ಎಂ.ಬಿ. ಪಾಟೀಲ್‌ ವಿರುದ್ಧ ಆಕ್ರೋಶ


Team Udayavani, Sep 12, 2017, 8:00 AM IST

MB-PATIL-01.jpg

ತುಮಕೂರು: ಲಿಂಗಾಯತ, ವೀರಶೈವ ಧರ್ಮ ಬೇರೆ ಎಂಬ ಗೊಂದಲದಲ್ಲಿ ಪತ್ಯೇಕ ಧರ್ಮದ ಕೂಗು ಕೇಳುತ್ತಿರುವ ವೇಳೆಯೇ ಸಚಿವ ಎಂ ಬಿ ಪಾಟೀಲ್‌, “ಸಿದ್ಧಗಂಗಾ ಶ್ರೀಗಳು ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಬೆಂಬಲಿಸಿದ್ದಾರೆ’ ಎನ್ನುವ ಹೇಳಿಕೆ ನೀಡಿರುವುದಕ್ಕೆ ಜಿಲ್ಲೆಯ ವೀರಶೈವ, ಲಿಂಗಾಯತ ಭಕ್ತರಿಂದ ಆಕ್ರೋಶ ವ್ಯಕ್ತವಾಗಿದೆ.

ಸಿದ್ಧಗಂಗಾ ಮಠದಿಂದ ಯಾವುದೇ ಹೇಳಿಕೆ ಲಿಂಗಾಯಿತ ಧರ್ಮದ ಬಗ್ಗೆ ಬರದಿದ್ದರೂ, ಮಠಕ್ಕೆ ಭೇಟಿ ನೀಡಿದ ಸಚಿವ ಎಂ.ಬಿ ಪಾಟೀಲರೊಬ್ಬರೇ “ನನ್ನ ಬಳಿ ಸ್ವಾಮೀಜಿಗಳು ಹೇಳಿದ್ದಾರೆ. ಲಿಂಗಾಯತ ಧರ್ಮಕ್ಕೆ ಸಿದ್ಧಗಂಗಾ ಮಠದ
ಶ್ರೀ ಶಿವಕುಮಾರ ಸ್ವಾಮೀಜಿಯವರ ಬೆಂಬಲ ಸಿಕ್ಕಿದೆ. ನಮ್ಮ ಹೋರಾಟಕ್ಕೆ ಬಲ ಬಂದಿದೆ’ ಎಂಬ ಹೇಳಿಕೆ ನೀಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಶ್ರೀಗಳ ಅಭಿಪ್ರಾಯವೇನು ?: ಸಿದ್ಧಗಂಗಾ ಹಿರಿಯ ಶ್ರೀಗಳು ಸದಾ ಸಮಾಜದಲ್ಲಿ ಎಲ್ಲರ ಏಳಿಗೆಯನ್ನು ಬಯಸುವವರು ಶ್ರೀಗಳು ಸಚಿವರಾದ ಎಂ.ಬಿ. ಪಾಟೀಲ್‌ ಅವರ ಜೊತೆ ಮಾತನಾಡಿದರು. ಆ ವೇಳೆ ಶ್ರೀಗಳು ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಏನೂ ಪ್ರಸ್ತಾಪಿಸಿಲ್ಲ. ಸಚಿವರು ಶ್ರೀಗಳನ್ನು ಮಾತನಾಡಿಸುವ ವೇಳೆ ಲಿಂಗಾಯತ ಧರ್ಮದ ಬಗ್ಗೆ ಪ್ರಸ್ತಾಪಿಸಿದಾಗ ಶ್ರೀಗಳು, ಇಂದಿಗೂ ಹಳ್ಳಿಗಳಲ್ಲಿ ಲಿಂಗಾಯಿತ ಎನ್ನುತಾರೆ ಪಟ್ಟಣ ಪ್ರದೇಶದಲ್ಲಿ ವೀರಶೈವ ಎನ್ನುತ್ತಾರೆ
ಇದರಲ್ಲಿ ಗೊಂದಲ ಯಾಕೆ ಎಲ್ಲರೂ ಒಟ್ಟಾಗಿ ನಡೆಯಿರಿ ಎಂದು ಹೇಳಿದ್ದಾರೆ ಎಂದು ಸದಾ ಡಾ.ಶ್ರೀ ಶಿವಕುಮಾರ ಸ್ವಾಮಿಜಿಗಳ ಬಳಿಯೇ ಇರುವ ಕಣ್ಣೂರು ಸ್ವಾಮಿಗಳು “ಉದಯವಾಣಿ’ಗೆ ತಿಳಿಸಿದರು.

“ಪ್ರತ್ಯೇಕತಾ ಧರ್ಮಕ್ಕೆ ನಮ್ಮ ಬೆಂಬಲವೂ ಇಲ್ಲ ಹಾಗೆಯೇ ವಿರೋಧವೂ ಇಲ್ಲ ಯಾರಿಗಾದರೂ ಒಳ್ಳೆಯದಾಗುವುದಾದರೆ ಅದಕ್ಕೆ ನಮ್ಮ ವಿರೋಧವಿಲ್ಲ, ಹಿರಿಯ ಶ್ರೀಗಳ ಜೊತೆ ಎಂ.ಬಿ ಪಾಟೀಲ ಮಾತನಾಡಿದ್ದಾರೆ, ಆದರೆ ಏನು ಮಾತನಾಡಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ. ಲಿಂಗಾಯತ ಪ್ರತ್ಯೆಕ ಧರ್ಮಕ್ಕೆ ಬೆಂಬಲ ನೀಡಿದ್ದಾರೆಂಬುದು ನಮಗೆ ಗೊತ್ತಿಲ್ಲ’ ಎಂದು ಶ್ರೀಸಿದ್ದಲಿಂಗ ಸ್ವಾಮಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಿದ್ಧಗಂಗಾ ಶ್ರೀಗಳು ಸಮಾಜದಲ್ಲಿ ಸಮಾನತೆಯನ್ನು ಬಯಸುವವರು. ಯಾವುದೇ ಧರ್ಮದ ಕುರಿತು
ಮಾತನಾಡುವವರಲ್ಲ. ಎಲ್ಲರೂ ಒಗ್ಗಟ್ಟಾಗಿ ಸಮಾಜದ ಏಳಿಗೆಗೆ ಶ್ರಮಿಸಿ ಎಂದು ಹೇಳಿರುತ್ತಾರೆ. ಆದರೆ ಸಚಿವರು ಗೊಂದಲ ಸೃಷ್ಠಿಮಾಡಿರಬಹುದು.

– ಕೆ.ಎಚ್‌. ಶಿವರುದ್ರಯ್ಯ, ಕಾರ್ಯದರ್ಶಿ
ಶ್ರೀ ಸಿದ್ಧಗಂಗಾ ಮಠದ ಹಳೆಯ
ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ

ರಾಜಕಾರಣಿಗಳು ತಮ್ಮ ಚಟಕ್ಕೆ ಏನು ಬೇಕಾದರೂ ಹೇಳುತ್ತಾರೆ, ಇವರು ಸಮಾಜದ ಜೊತೆ ಚಲ್ಲಾಟ ಆಡುತ್ತಿದ್ದಾರೆ, ವೀರಶೈವ ಲಿಂಗಾಯತ ಎರಡೂ ಒಂದೇ. ಹಿಂದೂ ಧರ್ಮದ ಕವಲುಗಳು. ಶ್ರೀಗಳ ಬಗ್ಗೆ ನನಗೆ ಅಪಾರ ಗೌರವವಿದೆ. ಈ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ.
– ಸೊಗಡು ಎಸ್‌.ಶಿವಣ್ಣ ,
ಮಾಜಿ ಸಚಿವ

ಲಿಂಗಾಯತರು, ವೀರಶೈವರು ಒಂದೇ. ಇದರಲ್ಲಿ ವೈಭವೀಕರಣ ಬೇಡ, ಅಪಸ್ವರ ಬೇಡ, ಎಲ್ಲಾ ಮುಖಂಡರೂ ಒಂದು ಕಡೆ ಸೇರಿ ಒಗ್ಗಟ್ಟಾಗಿ ಹೋಗಿ ಎಂದು ಸಿದ್ಧಗಂಗಾ ಶ್ರೀಗಳು ಹೇಳಿದ್ದಾರೆ. ಆದರೆ ಎಂ.ಬಿ.ಪಾಟೀಲ್‌ ಶ್ರೀಗಳ ಮಾತನ್ನು ತಿರುಚಿದ್ದಾರೆ.
– ಜಿ.ಎಸ್‌ ಬಸವರಾಜು,
ಮಾಜಿ ಸಂಸದ

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.