ರೈತರಿಗಾಗಿ ಕಾಯುತ್ತಿರುವ ರಾಗಿ ಖರೀದಿ ಸಿಬ್ಬಂದಿ!


Team Udayavani, Mar 25, 2021, 8:21 PM IST

Millet purchasing staff waiting for farmers!

ಹುಳಿಯಾರು: ಕಳೆದ 10 ದಿನಗಳ ಹಿಂದಷ್ಟೆ ರಾಗಿ ಖರೀದಿಗಾಗಿ ನೂಕುನುಗ್ಗಲು ಏರ್ಪಟ್ಟು ಗೊಂದಲ ನಿರ್ಮಾಣವಾಗಿದ್ದ ಹುಳಿಯಾರು ರಾಗಿ ಖರೀದಿ ಕೇಂದ್ರದಲ್ಲಿ ಈಗ ರೈತರಿಗಾಗಿಯೇ ಖರೀದಿ ಸಿಬ್ಬಂದಿ ಕಾಯುತ್ತಿರುವ ಸನ್ನಿವೇಶ ನಿರ್ಮಾಣವಾಗಿದೆ. ಹೌದು… ಹುಳಿಯಾರು ಎಪಿಎಂಸಿ ಆವರಣದಲ್ಲಿ 3,290 ರೂ. ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗಾಗಿ ಸರ್ಕಾರ ನಫೆಡ್‌ ಕೇಂದ್ರ ತೆರೆದಿತ್ತು. ಪ್ರಾರಂಭಿಕ ಅಂತವಾದ ನೋಂದಣಿ ಪ್ರಕ್ರಿಯೆಗೆ ರೈತರು ಮುಗಿಬಿದ್ದು ಹದಿನೈದಿಪ್ಪತ್ತು ದಿನಗಳಲ್ಲೇ 4,500 ರೈತರು ನೋಂದಣಿ ಮಾಡಿಸಿದರು. ಖರೀದಿ ಪ್ರಕ್ರಿಯೆ ಆರಂಭವಾದ ದಿನದಲ್ಲಿ ರಾಗಿ ಮಾರಲು ರೈತರು ನಾಮುಂದು, ತಾಮುಂದು ಎಂದು ಸಾಗರದಂತೆ ಹರಿದು ಬಂದರು.

ಲಾರಿ, ಟ್ರಾÂಕ್ಟರ್‌, ಟಾಟಾಏಸ್‌, ಎತ್ತಿನಗಾಡಿಗಳಲ್ಲಿ ರಾಗಿ ಚೀಲಗಳನ್ನು ತುಂಬಿಕೊಂಡು ಎಪಿಎಂಸಿ ಮಂದಿ ಜಮಾಯಿಸಿದರು. ಖರೀದಿ ಅಧಿಕಾರಿಗಳು ಬೆಳಗ್ಗೆ 8ರಿಂದ ಸಂಜೆ 7 ಸಮೀಪಿಸುವ ತನಕ ಖರೀದಿ ಮಾಡುತ್ತಿದ್ದರೂ ಸಹ ರೈತರ ಸರತಿ ಸಾಲು ಕರಗಲಿಲ್ಲ. ರಾತ್ರಿ, ಹಗಲು, ಬಿಸಿಲು, ಮಳೆಯೆನ್ನದೆ ಸರತಿಯಲ್ಲಿ ಕಾದಿದ್ದು ರಾಗಿ ಮಾರುತ್ತಿದ್ದರು. ಈ ಸಂದರ್ಭದಲ್ಲಿ ಟೊಕನ್‌ ಕೊಡುವ ವಿಚಾರದಲ್ಲಿ ರೈತರಲ್ಲೇ ಭಿನ್ನ ಮಾತುಗಳನ್ನು ಕೇಳುಬಂದವು.

ರೈತರ ಈ ಪರದಾಟ ನೋಡಲಾಗದೆ ಜಿಲ್ಲಾಧಿಕಾರಿಗಳೇ ಖುದ್ದು ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಮತ್ತೂಂದು ಕೌಂಟರ್‌ ತೆರೆದರು, ಭಾನುವಾರವೂ ಖರೀದಿಗೆ ಸೂಚಿಸಿದರು. ಅಲ್ಲದೆ ನೋಂದಾಯಿಸಿ ಎಲ್ಲ ರೈತರ ರಾಗಿಯನ್ನೂ ಖರೀದಿಸುತ್ತೇವೆ ತಾಳ್ಮೆಯಿಂದಿರಿ, ಒಮ್ಮೆಲೆ ಎಲ್ಲರೂ ಬಂದು ಖರೀದಿ ಸಿಬ್ಬಂದಿಯ ಉಸಿರು ಕಟ್ಟಿಸದೆ ನಿಧಾನವಾಗಿ ಬನ್ನಿ ಎಂದು ಮನವಿ ಮಾಡಿದ್ದರು.

ಟ್ರಾÂಕರ್‌r ನಿಂ¨ ರ ಾಗಿ ಇಳಿಸಲು ಪೈಪೋಟಿ: ರಾಗಿ ಖರೀದಿ ಸಹಾಯಕ್ಕಾಗಿ 31 ಹಮಾಲರು ಇದ್ದು ಪ್ರಾರಂ ಭಿಕ ದಿನಗಳಲ್ಲಿ ಒಬ್ಬೊಬ್ಬ ಹಮಾಲರು ದಿನಕ್ಕೆ 1,500 ರೂ. ಕೂಲಿ ಹಣ ಸಂಪಾದಿಸುತ್ತಿದ್ದರು. ಈಗ ದಿನಕ್ಕೆ ನೂರಿನ್ನೂರು ರೂ. ಸಂಪಾದಿಸಿದರೆ ಹೆಚ್ಚು ಎನ್ನುವಂತ್ತಾಗಿದೆ. ರಾಗಿ ಚೀಲ ಹೊತ್ತು ಬರುವ ಟ್ರಾÂಕ್ಟರ್‌ನಿಂದ ರಾಗಿ ಇಳಿಸಲು ಇವರ ನಡುವೆ ಪೈಪೋಟಿ ಶುರುವಾಗಿದೆ. ಹಾಗಾಗಿ ಯಾರೂ ಸಹ ಕೈ ತುಂಬ ಕೂಲಿ ಹಣ ಗಳಿಸಲಾಗುತ್ತಿಲ್ಲ. ಕೆಲವರಂತೂ ಬರಿಗೈಯಲ್ಲಿ ಹಿಂದಿರುಗಿದ ನಿದರ್ಶನವಿದೆ ಎನ್ನುತ್ತಾರೆ ಹಮಾಲರಾದ ಗುರುಮೂರ್ತಿ.

ಖರೀದಿಗೆ ಕೇವಲ 6 ದಿನಗಳು ಮಾತ್ರ ಬಾಕಿಯಿದ್ದು, ಇದರಲ್ಲಿ ನಾಲ್ಕನೆ ಶನಿವಾರ ಹಾಗೂ ಭಾನುವಾರ ರಜೆ ಕಳೆದರೆ ಉಳಿಯುವುದು 4 ದಿನವಾಗಿದೆ. ಈ ನಾಲ್ಕು ದಿನದಲ್ಲಿ ನಿತ್ಯ 100 ರೈತರ ರಾಗಿ ಖರೀದಿ ಮಾಡಬೇಕಿದೆ. ಅದರೆ ನಿತ್ಯ ಕೇವಲ ಮೂರ್‍ನಾಲ್ಕು ಮಂದಿ ರೈತರು ಮಾತ್ರ ಬರುತ್ತಿದ್ದು, ಉಳಿದ ರೈತರೆಲ್ಲರೂ ಒಮ್ಮೆಲೆ ಬಂದರೆ ಖರೀದಿ ಅಸಾಧ್ಯದ ಮಾತು. ಹಾಗಾಗಿ ಉಳಿದ ರೈತರು ತಕ Òಣ ಬಂದು ರಾಗಿ ಮಾರುವಂತೆ ಖರೀದಿ ಅಧಿಕಾರಿಯ ಮನವಿಯಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.