ಶಾಶ್ವತ ನೀರಾವರಿ ಯೋಜನೆಗೆ ಬೃಹತ್‌ ಪ್ರತಿಭಟನೆ

ಕೊರಟಗೆರೆ ತಾಲೂಕು ಕಚೇರಿಗೆ ರಾಜ್ಯ ರೈತ ಸಂಘದಿಂದ ಮುತ್ತಿಗೆ

Team Udayavani, Aug 14, 2019, 4:33 PM IST

tk-tdy-2

ಕೊರಟಗೆರೆ ತಾಲೂಕಿಗೆ ಶಾಶ್ವತ ನೀರಾವರಿ ಯೋಜನೆಗೆ ಆಗ್ರಹಿಸಿ ತಾಲೂಕು ರೈತ ಸಂಘ ಮತ್ತು ಹಸಿರುಸೇನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ರೈತ ಮುಖಂಡರಾದ ಲೋಕೇಶ್‌, ಪುಟ್ಟರಾಜು, ನರಸಿಂಹಮೂರ್ತಿ ಇತರರಿದ್ದರು.

ಕೊರಟಗೆರೆ: ಬರಪೀಡಿತ ಕ್ಷೇತ್ರವಾದ ಕೊರಟಗೆರೆಗೆ ಶಾಶ್ವತ ನೀರಾವರಿ ಯೋಜನೆ ರೂಪಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕೊರಟಗೆರೆ ಘಟಕ ಮಂಗಳವಾರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.

ಬಯಲುಸೀಮೆ ಪ್ರದೇಶವಾದ ಕೊರಟಗೆರೆ ಕ್ಷೇತ್ರದ ರೈತರಿಗೆ ನೀರಾವರಿ ಯೋಜನೆ ಮರೀಚಿಕೆಯಾಗಿದೆ. ಚುನಾವಣೆ ವೇಳೆ ಪ್ರಚಾರಕ್ಕಾಗಿ ಮಾತ್ರ ರೈತರ ಸಮಸ್ಯೆ ಬಳಸಿಕೊಳ್ಳುವ ನಾಯಕರು ಗೆದ್ದ ನಂತರ ರೈತರ ಸಮಸ್ಯೆ ರಿಯುವ ಪ್ರಯತ್ನ ಮಾಡದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಪ್ರತತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪುರ್ನವಸತಿ ಕಲ್ಪಿಸಿ: ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್‌ ಪಟೇಲ್ ಮಾತನಾಡಿ, ಬಯಲುಸೀಮೆ ತುಮಕೂರು ಜಿಲ್ಲೆಗೆ ವರದಾನ ಆಗಿರುವ ಎತ್ತಿನಹೊಳೆ ಯೋಜನೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ ಕೊರಟಗೆರೆಯ 110 ಕೆರೆಗಳಿಗೆ ನೀರು ತುಂಬಿಸಬೇಕು. ಬಫ‌ರ್‌ಡ್ಯಾಂನಿಂದ ಭೂಮಿ ಕಳೆದುಕೊಳ್ಳುವ ರೈತರಿಗೆ ಪುರ್ನವಸತಿ ಕಲ್ಪಿಸ ಬೇಕು ಎಂದು ಆಗ್ರಹಿಸಿದರು.

ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಿ ಗ್ರಾಮಗಳಲ್ಲಿ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧಿಸಬೇಕು. ರೈತರ ಸಾಲ ಮನ್ನಾ ಮಾಡಿ ಬಡ್ಡಿ ರಹಿತ ಹೊಸ ಸಾಲ ರೈತರಿಗೆ ನೀಡಬೇಕು. ಸಾಗುವಳಿ ಪತ್ರ ನೀಡಿದವರಿಗೆ ಖಾತೆ ಮತ್ತು ಪಹಣಿ ತ್ವರಿತವಾಗಿ ನೀಡಬೇಕು ಎಂದು ರೈತ ಸಂಘದ ಗೌರವಾಧ್ಯಕ್ಷ ಧನಂಜಯಾರಾಧ್ಯ ಒತ್ತಾಯಿಸಿದರು.

ಪಟ್ಟಣಕ್ಕೆ ಹೇಮೆ ನೀರು ಸೀಮಿತ: ಹಸಿರು ಸೇನೆ ಕೊರಟಗೆರೆ ಅಧ್ಯಕ್ಷ ಸಿದ್ದರಾಜು ಮಾತನಾಡಿ, ಕೊರಟಗೆರೆ ಕ್ಷೇತ್ರದ 110 ಕೆರೆ ಮತ್ತು ಗೋಮಾಳ ಜಾಗಗಳು ಒತ್ತುವರಿಯಾಗಿವೆ. ಹೇಮಾವತಿ ನೀರು ಪಟ್ಟಣಕ್ಕೆ ಮಾತ್ರ ಸೀಮಿತವಾಗಿದ್ದು ಗ್ರಾಮೀಣ ಪ್ರದೇಶಕ್ಕೆ ಮರೀಚಿಕೆಯಾಗಿದೆ. ತಾಲೂಕು ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ತಕ್ಷಣ ಕಡಿವಾಣ ಹಾಕಬೇಕು. ಕೃಷಿ, ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆ ಸೌಲಭ್ಯ ರೈತರಿಗೆ ನೀಡಬೇಕು ಎಂದು ತಿಳಿಸಿದರು.

ಕೊರಟಗೆರೆ ಪಟ್ಟಣದ ಸರಕಾರಿ ಬಸ್‌ನಿಲ್ದಾಣದಿಂದ ಮುಖ್ಯರಸ್ತೆಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಕಂದಾಯ ಇಲಾಖೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕೃಷಿ, ಕಂದಾಯ, ಬೆಸ್ಕಾಂ ಸೇರಿದಂತೆ ಇನ್ನೀತರ ಇಲಾಖೆ ಅಧಿಕಾರಿ ವರ್ಗ ರೈತರ ಮನವಿ ಸ್ವೀಕರಿಸಿ ಸಮಸ್ಯೆ ತ್ವರಿತವಾಗಿ ಬಗೆಹರಿಸುವ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಲೋಕೇಶ್‌, ಪುಟ್ಟರಾಜು, ನರಸಿಂಹಮೂರ್ತಿ, ಮಂಜುನಾಥ, ಪುಟ್ಟರಾಜು, ವೀರಣ್ಣ, ನವೀನಕುಮಾರ್‌, ಚಂದ್ರಶೇಖರಯ್ಯ, ರಾಮಚಂದ್ರ, ಸಿದ್ದೇಗೌಡ, ರಮೇಶ್‌, ಹನುಮಂತರೆಡ್ಡಿ, ನಾಗರಾಜು, ಶಿವಣ್ಣ, ದಿನೇಶ್‌, ಹನುಮಂತರಾಯಪ್ಪ, ನಂಜುಂಡಯ್ಯ, ರಾಮಣ್ಣ ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.