![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಯೋಜನೆಗಳ ಸದುಪಯೋಗಿಸಿಕೊಳ್ಳಿ
Team Udayavani, Sep 24, 2020, 6:10 PM IST
![ಯೋಜನೆಗಳ ಸದುಪಯೋಗಿಸಿಕೊಳ್ಳಿ](https://www.udayavani.com/wp-content/uploads/2020/09/tk-tdy-2-3-620x372.jpg)
ಸಾಂದರ್ಭಿಕ ಚಿತ್ರ
ಪಾವಗಡ: ಸರ್ಕಾರದಿಂದ ಕೃಷಿ ಇಲಾಖೆ ಮೂಲಕ ರೈತರಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಇದರಿಂದ ರೈತರ ಜೀವನಮಟ್ಟ ಸುಧಾರಿಸುತ್ತಿದೆ ಎಂದು ತಾಪಂ ಅಧ್ಯಕ್ಷೆ ಮಾಳಮ್ಮ ಸುಬ್ಬರಾಯಪ್ಪ ಹೇಳಿದರು.
ಪಟ್ಟಣದ ಕಸಬಾ ರೈತ ಸಂಪರ್ಕ ಕೇಂದ್ರ ಆವರಣದಲ್ಲಿ ಹಮ್ಮಿಕೊಂಡಿದ್ದ 2020-21ನೇ ಸಾಲಿನಲ್ಲಿರೈತರಿಗೆವಿವಿಧಪರಿಕರಗಳವಿತರಣೆಮತ್ತು ಸಸ್ಯ ಸಂರಕ್ಷಣೆ, ಬಿಜೋಪಚಾರ ಆಂದೋಲನ ತರಬೇತಿ ಕಾರ್ಯಕ್ರಮಲ್ಲಿ ಮಾತನಾಡಿ, ತಾಲೂಕಿನ ರೈತರಿಗೆ ಸರ್ಕಾರ ದಿಂದ ಇನ್ನೂ ಹೆಚ್ಚಿನ ಯೋಜನೆಗಳನ್ನು ತರಲು ಅಧಿಕಾರಿಗಳು, ಉನ್ನತ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.
ಕೆಪಿಸಿಸಿ ಸದಸ್ಯ ಕೋಟೆ ಪ್ರಭಾಕರ್ಮಾತನಾಡಿ, ರೈತ ದೇಶದ ಬೆನ್ನೆಲುಬು, ಅನ್ನಕೊಡುವ ರೈತರ ಬದುಕು ಇಲ್ಲಿನವರೆಗೆ ಚೆನ್ನಾಗಿಲ್ಲ, ಇದನ್ನು ಅರಿತು ಸರ್ಕಾರದ ವಿವಿಧ ಯೋಜನೆಗಳು ಕೃಷಿ ವಲಯದಲ್ಲಿ ಹಲವು ಕಾರ್ಯಕ್ರಮಗಳು ಸರ್ಕಾರಗಳು ಮಾಡುತ್ತಾ ಬಂದಿವೆ ಎಂದು ತಿಳಿಸಿದರು.
ಮಳೆ ಆಧಾರಿತ ಕೃಷಿ ಮಾಡುವವರಿಗೆ ನೀರಿನ ಸಮಸ್ಯೆ ನಿವಾರಿಸಲು ಕೃಷಿ ಇಲಾಖೆಯ ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನ ದೊಂದಿಗೆ ಜಾರಿಯಾಗುವ ಕೃಷಿ ಹೊಂಡ ತಾಲೂಕಿನಲ್ಲಿ600 ನಿರ್ಮಾಣವಾಗಿವೆ ಹಾಗೂ ರೈತರು ಮಳೆ ನೀರನ್ನು ವ್ಯರ್ಥವಾಗಲು ಬಿಡದೇ ಸೂಕ್ತ ಸ್ಥಳದಲ್ಲಿ ಹೊಂಡ ತೆಗೆದು ನೀರನ್ನು ಸಂಗ್ರಹಿಸಿ ತಮ್ಮ ಬೆಳೆಗಳಿಗೆ ಒದಗಿಸಲು ಹಾಗೂ ಅಕ್ಕ ಪಕ್ಕದವರ ಬೋರ್ ವೆಲ್ಗಳು ಅಂತರ್ಜಲ ಹೆಚ್ಚುತ್ತದೆ ಎಂದರು.
ಕೃಷಿ ಸಹಾಯಕ ನಿರ್ದೇಶಕಿ ಎನ್.ವಿಜಯ ಮೂರ್ತಿ ಮಾತನಾಡಿ, ತುಂತುರು ನೀರಾವರಿ ಘಟಕ ಯೋಜನೆಯಡಿ ಫಲಾನುಭವಿಗಳು ಆಯಾ ರೈತ ಸಂಪರ್ಕ ಕೇಂದ್ರಕ್ಕೆ ಎಸ್ಸಿ, ಎಸ್.ಟಿ ವರ್ಗದವರು ಆಧಾರ್ ಕಾರ್ಡ್, ಪಹಣಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಭಾವ ಚಿತ್ರದೊಂದಿಗೆ ಸಂಪರ್ಕಿಸಬೇಕು ಎಂದು ತಿಳಿಸಿದರು.
ತಾಪಂ ಉಪಾಧ್ಯಕ್ಷ ನಾಗರಾಜು, ಎಪಿಎಂಸಿ ಸದಸ್ಯ ಶಿವಕುಮಾರ್, ಪುರಸಭೆ ಸದಸ್ಯರಾದ ರವಿಕುಮಾರ್, ಹಸಿರು ಸೇನೆ ತಾಲೂಕು ಅಧ್ಯಕ್ಷ ಪೂಜಾರಪ್ಪ, ನರಸಿಂಹರೆಡ್ಡಿ, ಚಂದ್ರಶೇಖರ್, ಕೃಷಿ ಅಧಿಕಾರಿ ವೇಣುಗೋಪಾಲ, ಮಧು ಇದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.