ಅಮೆರಿಕದೊಂದಿಗೆ ಹಾಲಿನ ಉತ್ಪನ್ನ ಒಪ್ಪಂದ ರೈತರಿಗೆ ಮಾರಕ


Team Udayavani, Feb 24, 2020, 3:00 AM IST

americado

ಹುಳಿಯಾರು: ಹಾಲು ಮತ್ತು ಹಾಲಿನ ಉತ್ಪನ್ನಗಳ ಒಪ್ಪಂದ ಅಮೆರಿಕ ಅಧ್ಯಕ್ಷ ಟ್ರಂಪ್‌ ಜೊತೆ ಮಾಡಿಕೊಳ್ಳುವುದು ಬೇಡ ಎಂದು ಪ್ರಧಾನಿ ಮೋದಿ ಮೇಲೆ ಒತ್ತಡ ಹಾಕಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಹುಳಿಯಾರಿನ ಎಂಪಿಎಸ್‌ ಶಾಲಾ ಆವರಣದಲ್ಲಿ ಭಾನುವಾರ ತಾಲೂಕು ಕೃಷಿ ಇಲಾಖೆ, ಕೊನೆಹಳ್ಳಿ ಕೃಷಿ ವಿಜ್ಞಾನ ಕೇಂದ್ರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಬರ್ಡ್ಸ್‌ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ 2019-20ನೇ ಸಾಲಿನ ಕೃಷಿ ಅಭಿಯಾನದಡಿ ಏರ್ಪಡಿಸಿದ್ದ ಹೋಬಳಿ ಮಟ್ಟದ ಕೃಷಿ ವಸ್ತು ಪ್ರದರ್ಶನ, ರೈತರೊಂದಿಗೆ ಸಂವಾದ ಹಾಗೂ ರೈತರ ಮೇಳ ಉದ್ಘಾಟಿಸಿ ಮಾತನಾಡಿದರು.

ಮಳೆ ಬೆಳೆಯಿಲ್ಲದೆ ಕಂಗಾಲಾಗಿದ್ದ ರಾಜ್ಯದ ರೈತರಿಗೆ ಹೈನುಗಾರಿಗೆ ವರದಾನವಾಗಿದ್ದು, ಇದರಿಂದ ಅದೆಷ್ಟೋ ಕುಟುಂಬಗಳು ನೆಮ್ಮದಿಯ ಬದುಕು ನಡೆಸುತ್ತಿದ್ದಾರೆ. ಅಮೆರಿಕದೊಂದಿಗೆ ಹಾಲಿನ ಉತ್ಪನ್ನಗಳಿಗೆ ಒಪ್ಪಂದ ಮಾಡಿಕೊಂಡರೆ ರಾಜ್ಯದ ಅರ್ಧದಷ್ಟು ರೈತರ ನೆಮ್ಮದಿಗೆ ಭಂಗವಾಗಲಿದೆ. ಹಾಗಾಗಿ ಒಪ್ಪಂದ ಬೇಡ ಎಂದು ರಾಜ್ಯದಿಂದ ಒತ್ತಡ ತರಲಾಗಿದೆ. ಕಳೆದ 6 ತಿಂಗಳ ಹಿಂದೆಯೂ ಒಪ್ಪಂದದ ವಿಚಾರ ಬಂದಾಗ ತಡೆಯಲಾಗಿತ್ತು ಎಂದು ವಿವರಿಸಿದರು.

ಸರ್ಕಾರದ ಬಹುತೇಕ ಇಲಾಖೆಗಳನ್ನು ಕೆಲವೇ ಮಂದಿ ಗುತ್ತಿಗೆಗೆ ಪಡೆಸವರಂತೆ ಬರುವ ಸಹಾಯಧನ, ಕೊಡುಗೆ, ಸೌಲಭ್ಯ ಕಬಳಿಸುತ್ತಿರುವುದು ಗಮನಕ್ಕೆ ಬಂದಿದ್ದು, ಇದನ್ನು ತಡೆಯಲು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕೊಟ್ಟು ಅವರ ಬದುಕು ಹಸನಾಗುವಂತೆ ಮಾಡುವ ಸಲುವಾಗಿ ಅಧಿಕಾರಿಗಳ ದಂಡು ಕಟ್ಟಿಕೊಂಡು ಸೌಲಭ್ಯಗಳ ಮಾಹಿತಿ ತಿಳಿಸುತ್ತಿದ್ದೇನೆ. ಹಾಗಾಗಿ ಅಧಿಕಾರಿಗಳು ಬರುವ ಸಭೆಗೆ ಜಾತಿ, ಪಕ್ಷ ಬಿಟ್ಟು ಬಂದು ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಸದ್ಬಳಕೆ ಮಾಡಿಕೊಳ್ಳಿ ಎಂದರು.

ಕರು ಭಾಗ್ಯ: ಪಶು ಭಾಗ್ಯ ಯೋಜನೆಯಲ್ಲಿ ಭ್ರಷ್ಟಾಚಾರದ ವಾಸನೆ ಬರುತ್ತಿದ್ದು, ಪಶು ಖರೀದಿಸದೆ ಯಾರಧ್ದೋ ಹಸುವಿನ ಕಿವಿಗೆ ಓಲೆ ಹಾಕಿಸಿ ಯೋಜನೆ ಹಣ ಪಡೆಯುತ್ತಿರುವ ದಂಧೆ ನಡೆಯುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಪಶು ಭಾಗ್ಯದ ಬದಲು ಕರು ಭಾಗ್ಯ ಯೋಜನೆಯಾಗಿ ಮಾರ್ಪಡಿಸುವ ಚಿಂತನೆ ನಡೆದಿದೆ. ಒಂದು ಪಶು ಹಣದಲ್ಲಿ 12 ಕರು ಕೊಡಬಹುದು. ಅಲ್ಲದೆ ಅಗತ್ಯ ಉಳ್ಳವರು ಮಾತ್ರ ಕರು ಪಡೆದು ಸಾಕಿ ಹೈನುಗಾರಿಕೆ ಮಾಡುತ್ತಾರೆ ಎಂದು ಹೇಳಿದರು.

ಸಿಒಡಿ ತನಿಖೆ: ತಾಲೂಕಿನ ರೈತರಿಗೆ ಅನುಕೂಲ ಆಗಲೆಂದು ತೆಂಗಿನಕಾಯಿ ಬೋರ್ಡ್‌ಗೆ 3 ಟ್ರಾಕ್ಟರ್‌, 2 ಟ್ಯಾಂಕರ್‌, 10 ಲೋಡ್‌ ಗೊಬ್ಬರ ಕೊಡಿಸಲಾಗಿತ್ತು. ಗೊಬ್ಬರ ಉಚಿತವಾಗಿ ಕೊಟ್ಟು ಟ್ರಾಕ್ಟರ್‌, ಟ್ಯಾಂಕರ್‌ ಬಾಡಿಗೆ ಆಧಾರದ ಮೇಲೆ ಕೊಡಿ ಎಂದರೆ ಅದನ್ನೆಲ್ಲಾ ತೆಗೆದುಕೊಂಡ ವ್ಯಕ್ತಿ ಅದೆಲ್ಲೋದನೋ ಗೊತ್ತಾಗಲಿಲ್ಲ. ಹಾಗಾಗಿ ಇದನ್ನು ಸಿಒಡಿ ತನಿಖೆಗೆ ಕೇಳಲಾಗಿದೆ ಎಂದು ತಿಳಿಸಿದರು.

2 ಲಕ್ಷ ಮೆಟ್ರಿಕ್‌ ಟನ್‌ ಮಾತ್ರ ರಾಗಿ ಖರೀದಿ: ಬೆಂಬಲ ಬೆಲೆಯಲ್ಲಿ 2 ಲಕ್ಷ ಮೆಟ್ರಿಕ್‌ ಟನ್‌ ರಾಗಿ ಮಾತ್ರ ಖರೀದಿಸಲು ಸರ್ಕಾರ ನಿರ್ಧರಿಸಿದ್ದು, 2 ಲಕ್ಷ ಗುರಿ ತಲುಪಿದ ನಂತರ ರಾಗಿ ಕೊಡುವವರು ಇದ್ದರೂ ಸ್ಥಗಿತಗೊಳಿಸಲಾಗುತ್ತೆ. ಹಾಗಾಗಿ ರೈತರು ಬೇಗ ಹೆಸರು ನೋಂದಾಯಿಸಿ ರಾಗಿ ಮಾರಬೇಕು. ಈ ಯೋಜನೆ ಎಲ್ಲಾ ರೈತರಿಗೆ ಅನುಕೂಲವಾಗಲೆಂದು ಎಕರೆಗೆ 15 ಕ್ವಿಂಟಲ್‌ ಖರೀದಿಸುವ ನಿಯಮ ಬದಲಾಯಿಸಿ 10 ಕ್ವಿಂಟಲ್‌ಗೆ ಇಳಿಸಲಾಗಿದೆ ಎಂದು ಹೇಳಿದರು.

ತಾಪಂ ಅಧ್ಯಕ್ಷೆ ಚೇತನಾ ಗಂಗಾಧರ್‌, ಜಿಪಂ ಸದಸ್ಯರಾದ ಕಲ್ಲೇಶ್‌, ವೈ.ಸಿ.ಸಿದ್ದರಾಮಯ್ಯ, ಮಂಜುಳಮ್ಮ, ತಾಪಂ ಉಪಾಧ್ಯಕ್ಷ ಯತೀಶ್‌, ಸದಸ್ಯರಾದ ಏಜೆಂಟ್‌ ಕುಮಾರ್‌, ಕೇಶವಮೂರ್ತಿ, ಟಿ.ವಿ.ತಿಮ್ಮಯ್ಯ, ಶ್ರೀಹರ್ಷ, ಕಲ್ಯಾಣಿಬಾಯಿ, ಕಲಾವತಿ, ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನ, ತೋಟಗಾರಿಗೆ ಉಪನಿರ್ದೆಶಕ ರಘು, ಮಣ್ಣು ವಿಜ್ಞಾನಿಗಳಾದ ಡಾ.ಅನಿತಾ. ಸಸ್ಯ ಸಂರಕ್ಷಣೆ ವಿಜ್ಞಾನಿಗಳಾದ ಡಾ.ಶ್ರೀನಿವಾಸ್‌, ಸಹಾಯಕ ಕೃಷಿ ನಿರ್ದೇಶಕ ಡಾ.ಡಿ.ಆರ್‌.ಹನುಮಂತರಾಜು ಮತ್ತಿತರರು ಇದ್ದರು.

ಮರುಭೂಮಿ ಆಗುತ್ತೆ ಎಚ್ಚರ: ಸಮುದ್ರ ತೀರದ ತೆಂಗು, ಅಡಕೆ ಬೆಳೆಯನ್ನು ಚಿಕ್ಕನಾಯಕನಹಳ್ಳಿ ತಾಲೂಕಿಗೆ ತಂದು ಅವುಗಳ ಉಳಿವಿಗಾಗಿ ಅಂತರ್ಜಲ ಬರಿದು ಮಾಡಿದ್ದರಿಂದ ರಾಜ್ಯದಲ್ಲಿ ಮರುಭೂಮಿ ಆಗುವ ತಾಲೂಕಿನ ಪಟ್ಟಿಯಲ್ಲಿ ಚಿ.ನಾ.ಹಳ್ಳಿ ಮೊದಲ ಸ್ಥಾನದಲ್ಲಿದೆ. ಇದರ ಬಗ್ಗೆ ಎಚ್ಚೆತ್ತು ಕಡಿಮೆ ನೀರಿನಿಂದ ಬೆಳೆಯುವ ಗೋಡಂಬಿ, ಖರ್ಜೂರ ಮತ್ತಿತರ ಬೆಳೆ ಬೆಳೆಯಿರಿ. ಸಾಧ್ಯವಾದಷ್ಟು ನೀರು ಆವಿಯಾಗುವುದನ್ನು ತಡೆಯಲು ಹನಿ ನೀರಾವರಿ ಬಳಸಿ. ಇಲ್ಲವಾದಲ್ಲಿ ಬೆಳೆಗೂ ನೀರು ಸಿಗಲ್ಲ, ಕುಡಿಯುವುದಕ್ಕೂ ನೀರು ಸಿಗಲ್ಲ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಎಚ್ಚರಿಸಿದರು.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.