ಮಧುಗಿರಿ: ಬೆಳ್ಳಂ ಬೆಳಗ್ಗೆ ರೈತನ ಮೇಲೆ ಕರಡಿ ದಾಳಿ
Team Udayavani, Dec 29, 2022, 11:44 AM IST
ಮಧುಗಿರಿ: ರೈತನೊಬ್ಬನ ಮೇಲೆ ಕರಡಿ ದಾಳಿ ನಡೆಸಿ ಸಣ್ಣ ಪುಟ್ಟ ಗಾಯಗಳಿಂದ ಪಾರಾದ ಘಟನೆ ತಾಲೂಕಿನ ಮಿಡಿಗೇಶಿ ಹೋಬಳಿ ದಾಸೇನಳ್ಳಿಯಲ್ಲಿ ಡಿ. 29 ರಂದು ನಡೆದಿದೆ.
ಅದೇ ಗ್ರಾಮದ ರೈತ ನಾಗರಾಜಪ್ಪ ಗಾಯಗೊಂಡವರು.
ಇಂದು ಬೆಳಿಗ್ಗೆಯೇ ರೈತ ನಾಗರಾಜಪ್ಪ ಕುರಿ ಮೇಕೆಗಳಿಗೆ ಸೊಪ್ಪು ತರಲು ಜಮೀನಿಗೆ ಹೋಗಿದ್ದಾಗ ಕರಡಿ ದಾಳಿ ನಡೆಸಿ, ಮುಖ ಹಾಗೂ ತೋಳಿನ ಕಡೆ ಗಾಯಗಳಾಗಿದ್ದು, ಕಿರುಚಿದ ನಂತರ ಕರಡಿ ಓಡಿ ಹೋಗಿದೆ ಎಂದು ಹೇಳಲಾಗಿದೆ.
ಗಾಯಗೊಂಡ ರೈತನನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ರವಿ, ಉಪ ವಲಯ ಅರಣ್ಯಾಧಿಕಾರಿ ಮುತ್ತುರಾಜ್ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ