ತುಂಬಿ ಹರಿಯುತ್ತಿದ್ದ ಸೇತುವೆ ದಾಟಲು ಹೋಗಿ ಟ್ರಾಕ್ಟರ್ ಪಲ್ಟಿ :ಪ್ರಾಣಾಪಾಯದಿಂದ ಪಾರಾದ ಚಾಲಕ
Team Udayavani, Aug 28, 2022, 9:01 AM IST
ಮಧುಗಿರಿ : ಸೇತುವೆ ದಾಟಲು ದುಸ್ಸಾಹಸ ಮಾಡಿದ ಚಾಲಕನ ನಿರ್ಲಕ್ಷದಿಂದ ಟ್ರಾಕ್ಟರ್ ಇಂಜಿನ್ ಮುಗುಚಿ ಬಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ತಾಲೂಕಿನ ದೊಡ್ಡೇರಿ ಹೋಬಳಿಯ ಗುಟ್ಟೆ-ಚಂದ್ರಗಿರಿ ರಸ್ತೆಯಲ್ಲಿರುವ ಸೇತುವೆಯಲ್ಲಿ ರಾತ್ರಿಯಿಡಿ ಸುರಿದ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ರಭಸವಾಗಿ ಹರಿಯುತ್ತಿತ್ತು. ಬೆಳಿಗ್ಗೆ ಹಾಲಿನ ಕ್ಯಾನ್ ತುಂಬಿಕೊಂಡ ಟ್ರಾಕ್ಟರ್ ಚಾಲಕ ಸೇತುವೆ ದಾಟಲು ಮುಂದಾಗಿದ್ದಾನೆ. ಆದರೆ ನೀರಿನ ಸೆಳೆತಕ್ಕೆ ಟ್ರಾಕ್ಟರ್ ಇಂಜಿನ್ ಪಲ್ಟಿಯಾಗಿ ಸ್ಪಲ್ಪ ಹೊತ್ತು ಚಾಲಕ ಕಾಣೆಯಾಗಿದ್ದನು. ಆತಂಕದಿಂದ ಹುಡುಕಾಡಿದಾಗ ಸ್ವಲ್ಪ ದೂರದಲ್ಲಿ ಬಚಾವಾಗಿ ಎದ್ದು ಬಂದಿದ್ದಾನೆ. ಚಾಲಕನನ್ನು ಗುಟ್ಟೆ ಗ್ರಾಮದ ಶಿವಣ್ಣ ಎಂದು ತಿಳಿದು ಬಂದಿದೆ.
ಟ್ರಾಕ್ಟರ್ ನಲ್ಲಿ ಮತ್ತೆ 4 ಮಹಿಳೆಯರು ಪ್ರಯಾಣಿಸುತ್ತಿದ್ದು ಅವರೆಲ್ಲ ಅಪಾಯದಿಂದ ಪಾರಾಗಿದ್ದಾರೆ. ಸ್ತಳಕ್ಕೆ ತುಮುಲ್ ನಿರ್ದೇಶಕ ಕೊಂಡವಾಡಿ ಚಂದರಶೇಖರ್, ಸಿಪಿಐ ಹನುಂತರಾಯಪ್ಪ ಭೇಟಿ ನೀಡಿದ್ದಾರೆ.
ಇದನ್ನೂ ಓದಿ : ಕಮಿಷನ್ ಪಡೆದಿರುವುದು ಬಿಜೆಪಿಯೋ ಕಾಂಗ್ರೆಸ್ಸೋ ಎಂದು ತನಿಖೆಯಿಂದ ಗೊತ್ತಾಗಲಿದೆ : ಪರಮೇಶ್ವರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ