ಫೆ.1ರಿಂದ 1.50 ರೂ.ಹಾಲಿನ ದರ ಹೆಚ್ಚಳ


Team Udayavani, Jan 26, 2019, 11:27 AM IST

milk.jpg

ಮಧುಗಿರಿ: ಹಾಲು ಒಕ್ಕೂಟವು ಲಾಭದಲ್ಲಿದ್ದು, ಹಾಲು ಉತ್ಪಾದಕರ ಹಿತದೃಷ್ಟಿಯಿಂದ ಬರುವ ಫೆ.1 ರಿಂದ ಲೀ.ಹಾಲಿಗೆ 1.50 ರೂ. ಹೆಚ್ಚಿಸಲಾಗುವುದು ಎಂದು ತುಮುಲ್‌ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್‌ ತಿಳಿಸಿದರು.

ಮಧುಗಿರಿಯ ಕ್ಷೀರ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹಾಲು ಉತ್ಪಾದಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಹಾಗೂ ಮೃತಪಟ್ಟ ಹಾಲು ಉತ್ಪಾದಕರ ಕುಟುಂಬಗಳಿಗೆ ಪರಿಹಾರ ಧನ ವಿತರಿಸಿ ಸಂಸ್ಥೆಯ ನೂತನ ಕ್ಯಾಲೆಂಡರ್‌ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಸಂಕಷ್ಟದಿಂದ ಪಾರಾಗಬಹುದು: ಒಕ್ಕೂಟವು ಹಿಂದೆ 28 ಲಕ್ಷ ರೂ.ಲಾಭದಲ್ಲಿತ್ತು. 5 ವರ್ಷದ ಅವಧಿಯಲ್ಲಿ 100 ಕೋಟಿ ರೂ. ಲಾಭದಲ್ಲಿದೆ. ಪ್ರತಿವರ್ಷ 4.5 ಕೋಟಿಯಷ್ಟು ಹಣವನ್ನು ಜಿಲ್ಲೆಯ 72 ಸಾವಿರ ರಾಸುಗಳ ಆರೋಗ್ಯ ವಿಮೆಗೆ ನೀಡ ುತ್ತಿದೆ. ಟಿ.ಬಿ.ಜಯಚಂದ್ರ ಇಲಾಖೆಯ ಸಚಿವರಾದ ಮೇಲೆ ರಾಸುಗಳ ವಿಮೆಗೆ ಅವಕಾಶ ಮಾಡಿಕೊಟ್ಟಿ ದ್ದರು.ಆದರೆ, ಈಗ ಇದನ್ನು ಒಕ್ಕೂಟವೇ ಭರಿಸು ತ್ತಿದೆ. ಪ್ರಸ್ತುತ ರಾಜ್ಯದಲ್ಲೇ ತುಮಕೂರು ಹಾಲು ಒಕ್ಕೂಟ ಗುಣಮಟ್ಟದಲ್ಲಿ ನಂ.2ನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

ಹಲವು ಯೋಜನೆ: ಹಾಲು ಉತ್ಪಾದಕರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ 25 ಸಾವಿರದವರೆಗೂ ಧನಸಹಾಯ, ಮೃತಪಟ್ಟವರ ಕುಟುಂಬಗಳಿಗೆ 10 ಸಾವಿರ, ಎಮ್ಮೆ, ಹಸು, ಎತ್ತುಗಳಿಗೂ 50 ಸಾವಿರ ದವರೆಗೂ ಆರೋಗ್ಯ ವಿಮೆ, ವಿದ್ಯಾವಂತ ಹೆಣ್ಣು ಮಕ್ಕಳಿಗೆ ಜಿಲ್ಲಾ ಕೇಂದ್ರದಲ್ಲಿ ಹಾಸ್ಟೆಲ್‌ ವ್ಯವಸ್ಥೆಗೆ ಅನುವು ಮಾಡಿಕೊಟ್ಟಿದ್ದೇವೆ. ಈಗ ಮೃತಪಟ್ಟ ಉತ್ಪಾದಕರ ಕುಟುಂಬಗಳಿಗೆ ನೀಡುವ 10 ಸಾವಿರವನ್ನು 1 ಲಕ್ಷಕ್ಕೆ ಏರಿಸಿದ್ದು, ತಾಲೂಕಿನ 10,447 ಉತ್ಪಾದಕರ ಪೈಕಿ 4,900 ಮಂದಿಗೆ ಮಾತ್ರ ವಿಮೆ ಮಾಡಿದ್ದಾರೆ. ಇದರಿಂದ ಆಕಸ್ಮಿಕ ಸಾವು ಸಂಭವಿಸುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದಂತಾಗುತ್ತದೆ. ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವು ನೇರವಾಗಿ ಲೀ.ಗೆ 5 ರೂ.ಗಳನ್ನು ಉತ್ಪಾದಕರ ಖಾತೆಗೆ ಹಾಕುವುದಾಗಿ ಘೋಷಿಸಿದೆ ಎಂದರು.

ಕಾಲುಬಾಯಿ ಲಸಿಕೆ ಹಾಕಿಸಿ: ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ನಾಗ ಭೂಷಣ್‌ ಮಾತನಾಡಿ, ಕಾಲುಬಾಯಿ ರೋಗ ಬಂದಾಗ ರೈತರು ರಾಸುಗಳಿಗೆ ಲಸಿಕೆ ಹಾಕಿಸಲು ಹಿಂದೇಟು ಹಾಕುವುದು ಸರಿಯಲ್ಲ. ಇದರಿಂದ ಹಸುಗಳ ಸಾವು ಸಂಭವಿಸುತ್ತದೆಲ್ಲದೇ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಎಂದರು.

ಈ ವೇಳೆ ಉತ್ಪಾದಕರ ಮಕ್ಕಳ ಉನ್ನತ ವಿಧ್ಯಾ ಭ್ಯಾಸಕ್ಕೆಂದು 20 ವಿದ್ಯಾರ್ಥಿಗಳಿಗೆ ತಲಾ 25 ಸಾವಿರ ಗಳ ಚೆಕ್‌ ವಿತರಿಸಿದ್ದು, ಮೃತಪಟ್ಟ 10 ಹಾಲು ಉತ್ಪಾದಕರ ಕುಟುಂಬಗಳಿಗೆ ತಲಾ 10 ಸಾವಿರದ ಚೆಕ್‌ ವಿತರಿಸಲಾಯಿತು. ತುಮುಲ್‌ ತಾಲೂಕು ವಿಸ್ತರಣಾಧಿಕಾರಿಗಳಾದ ಗಿರೀಶ್‌, ಶಂಕರನಾಗ್‌, ದಿಲೀಪ್‌, ವೈದ್ಯರಾದ ಡಾ.ದೀಕ್ಷೀತ್‌, ಎಲ್ಲ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಹಾಜರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.