ರಾಗಿ ಹಣ ಬಾಕಿ ಶೀಘ್ರ ಪಾವತಿಸಿ
Team Udayavani, May 12, 2019, 2:19 PM IST
ಹುಳಿಯಾರಿನ ಧನಂಜಯ ಅವರು ರಾಗಿ ಹಣ ಪಾವತಿ ಮಾಡುವಂತೆ ಒತ್ತಾಯಿಸಿದರು.
ಹುಳಿಯಾರು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ತೆಗೆಯಲಾಗಿದ್ದ ರಾಗಿ ಖರೀದಿ ಕೇಂದ್ರದಲ್ಲಿ ಮಾರ್ಚ್ ತಿಂಗಳಿನಲ್ಲಿ ರಾಗಿ ಮಾರಾಟ ಮಾಡಿದ್ದ ರೈತರಿಗೆ 2 ತಿಂಗಳಾದರೂ ಲಕ್ಷಾಂತರ ರೂ., ಬಾಕಿ ಹಣ ಪಾವತಿ ಮಾಡಿಲ್ಲ. ಕೂಡಲೇ ಪಾವತಿಸುವಂತೆ ರೈತರು ಆಗ್ರಹಿಸಿದ್ದಾರೆ. ಬಾಕಿ ಹಣದ ಬಗ್ಗೆ ರಾಗಿ ಖರೀದಿ ಕೇಂದ್ರದಲ್ಲಿ ವಿಚಾರಿಸಲು ಹೋದರೆ ಖರೀದಿ ಕೇಂದ್ರಕ್ಕೆ ಬೀಗ ಹಾಕಿದೆ. ಎಪಿಎಂಸಿಯವರು ನಮಗೂ ಇದಕ್ಕೂ ಸಂಬಂಧವಿಲ್ಲ. ನಾವು ಖರೀದಿ ಕೇಂದ್ರಕ್ಕೆ ಕೇವಲ ಜಾಗ ಕೊಟ್ಟಿದ್ದೇವೆ ಹೊರತು ನೀವು ಬಾಕಿ ಹಣವನ್ನು ಆಹಾರ ನಿಗಮದ ಅಧಿಕಾರಿಗಳನ್ನು ವಿಚಾರಿಸ ಬೇಕು ಎನ್ನುತ್ತಾರೆ.
ಅಧಿಕಾರಿಗಳಿಗೆ ಕರೆ ಮಾಡಿದರೆ ಹಣ ಈಗ ಬರುತ್ತದೆ. ಆಗ ಬರುತ್ತದೆ ಎಂದು ಸಬೂಬು ಹೇಳುತ್ತಲೇ ಮುಂದೆ ಹಾಕುತ್ತಿದ್ದಾರೆ. ಇದೇ ಸ್ಥಿತಿ ಮುಂದು ವರಿದರೆ ರಾಗಿ ಖರೀದಿ ಕೇಂದ್ರಗಳ ಮೇಲೆ ರೈತರಿಗೆ ನಂಬಿಕೆ ಹೊರಟು ಹೋಗುತ್ತದೆ ಎಂದು ರೈತ ಎಚ್.ವಿ. ಧನಂಜಯ ದೂರಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರು ತುರ್ತಾಗಿ ಗಮನ ಹರಿಸಬೇಕು, ಇಲ್ಲದಿದ್ದಲ್ಲಿ ಎಪಿಎಂಸಿ ಮುಂದೆ ಧರಣಿ ಕೂರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ