ಡೇರಿಯಲ್ಲಿ ಹಾಲು ತಿರಸ್ಕಾರ: ಪಶುಪಾಲರಿಗೆ ಸಂಕಷ್ಟ

ಸರ್ಕಾರಿ ಸಂಸ್ಥೆಯಾದ ನಂದಿನಿ ಡೇರಿಯಲ್ಲಿ ರೈತರಿಗೆ ಅನ್ಯಾಯ | ಖಾಸಗಿ ಡೇರಿಗಳತ್ತ ಅನ್ನದಾತರ ಚಿತ್ತ

Team Udayavani, Jun 4, 2019, 8:35 AM IST

tk-tdy-2..

ಡೇರಿಯೊಂದಕ್ಕೆ ರೈತರು ಹಾಲು ಹಾಕಲು ಸಾಲಿನಲ್ಲಿ ನಿಂತಿರುವುದು.

ತಿಪಟೂರು: ತೀವ್ರ ಬರಗಾಲದ ಮಧ್ಯೆಯೂ ರೈತರು ಕಷ್ಟಪಟ್ಟು, ಪಶುಸಂಗೋಪನೆಯನ್ನೇ ಮುಖ್ಯ ಆದಾಯ ಕಸುಬನ್ನಾಗಿಸಿಕೊಂಡಿದ್ದಾರೆ. ಇದರಿಂದ ಬರುವ ಹಾಲನ್ನು ಡೇರಿಯವರು ಗುಣಮಟ್ಟದ ಶಂಕೆಗಳ ಜೊತೆ ವಿವಿಧ ಕಾರಣ ಹುಡುಕಿ ಹಾಲನ್ನು ತಿರಸ್ಕರಿಸುತ್ತಿದ್ದಾರೆ. ಇದರಿಂದ ಹಾಲು ಉತ್ಪಾದಕ ರೈತರು ದಿಕ್ಕು ತೋಚದೇ ಸಂಕಷ್ಟಕ್ಕೊಳಗಾಗಿದ್ದಾರೆ.

ಡೇರಿಯಿಂದ ರೈತರಿಗೆ ಅನ್ಯಾಯ: ಹಳ್ಳಿಗಳಲ್ಲಿ ಮನುಷ್ಯರಿಗೆ ಕುಡಿಯಲು ನೀರಿಲ್ಲದಿದ್ದರೂ ಬದುಕಿಗೆ ಆಸರೆಯಾಗಿರುವ ಹೈನುಗಾರಿಕೆಗೆ ಹಣ ಕೊಟ್ಟು ಮೇವು-ನೀರು ಖರೀದಿಸಿ, ಹಸುಗಳ ಪಾಲನೆ, ಪೋಷಣೆ ಮಾಡುತ್ತಿದ್ದಾರೆ ರೈತರು. ಅವುಗಳು ಕೊಡುವಷ್ಟು ಹಾಲನ್ನು ಡೇರಿಗೆ ಪೂರೈಸಲು ಹೋದರೆ, ಹಾಲಿನಲ್ಲಿ ಒಳ್ಳೆಯ ಜಿಡ್ಡಿನಾಂಶವಿಲ್ಲ, ಉತ್ತಮ ಗುಣಮಟ್ಟವಿಲ್ಲ ಎಂದು ಹೇಳಿ ತಿರಸ್ಕರಿಸುತ್ತಿದ್ದಾರೆ. ತಿರಸ್ಕರಿಸಿದ ಹಾಲನ್ನು ಅನ್ಯಮಾರ್ಗವಿಲ್ಲದೆ, ಖಾಸಗಿ ಡೇರಿಗಳನ್ನು ಹುಡುಕಿ ಹಾಲು ಮಾರಬೇಕಾಗಿದೆ. ಖಾಸಗಿಯವರು ಯಾವುದೇ ನೆಪ ಹೇಳದೆ ಹಾಲು ಖರೀದಿಸುತ್ತಿದ್ದು, ಉತ್ತಮ ಬೆಲೆಯನ್ನೂ ನೀಡುತ್ತಿದ್ದಾರೆ. ಸರ್ಕಾರಿ ಸಂಸ್ಥೆಯಾದ ನಂದಿನಿ ಡೇರಿ ಮಾತ್ರ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂಬುದು ರೈತರ ಆಕ್ರೋಶವಾಗಿದೆ.

ಡೇರಿಯಿಂದ ಅವೈಜ್ಞಾನಿಕ ತೀರ್ಮಾನ: ನಂದಿನಿ ಡೇರಿಯ ಆಡಳಿತ ಮಂಡಳಿಯ ಇತ್ತೀಚಿನ ಕೆಲ ತೀರ್ಮಾನಗಳು ಪಶುಸಂಗೋಪನೆಯನ್ನೇ ನೆಚ್ಚಿ ಬದುಕುತ್ತಿರುವ ರೈತರಿಗೆ ನುಂಗಲಾರದ ತುಪ್ಪವಾಗಿದೆ. ಹಾಲಿನ ಗುಣಮಟ್ಟ ಕಡಿಮೆಯಾದರೆ ಸರ್ಕಾರ ಪ್ರತಿ ಲೀಟರ್‌ಗೆ ನೀಡುವ 5 ರೂ. ನೀಡುವುದಿಲ್ಲ ಎಂಬ ಅವೈಜ್ಞಾನಿಕ ತೀರ್ಮಾನಗಳು ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎಂಬಂತಾಗಿದೆ.

ಖಾಸಗಿ ಡೇರಿಯಲ್ಲಿ ಕಲಬೆರಕೆ: ಖಾಸಗಿ ಡೇರಿಗಳಲ್ಲಿ ರೈತರಿಂದ ಹಾಲು ಖರೀದಿ ಮಾಡುತ್ತಾರೆ. ಹಾಲಿಗೆ ಹಾಲಿನ ಪೌಡರ್‌ ಮಿಶ್ರಣ ಮಾಡಿ, ಕಲಬೆರಕೆ ಮಾಡುತ್ತಿರುವ ವಿಚಾರ ಸರ್ಕಾರ ಹಾಗೂ ಆರೋಗ್ಯ ಇಲಾಖೆಗೆ ತಿಳಿದಿದೆ. ಆದರೂ ಸಹ ಸಾರ್ವಜನಿಕರ ಆರೋಗ್ಯದ ಮೇಲೆ ಆಗುತ್ತಿರುವ ದುಷ್ಪಾರಿಣಾಮ ತಡೆಗೆ ಯಾವುದೇ ಶಿಸ್ತು ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಪ್ರಾಮಾಣಿಕ ರೈತನಿಗೆ ನಷ್ಟವಾಗಿದ್ದು, ರೈತನು ಜಾನುವಾರುಗಳಿಗೆ ಮೇವು ಕತ್ತರಿಸುವ ಯಂತ್ರಕ್ಕೆ ಮೇವು ಬದಲಿಗೆ ತಲೆ ಕೊಡುವ ಪರಿಸ್ಥಿತಿ ಎದುರಾಗಿದೆ. ಇದರ ವಿರುದ್ಧ ಜನಪ್ರತಿನಿಧಿಗಳು, ಪ್ರಜ್ಞಾವಂತ ಯುವಕರು, ರೈತರು ಧ್ವನಿ ಎತ್ತಬೇಕಾಗಿದೆ.

ಅಧಿಕಾರಿಗಳಿಗೆ ರೈತರ ಕಷ್ಟದ ಅರಿವಿಲ್ಲ: ಕರ್ನಾಟಕ ಸರ್ಕಾರದ ಅಧೀನಕ್ಕೆ ಒಳಪಟ್ಟಿರುವ ಎಲ್ಲಾ ಹಾಲು ಒಕ್ಕೂಟಗಳು ಕೋಟಿಕಟ್ಟಲೆ ಲಾಭಾಂಶದಲ್ಲಿದೆ. ಅಲ್ಲಿಗೆ ಆಯ್ಕೆಯಾಗಿರುವ ನಿರ್ದೇಶಕರು ಸರಿಯಾಗಿ ರೈತರಪರ ನಿಲ್ಲದೇ ತಮ್ಮ ಸ್ವಾರ್ಥ ಹಿತಾಸಕ್ತಿ ಮಾತ್ರ ಯೋಚಿಸುತ್ತಾರೆ. ಸಾಮಾನ್ಯ ರೈತನು ಹಾಕಿದ ಹಾಲಿನ ಲಾಭದಿಂದ ತಿಂಗಳಿಗೆ ಅರ್ಧ ಲಕ್ಷಕ್ಕೂ ಹೆಚ್ಚಿಗೆ ಸಂಬಳ ಪಡೆಯುತ್ತಿರುವ ಅಧಿಕಾರಿಗಳಿಗೆ ಹಾಲು ಉತ್ಪಾದಕರ ಕಷ್ಟನಷ್ಟಗಳ ಅರಿವೇ ಇಲ್ಲವಾಗಿದೆ. ಇಷ್ಟೇ ಅಲ್ಲದೆ ಒಕ್ಕೂಟದಿಂದ ಕೊಡುವ 50 ಕೆ.ಜಿ.ಯ ಪಶು ಆಹಾರಕ್ಕೆ 980 ರೂ., ದುಬಾರಿ ಬೆಲೆಯನ್ನು ನಿಗದಿ ಮಾಡಿ, ರೈತರಿಗೆ ಎಲ್ಲಾ ವಿಧಗಳಲ್ಲೂ ನಷ್ಟ ಮಾಡುತ್ತಿದ್ದಾರೆ. ಇದರಿಂದ ಇನ್ನು ಮುಂದೆ ರೈತರು ನಾವೆಲ್ಲಾ ಹೇಗಪ್ಪಾ ಪಶುಸಂಗೋಪನೆಯಲ್ಲಿ ಜೀವನ ಮಾಡುವುದು ಎಂದು ನಿಟ್ಟುಸಿರು ಬಿಡುತ್ತಿದ್ದಾರೆ.

● ಬಿ.ರಂಗಸ್ವಾಮಿ

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.