ಪ್ರಗತಿಯಲ್ಲಿ ಮಿನಿ ಕ್ರೀಡಾಂಗಣ ಕಾಮಗಾರಿ


Team Udayavani, May 15, 2022, 4:44 PM IST

ಪ್ರಗತಿಯಲ್ಲಿ ಮಿನಿ ಕ್ರೀಡಾಂಗಣ ಕಾಮಗಾರಿ

ತುಮಕೂರು: ನಗರದ ಸರ್ಕಾರಿ ಕಿರಿಯ ಕಾಲೇಜು ಮೈದಾನದಲ್ಲಿ ನಿರ್ಮಾಣವಾಗುತ್ತಿರುವ ವಿವಿಧ ಕ್ರೀಡೆಗಳ ಮಿನಿ ಸ್ಟೇಡಿಯಂನ ಕಾಮಗಾರಿಯನ್ನು 15ನೇ ವಾರ್ಡ್‌ನ ಕಾರ್ಪೋರೆಟರ್‌ ಗಿರಿಯಾ ಧನಿಯಕುಮಾರ್‌ ಹಾಗೂ ಕ್ರೀಡಾಪಟುಗಳು ವೀಕ್ಷಣೆ ನಡೆಸಿ, ಹಲವು ಸಲಹೆ, ಸೂಚನೆಗಳನ್ನು ನೀಡಿದರು.

ನಗರದ ಮಹಾತ್ಮಗಾಂಧಿ ಕ್ರೀಡಾಂಗಣವನ್ನು ಫ‌ುಟ್‌ ಬಾಲ್‌ ಮತ್ತು ಅಥ್ಲೆಟಿಕ್‌ ಕ್ರೀಡೆಗಳಿಗೆ ಸೀಮಿತಗೊಳಿಸಿದ ನಂತರ, ಬೇರೆ ಕ್ರೀಡಾಪಟುಗಳ ಅನುಕೂಲಕ್ಕಾಗಿ ಈ ಹಿಂದೆ ಖೋ-ಖೋ, ಕಬಡ್ಡಿ, ವಾಲಿಬಾಲ್‌ ಕ್ರೀಡೆಗಳು ನಡೆಯುತ್ತಿದ್ದ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದ ಪೂರ್ವ ಭಾಗದಲ್ಲಿ ಸುಮಾರು 3.63 ಕೋಟಿ ರೂ.ಗಳಲ್ಲಿ ಹಲವು ಕ್ರೀಡಾ ಅಂಕಣಗಳನ್ನು ಒಳಗೊಂಡ ಮಿನಿ ಸ್ಟೇಡಿಯಂಅನ್ನು ಹೃದಯ ಭಾಗದಲ್ಲಿರುವ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ನಿರ್ಮಿಸುತ್ತಿದ್ದು, ಇದರ ವೀಕ್ಷಣೆ ನಡೆಸಲಾಯಿತು.

ಸೌಕರ್ಯ: ಈ ವೇಳೆ ಮಾತನಾಡಿದ ಕಾರ್ಪೊàರೆಟರ್‌ ಗಿರಿಜಾ ಧನಿಯಕುಮಾರ್‌, ಸ್ಮಾರ್ಟ್‌ಸಿಟಿ ಅನು ದಾನದ 3.63 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಈ ಮಿನಿ ಕ್ರೀಡಾಂಗಣ ಬಹು ಉಪಯೋಗಿಯಾಗಿದೆ. ಒಂದೇ ಬಾರಿಗೆ ಐದಾರು ಕ್ರೀಡೆಗಳಲ್ಲಿ ಈ ಮೈದಾನದಲ್ಲಿ ಆಡಿಸಬಹುದಾಗಿದೆ. ಈ ಹಿಂದೆ ಕ್ರೀಡಾಕೂಟ ನಡೆದರೆ, ಆಯೋಜಕರೇ ಸ್ಟೇಜ್‌, ವೀಕ್ಷಕರ ಗ್ಯಾಲರಿ, ಹೊನಲು ಬೆಳಕಿನ ವ್ಯವಸ್ಥೆ ಮಾಡಬೇಕಾಗಿತ್ತು. ಲಕ್ಷಾಂತರ ರೂ.ಗಳ ಖರ್ಚು ತಗಲುತ್ತಿತ್ತು. ಆದರೆ ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್‌ ಅವರು ಸ್ಮಾರ್ಟ್‌ಸಿಟಿ ಅನುದಾನದಲ್ಲಿ ಸ್ಟೇಜ್‌, ಗ್ಯಾಲರಿ, ಕ್ರೀಡಾಪಟುಗಳ ಗ್ರೀನ್‌ ರೂಮ್‌, ಶೌಚಾಲಯ, ಪೆಡ್‌ಲೈಟ್‌, ಕ್ರೀಡಾಪಟುಗಳ ಚಲನ ವಲನ ವೀಕ್ಷಣೆಗೆ ಸಿಸಿಟಿವಿ ಕ್ಯಾಮರಾ, ಶೌಚಾಲಯ ಒಳಗೊಂಡಂತೆ ಸುಸಜ್ಜಿತ ಮಿನಿ ಕ್ರೀಡಾಂಗಣ ವನ್ನು ನಿರ್ಮಿಸಿಕೊಟ್ಟಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಹೇಳುತ್ತೇವೆ. ಜೊತೆಗೆ ಸ್ಮಾರ್ಟ್‌ಸಿಟಿ ಯವರು ಬಹುಬೇಗ ಕಾಮಗಾರಿ ಮುಗಿಸಿ ಕ್ರೀಡಾಂಗಣವನ್ನು ಬಿಟ್ಟುಕೊಡಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು.

ಉನ್ನತ ಹುದ್ದೆ: ವಿವೇಕಾನಂದ ಕ್ರೀಡಾಸಂಸ್ಥೆ ಸದಸ್ಯ ಹಾಗೂ ಕ್ರೀಡಾಪಟು ಸುನೀಲ್‌ಕುಮಾರ್‌ ಮಾತ ನಾಡಿ, ವಿವೇಕಾನಂದ ಕ್ರೀಡಾಸಂಸ್ಥೆ 1979 ರಿಂದಲೂ ನಗರದಲ್ಲಿ ಖೋ-ಖೋ ಕ್ರೀಡೆಯನ್ನು ಬೆಳೆಸುತ್ತಾ ಬಂದಿದೆ. ಇಲ್ಲಿ ಆಟವಾಡಿದ ಸಾವಿರಾರು ವಿದ್ಯಾರ್ಥಿ ಗಳು ಕ್ರೀಡಾಕೋಟಾ ಅಡಿಯಲ್ಲಿ ಸರ್ಕಾರಿ ಹುದ್ದೆಗಳನ್ನು ಪಡೆದಿರುವುದಲ್ಲದೇ ಇಂಜಿನಿಯ ರಿಂಗ್‌, ಮೆಡಿಕಲ್‌ ಸೀಟು ಪಡೆದು ಉನ್ನತ ಹುದ್ದೆಗಳಿಗೆ ಹೋಗಿದ್ದಾರೆ. ರಾಜ್ಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟ ಗಳಲ್ಲಿಯೂ ಪಾಲ್ಗೊಂಡು ಜಿಲ್ಲೆಗೆ ಕೀತಿ ತಂದಿದ್ದಾರೆ. ಮೊದಲು ಕ್ರೀಡಾಕೂಟ ನಡೆಸಲು ಸಾಕಷ್ಟು ಖರ್ಚು ಬರುತ್ತಿತ್ತು. ಈಗ ಎಲ್ಲವೂ ಸಿದ್ಧವಿದೆ. ಕ್ರೀಡಾಪಟು ಗಳಷ್ಟೇ ಬಂದರೆ ಸಾಕು. ಇದಕ್ಕಾಗಿ ಶಾಸಕರಿಗೆ, ಕೌನ್ಸಿಲರ್‌ಗಳಿಗೆ, ಇದಕ್ಕೆ ಸಹಕರಿಸಿದ ಕ್ರೀಡಾಪಟುಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಈ ವೇಳೆ ವಿವೇಕಾನಂದ ಕ್ರೀಡಾ ಸಂಸ್ಥೆಯ ಸಂಸ್ಥಾಪಕ ಎಸ್‌.ಡಿ.ರಾಜಶೇಖರ್‌, ಪತಿಕೋದ್ಯಮಿ ಎಸ್‌.ನಾಗಣ್ಣ, ಯಂಗ್‌ಚಾಲೆಂಜರ್ನ ಸಂಜಯ್‌, ಕನ್ನಡ ಸೇನೆಯ ಧನಿಯಕುಮಾರ್‌, ಕ್ರೀಡಾಪಟು ಗಳಾದ ಪ್ರಿತಮ್‌,ಉಮೇಶ್‌,ಹಿರಿಯ ಕ್ರೀಡಾಪಟು ಟಿ.ಕೆ.ಆನಂದ್‌,ಪ್ರಕಾಶ್‌, ಅಧಿಕಾರಿಗಳಾದ ಎಇಇ ವಿನಯ್‌ರಾಜ್‌, ಅರ್ಕಿಟೆಕ್‌ ಜಾವಿಡ್‌ ದೊಡ್ಡಮನಿ, ಮ್ಯಾನೇಜರ್‌ ಸಿದ್ದರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜಿಮ್‌ ಸಾರ್ವಜನಿಕರಿಗೆ ಮುಕ್ತಗೊಳಿಸಲಿ : ಚಕ್ರವರ್ತಿ ಗೆಳೆಯರ ಬಳಗದ ಪ್ರಕಾಶ್‌ ಮಾತ ನಾಡಿ, ಕ್ರೀಡಾಂಗಣ ಚನ್ನಾಗಿ ಮೂಡಿಬರುತ್ತಿದೆ. ಆದರೆ ಕೆಲಸ ನಿಧಾನಗತಿಯಲ್ಲಿ ನಡೆಯುತ್ತಿದೆ. ಸಾಧ್ಯವಾದಷ್ಟು ಬೇಗ ಕಾಮಗಾರಿ ಮುಗಿಸಿ ಕೊಟ್ಟರೆ ಕ್ರೀಡಾಪಟುಗಳಿಗೆ ಹೆಚ್ಚಿನ ಅನುಕೂಲ ವಾಗಲಿದೆ. ಜೊತೆಗೆ ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿರುವ ಜಿಮ್‌ನ್ನು ಸಾರ್ವ ಜನಿಕರಿಗೆ ಮುಕ್ತಗೊಳಿಸಿದರೆ ಹೆಚ್ಚಿನ ಉಪಯೋಗವಾಗಲಿದೆ ಎಂದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.