ಮರಕ್ಕೆ ಮಾರುತಿ ವ್ಯಾನ್ ಡಿಕ್ಕಿ: ಓರ್ವ ಸಾವು
Team Udayavani, Dec 21, 2018, 3:05 PM IST
ಬೇಲೂರು: ಮಾರುತಿ ವ್ಯಾನ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಪೆಟ್ಟು ಬಿದ್ದಿರುವ ಘಟನೆ ತಾಲೂಕಿನ ತಗರೆ ಸಮೀಪ ಗುರುವಾರ ಸಂಭವಿಸಿದೆ. ಬಾಣಾವರದ ಗಣೇಶ್ ಪ್ರಸಾದ್ ಹೋಟೆಲ್ ಮಾಲೀಕ ರಾಜು(42) ಮೃತ ವ್ಯಕ್ತಿ. ಬಾಣಾವರದ ಗಣೇಶ್ ಪ್ರಸಾದ್ ಹೋಟೆಲ್ ಮಾಲೀಕ ರಾಜು ತಮ್ಮ ಸ್ನೇಹಿತರಾದ ಪೈಂಟರ್ ಸಿದ್ದೇಶ್, ದರ್ಶನ್, ಶೇಖರ್ ಅವರೊಂದಿಗೆ ಬುಧವಾರ ತನ್ನ ಸ್ನೇಹಿತನ ಆರೋಗ್ಯ ವಿಚಾರಿಸಲು ಮಾರುತಿ ವ್ಯಾನ್ ನಲ್ಲಿ ಮಂಗಳೂರಿಗೆ ತೆರಳಿ ವಾಪಸಾಗುತ್ತಿದ್ದಾಗ ಬೇಲೂರು ತಾಲೂಕು ಸಕಲೇಶಪುರ ರಸ್ತೆಯ ತಗರೆ ತಿರುವಿನ ಬಳಿ ಇದ್ದ ಮರಕ್ಕೆ ವ್ಯಾನ್ ಡಿಕ್ಕಿ ಹೊಡೆದಿದೆ.
ವ್ಯಾನಿನಲ್ಲಿದ್ದ ಸಿದ್ದೇಶ್ ಹಾಗೂ ದರ್ಶನ್ ಅವರ ಕಾಲು ಮುರಿದಿದೆ. ಶೇಖರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳಕ್ಕೆ ಬೇಲೂರು ಸಿಪಿಐ ಲೋಕೇಶ್ ಪಿಎಸ್ಐ ಜಗದೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಥಳೀಯರ ಆರೋಪ: ಬೇಲೂರು-ಬಿಕ್ಕೋಡು ರಸ್ತೆಯಲ್ಲಿ ಸುಮಾರು 30 ಕ್ಕೂ ಹೆಚ್ಚು ಒಣಗಿದ ಮರಗಳಿವೆ. ಈ ಮರಗಳಿಗೆ ಡಿಕ್ಕಿ ಹೊಡೆದು 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಂಚಾರಕ್ಕೆ ತೊಂದರೆಯಾಗುತ್ತಿರುವ ರಸ್ತೆ ಬದಿಯ ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಸಂಬಂಧಪಟ್ಟವರು ನಿರ್ಲಕ್ಷ್ಯ ವಹಿಸಿದ್ದಾರೆಂದು ಸ್ಥಳೀಯರು ಆಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ