ಮಧುಗಿರಿ: ರೈತನ ಮೇಲೆ ಕರಡಿ ದಾಳಿ
Team Udayavani, Sep 27, 2022, 1:05 PM IST
ಮಧುಗಿರಿ: ತಾಲೂಕಿನ ಐಡಿ ಹಳ್ಳಿ ಹೋಬಳಿಯಲ್ಲಿ ರೈತನ ಮೇಲೆ ಕರಡಿ ದಾಳಿ ಮಾಡಿದ ಪರಿಣಾಮ ರೈತನ ಕೈಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಯರಮಲ್ಲೇನಹಳ್ಳಿ ನಿವಾಸಿ ಶ್ರೀರಾಮ ರೆಡ್ಡಿ ಕರಡಿ ದಾಳಿಯಿಂದ ಗಾಯಗೊಂಡ ರೈತ.
ಇವರು ಎಂದಿನಂತೆ ಬೆಳಿಗ್ಗೆ 8 ಗಂಟೆಯ ಸಮಯದಲ್ಲಿ ಮೇವು ತರಲು ಜಮೀನಿಗೆ ತೆರಳಿದ್ದ ಸಂದರ್ಭದಲ್ಲಿ ಕರಡಿ ದಾಳಿ ನಡೆಸಿದ ಪರಿಣಾಮ ಕೈಗೆ ಗಾಯಗೊಂಡಿದ್ದಾರೆ. ಬಳಿಕ ಐಡಿ ಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಮಧುಗಿರಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲಯ ಅರಣ್ಯಾಧಿಕಾರಿ ರವಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಪರಿಹಾರ ನೀಡುವ ಭರವಸೆ ನೀಡಿದ್ದಾರೆ.