧಿಕಾರಿಗಳು ಕರಡಿಗಳನ್ನು ಹಿಡಿಯಲು ಪ್ರಯತ್ನಿಸಬೇಕೆಂದು ಆಗ್ರಹಿಸಿದರು.
ಇತ್ತೀಚೆಗೆ ಕರಡಿ ಹಾವಳಿ ವಿಪರೀತವಾಗಿದೆ. ಮನೆಯಿಂದ ಹೊರಗಡೆ ತೆರಳಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ಅರಣ್ಯಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?