ಕಳಪೆ ಕಾಮಗಾರಿ ಸಹಿಸುವುದಿಲ್ಲ: ಮಾಧುಸ್ವಾಮಿ


Team Udayavani, Jan 26, 2019, 11:04 AM IST

madhu.jpg

ಹುಳಿಯಾರು: ಇತ್ತೀಚಿಗೆ ಸರ್ಕಾರದಿಂದ ಅನುದಾನ ತರುವುದು ಕಷ್ಟದ ಕೆಲಸ. ತಂದಿರುವ ಅನುದಾನದಲ್ಲಿ ಕಳಪೆ ಕಾಮಗಾರಿ ಮಾಡಿದರೆ ನಾನು ಸಹಿಸುವ ಶಾಸಕನಲ್ಲ ಎಂದು ಚಿಕ್ಕನಾಯಕನಹಳ್ಳಿ ಶಾಸಕ ಜೆ.ಸಿ.ಮಾಧುಸ್ವಾಮಿ ಖಡಕ್‌ ಎಚ್ಚರಿಕೆ ನೀಡಿದರು. ಹುಳಿಯಾರು ಹೋಬಳಿಯ ಕೆಂಕೆರೆಯಲ್ಲಿ ನೂತನ ಅಂಗನವಾಡಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಸುವರ್ಣ ಗ್ರಾಮ ಯೋಜನೆಯಡಿ ಕೆಂಕೆರೆ ಗ್ರಾಪಂಗೆ 50 ಲಕ್ಷ ರೂ. ಹಾಗೂ ಎಸ್‌ಸಿ, ಎಸ್‌ಟಿ ಅನುದಾನದಲ್ಲಿ 35 ಲಕ್ಷ ರೂ.ಗಳನ್ನು ನೀಡಿದ್ದು, ಎಲ್ಲರೂ ಒಗ್ಗಟ್ಟಿನಿಂದ ಈ ಹಣದ ಸದ್ಬಳಕೆ ಮಾಡಿ ಕೊಳ್ಳಿ ಎಂದು ಕಿವಿ ಮಾತು ಹೇಳಿದರಲ್ಲದೇ ಬರ ಶಿಡ್ಲಹಳ್ಳಿ ಹಾಗೂ ಕೆಂಕೆರೆ ಗ್ರಾಮಕ್ಕೆ ಪಶು ಆಸ್ಪತ್ರೆ ಮಂಜೂರಾತಿಗೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ತಿಳಿಸಿದರು.

ತಾಪಂ ಮಾಜಿ ಅಧ್ಯಕ್ಷ ಕೆಂಕೆರೆ ನವೀನ್‌ ಮಾತನಾಡಿ, ಶಾಸಕ ಮಾಧು ಸ್ವಾಮಿಯವರು ಕೆಂಕೆರೆ ಗ್ರಾಪಂಗೆ ಕೋಟ್ಯಂತರ ರೂ. ಹಣ ನೀಡಿದ್ದಾರೆ. ಅಲ್ಲದೇ ಕಾಮಗಾರಿ ಮಾಡಲು ತಕರಾರಿ ರುವ ಪ್ರದೇಶಕ್ಕೆ ಖುದ್ದು ಭೇಟಿ ನೀಡಿ ಮನವೊಲಿಸಿ ಕಾಮಗಾರಿ ಮಾಡಿಸು ತ್ತಿದ್ದಾರೆ ಎಂದರು. ಗ್ರಾಪಂ ಅಧ್ಯಕ್ಷೆ ಆಶಾ ಉಮೇಶ್‌, ಉಪಾಧ್ಯಕ್ಷ ಜಯಣ್ಣ, ಸಿಡಿಪಿಒ ತಿಪ್ಪಯ್ಯ, ಮೇಲ್ವಿಚಾರಕಿ ಲಕ್ಷ್ಮೀ, ತಾಪಂ ಸದಸ್ಯ ಕೇಶವಮೂರ್ತಿ, ಮಾಜಿ ಸದಸ್ಯ ನಿರಂಜನ್‌, ಸೀತರಾಮು, ಗ್ರಾಪಂ ಸದಸ್ಯ ರಾದ ಕಾಡಿನರಾಜ ನಾಗರಾಜು, ಪಪಂ ಸದಸ್ಯ ಹೇಮಂತ್‌ ಮತ್ತಿತರರಿದ್ದರು.

ಶಂಕುಸ್ಥಾಪನೆ ದಿನವೇ ತಕರಾರು

ಹುಳಿಯಾರು ಹೋಬಳಿಯ ಕೆಂಕೆರೆಯಲ್ಲಿ ನೂತನವಾಗಿ ಅಂಗನವಾಡಿ ಕಟ್ಟಡಕ್ಕೆ ಶಾಸಕರು ಶಂಕುಸ್ಥಾಪನೆ ನೆರವೇರಿಸಿದ ನಂತರ ಅಲ್ಲಿನ ಗ್ರಾಪಂ ಸದಸ್ಯ ಕಾಡಿನರಾಜ ನಾಗರಾಜು ಅವರಿಂದ ತಕರಾರು ಎದುರಿಸಬೇಕಾಯಿತು. ಶಂಕುಸ್ಥಾಪನೆ ನೆರವೇರಿಸಿ ಶಾಸಕ ಜೆ.ಸಿ.ಮಾಧುಸ್ವಾಮಿ ಹೊರಡುವ ವೇಳೆ ನಾಗಣ್ಣ ಅವರು ಶಾಸಕರ ಬಳಿ ಬಂದು ಕಾಮಗಾರಿ ಕಂಟ್ರ್ಯಾಕ್ಟ್ ಯಾರಿಗೆ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದರು. ಭಟ್ಟರಹಳ್ಳಿ ದಿನೇಶ್‌ ಅನ್ನುವವರಿಗೆ ಕೊಟ್ಟಿರುವುದಾಗಿ ಶಾಸಕರು ಹೇಳಿದಾಗ ನಮ್ಮೂರಲ್ಲೇ ಅನೇಕರು ಕೆಲಸ ಮಾಡುವವರಿದ್ದರೂ ಬೇರೆಯವರಿಗೆ ಕೊಟ್ಟಿದ್ದೀರಿ. ನಾನು ಬೇರೆಯವರು ಕಾಮಗಾರಿ ಮಾಡಲು ಬಿಡಲ್ಲ ಎಂದರು. ಇದೇ ವೇಳೆ ಗ್ರಾಮಸ್ಥ ಮಚ್ಚು ಬಸವರಾಜು ಊರಿನವರು ಕೆಲಸ ಮಾಡಿದರೆ ನಾನು ಬಿಡೋದಿಲ್ಲ. ಬೇರೆಯೂರಿನವರು ಬಂದು ಮಾಡಿದರೆ ಗುಣಮಟ್ಟ ಕೇಳಬಹುದು. ಊರಿನವರು ಮಾಡಿದರೆ ಎಲ್ಲದಕ್ಕೂ ಅನುಸರಿಸಿಕೊಂಡು ಹೋಗಬೇಕಾಗುತ್ತದೆ ಎಂದು ಹೇಳಿದರು. ಇದಕ್ಕೆ ಪ್ರತಿಯಾಗಿ ನಾಗಣ್ಣ ಅನೇಕ ಕಾಮಗಾರಿ ನಾನೂ ಮಾಡಿದ್ದು ಕಳಪೆ ಇದ್ದರೆ ತೋರಿಸಲಿ ಎಂದು ಸವಾಲು ಹಾಕಿದರು. 2 ತಿಂಗಳಿಂದ ಊರಿನವರಾರಾದರೂ ಮಾಡುತ್ತಾರೆ ಕೇಳಿ ಎಂದು ಅಧಿಕಾರಿಗಳಿಗೆ ಮತ್ತು ಸ್ಥಳೀಯ ಮುಖಂಡರಿಗೆ ತಿಳಿಸಿದ್ದೆ. ಯಾರೊಬ್ಬರೂ ಮುಂದೆ ಬಾರದಿದ್ದರಿಂದ ಅನಿವಾರ್ಯವಾಗಿ ನಾನೇ ದಿನೇಶ್‌ಗೆ ಹೇಳಿದ್ದೇನೆ ಎಂದು ಶಾಸಕರು ತಿಳಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.