ಮಕ್ಕಳು ತಪ್ಪು ದಾರಿ ಹಿಡಿಯುವ ಭಯದಿಂದ ಬಾಲ್ಯವಿವಾಹ ಹೆಚ್ಚಳ


Team Udayavani, Feb 13, 2017, 4:26 PM IST

21-KALA-6.1.gif

ತಿಪಟೂರು: ಹದಿಹರೆಯದ ಮಕ್ಕಳು ತಪ್ಪು ದಾರಿ ಹಿಡಿಯುತ್ತಾರೆಂಬ ಭಯದಿಂದ ಪೋಷಕರೇ ತಮ್ಮ ಮಕ್ಕಳಿಗೆ ಬಾಲ್ಯ ವಿವಾಹ ಮಾಡಲು ಮುಂದಾಗುತ್ತಿದ್ದಾರೆ. ಈ ಭಯವನ್ನು ಹೋಗಲಾಡಿಸಬೇಕು. ಇದಕ್ಕಾಗಿ ಪೋಷಕರ ನಂಬಿಕೆ ಉಳಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಗಮನ ಹರಿಸಬೇಕೆಂದು ಮಕ್ಕಳ ಸಹಾಯವಾಣಿ ನಿರ್ದೇಶಕ ಬಿ.ಎಸ್‌. ನಂದಕುಮಾರ್‌ ತಿಳಿಸಿದರು.

ನಗರದ ಮೆಟ್ರಿಕ್‌ ನಂತರದ ಹಾಸ್ಟಲ್‌ ವಿದ್ಯಾರ್ಥಿನಿಯರಿಗೆ ಹಮ್ಮಿಕೊಂಡಿದ್ದ ತಾಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವಕೀಲರ ಸಂಘ ಮತ್ತು ಬದುಕು ಸಂಸ್ಥೆ ತಿಪಟೂರು ಸಂಯುಕ್ತಾಶ್ರಯದಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಶಿಬಿರದಲ್ಲಿ ಮಾತನಾಡಿದರು.

ಬಾಲ್ಯ ವಿವಾಹದಿಂದ ಶಿಶು ಮರಣ, ತಾಯಿ ಮರಣ ಹಾಗೂ ಅಂಗವಿಕಲ ಮಕ್ಕಳು ಹುಟ್ಟುವುದು ಇತ್ಯಾದಿ ಗಂಭೀರ ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ ಬಾಲ್ಯವಿವಾಹವನ್ನು ಸಂಪೂರ್ಣ ತಡೆಗಟ್ಟಬೇಕು. ಬಾಲ್ಯ ವಿವಾಹ ಮಾಡಿದರೆ ಬಾಲಕಿ ತಂದೆ, ಹುಡುಗನ ತಂದೆ, ಮದುವೆ ಮಾಡಿಸಿದವರಿಗೆ ಹಾಗೂ ಪ್ರೋತ್ಸಾಹ ನೀಡಿದವರಿಗೆ ಎರಡು ವರ್ಷ ಕಠಿಣ ಶಿಕ್ಷೆ ಮತ್ತು ಒಂದು ಲಕ್ಷ ರೂ. ಜುಲ್ಮಾನೆ ವಿಧಿಸಲಾಗುತ್ತದೆ. ಇದು ಜಾಮೀನು ರಹಿತ ಅಪರಾಧ. ಜೊತೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕೊÕ) ಅಡಿ 10 ವರ್ಷ ಕಠಿಣ ಶಿಕ್ಷೆ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರಾಸ್ತಾವಿಕ ಮಾತನಾಡಿದ ಸಿಡಿಪಿಒ ಓಂಕಾರಪ್ಪ, ನಾಲ್ಕು ವರ್ಷಗಳಿಂದ ಸುಮಾರು 52 ಬಾಲ್ಯ ವಿವಾಹಗಳನ್ನು ನಮ್ಮ ತಾಲೂಕಿನಲ್ಲಿ ತಡೆಗಟ್ಟಲಾಗಿದೆ. ಯಾವುದೇ ಕಾರಣಕ್ಕೂ ಬಾಲ್ಯ ವಿವಾಹ ಆಗದಂತೆ ಜನರು ನಿರ್ಧರಿಸಬೇಕು. ಇತರರಿಗೂ ತಿಳಿಸಬೇಕೆಂದು ಕರೆ ನೀಡಿದರು.

ವಕೀಲರ ಸಂಘದ ತಾಲೂಕು ಅಧ್ಯಕ್ಷ ಮಡೇನೂರು ಬಸಪ್ಪ ಮಾತನಾಡಿ, ಹಿಂದಿನ ಪದ್ಧತಿಯನ್ನು ಬಿಟ್ಟು ಇಂದಿನ ವಾಸ್ತವಿಕ ಆಧಾರದ ಮೇಲೆ ಜೀವನ ಕಟ್ಟಿಕೊಳ್ಳಬೇಕು. ಬಾಲ್ಯವಿವಾಹವಾದರೆ ಕಾನೂನಿಡಿ ಶಿಕ್ಷೆಯಾಗುತ್ತದೆ.  ಬಾಲ್ಯ ವಿವಾಹಗಳು ಕಂಡುಬಂದರೆ ಯಾವುದೇ ಇಲಾಖೆಗಳಿಗೆ ಮಾಹಿತಿ ನೀಡಿ ಕೇಂದ್ರ ಸರ್ಕಾರದ ಉಚಿತ ಮಕ್ಕಳ ಸಹಾಯವಾಣಿ 1098 ಕ್ಕೆ ಕರೆ ಮಾಡಿ ಎಂದರು.

ಸಹಾಯಕ ಸರ್ಕಾರಿ ಅಭಿಯೋಜಕಿ ಶಿವಮ್ಮ ಮಾತನಾಡಿ, ಬಾಲ್ಯ ವಿವಾಹದಿಂದ ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ವಿವರಿಸಿದರು. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಕಡೆ ಗಮನ ನೀಡಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಹಿಂದುಳಿದ ವರ್ಗಗಳ ಅಧಿಕಾರಿ ಹನುಮಂತಯ್ಯ ಮಾತನಾಡಿ, ಇಂತಹ ಕಾರ್ಯಕ್ರಮಗಳು ಉತ್ತಮ ನಡವಳಿಕೆಗಳನ್ನು ಕಲಿಸುತ್ತವೆ. 

ನಮ್ಮ ಹಾಸ್ಟೆಲ್‌ಗ‌ಳಲ್ಲಿ ಹೆಚ್ಚು ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ. ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ ಎಂಬ ಸ್ವಾಮಿ ವಿವೇಕನಂದರ ವಾಣಿಯನ್ನು ಹೇಳಿದರು. ಮಕ್ಕಳ ಸಹಾಯ ವಾಣಿಯ ಮೋಹನ್‌ ಕುಮಾರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಮಂಜುಳಾದೇವಿ, ಗೌರವ್ವ ಎಣ್ಣಿ, ವಾರ್ಡನ್‌ ಸುಮಂಗಳಮ್ಮ, ಬಾಲಕೃಷ್ಣ ಮತ್ತಿತರರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.