ಮಧುಗಿರಿ: ಜಯಮಂಗಲಿ ನದಿಯಲ್ಲಿ ಮುಳುಗಿ ಬಾಲಕ ಮೃತ್ಯು
Team Udayavani, Oct 7, 2022, 2:08 PM IST
ಮಧುಗಿರಿ: ದ್ವಿಚಕ್ರ ವಾಹನ ತೊಳೆಯಲು ನದಿಗೆ ಇಳಿದಿದ್ದ ಬಾಲಕ ನೀರು ಪಾಲಾದ ಘಟನೆ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಮುದ್ದೇನಹಳ್ಳಿಯಲ್ಲಿ ನಡೆದಿದೆ.
ಮುದ್ದೇನಹಳ್ಳಿ ನಿವಾಸಿ ಶಂಕರಪ್ಪನ ಮಗನಾದ ನಾಗಚೇತನ (14) ಮೃತಪಟ್ಟ ಬಾಲಕ.
ಗ್ರಾಮದ ಸರ್ಕಾರಿ ಶಾಲೆಯಲ್ಲಿ8 ನೇ ತರಗತಿಯಲ್ಲಿ ಓದುತ್ತಿದ್ದ ಈತ ಶಾಲೆಗೆ ರಜೆಯಿದ್ದ ಕಾರಣ ಗ್ರಾಮದ ಬಳಿ ಹರಿಯುತ್ತಿದ್ದ ಜಯಮಂಗಳಿ ನದಿಯಲ್ಲಿ ತನ್ನ ದ್ವಿಚಕ್ರ ವಾಹನ ತೊಳೆಯಲು ನದಿಗೆ ಇಳಿದಿದ್ದ ಎನ್ನಲಾಗಿದೆ. ಈತ ನೀರಿನ ರಭಸಕ್ಕೆ ಆಯ ತಪ್ಪಿ ನದಿಗೆ ಬಿದ್ದಿದ್ದು, ಉಸಿರುಗಟ್ಟಿದ್ದ ಆತನನ್ನು ತಕ್ಷಣ ಗ್ರಾಮಸ್ಥರು ಕಾಪಾಡಿ, ಪ್ರಥಮ ಚಿಕಿತ್ಸೆಗೆ ಹಿಂದೂಪುರಕ್ಕೆ ಕರೆದೊಯ್ಯಲು ಮುಂದಾಗಿದ್ದರು. ಆದರೆ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತೆಯರು
2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ