ಮನೆ ಕಳೆದುಕೊಂಡ ವೃದ್ದೆಗೆ 90 ಸಾವಿರ ರೂ ಚೆಕ್ ನೀಡಿದ ಸಚಿವ ಆರ್ ಆಶೋಕ್‌

ಜಿಲ್ಲಾಧಿಕಾರಿಗಳ ಖಾತೆಗೆ ಹೆಚ್ಚುವರಿಯಾಗಿ 500 ಕೋಟಿ ರೂ

Team Udayavani, Aug 4, 2022, 9:52 PM IST

22ashok

ಕುಣಿಗಲ್: ಮಳೆಯ ಹಾನಿಯಿಂದ ರಾಜ್ಯದಲ್ಲಿ ಇದುವರೆಗೂ 15 ಸಾವಿರ ಮನೆಗಳು ಹಾನಿಗೆ ಒಳಗಾಗಿದ್ದು ಮನೆ ಹಾಗೂ ಪ್ರಾಣ ಹಾನಿಯಾದ ಕುಟುಂಬಗಳಿಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಈಗಾಗಲೇ ಎಂಟು ನೂರು ಕೋಟಿ ಹಣವಿದ್ದು, ಇದಲ್ಲದೇ ಹೆಚ್ಚುವರಿಯಾಗಿ 500 ಕೋಟಿ ರೂಗಳನ್ನು ಶುಕ್ರವಾರ ಬಿಡುಗಡೆ ಮಾಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಗುರುವಾರ ತಾಲೂಕಿನ ಎಡಿಯೂರು ಹೋಬಳಿ ನಾಗೇಗೌಡನಪಾಳ್ಯ ಗ್ರಾಮಕ್ಕೆ ಬೇಟಿ ನೀಡಿದ ಸಚಿವರು ಮಳೆಯಿಂದ ಮನೆ ಕಳೆದುಕೊಂಡ ಗಂಗಮ್ಮ ಅವರಿಗೆ 90 ಸಾವಿರ ರೂ ಪರಿಹಾರ ಚೆಕ್  ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ  ಬಿಜೆಪಿ ಸರ್ಕಾರ ಬಡವರ, ದೀನ ದಲಿತರ ಪರವಾಗಿದೆ ಕೆಲಸ ಮಾಡುತ್ತಿದೆ. ಮಳೆ ಹಾನಿಯಿಂದ ನೊಂದವರ ಪರವಾಗಿ ನಿಂತಿದೆ. ಈಗಾಗಲೇ ಬೆಳೆ ಪರಿಹಾರಕ್ಕೆ ಎರಡು ಪಟ್ಟು ಹಣವನ್ನು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ಈ ಹಿಂದೆಯೂ ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲೂ ಸಹಾ ಎರಡು ಪಟ್ಟು ಹಣ ಘೋಷಣೆ ಮಾಡಿದರು. ಅದರಂತೆ ಜನರಿಗೆ ಹಂಚಿಕೆ ಮಾಡಲಾಗಿದೆ. ನಮ್ಮ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಮಳೆ ಹೆಚ್ಚಾಗಿದೆ. ಅಂತರ್ಜಲ ಮಟ್ಟ ವೃದ್ದಿಯಾಗಿದೆ. ಜತೆಗೆ ಜನರಿಗೆ  ಸ್ಪಲ್ಪ ತೊಂದರೆಯೂ ಆಗಿದೆ. ಬಡವರಿಗೆ ತೊಂದರೆಯಾಗಬಾರದೆಂದು ನಮ್ಮ ಸರ್ಕಾರ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಪ್ರಕೃತಿ ವಿಕೋಪದಿಂದ ಪ್ರಾಣ ಕಳೆದುಕೊಂಡವರಿಗೆ, ಪರಿಪೂರ್ಣ ಮನೆ ಕಳೆದುಕೊಂಡವರಿಗೆ ತಲಾ ಐದು ಲಕ್ಷ ರೂಗಳನ್ನು ಪರಿಹಾರವಾಗಿ ನೀಡಲಾಗುತ್ತಿದೆ ಎಂದರು.

ಇದನ್ನೂ ಓದಿ: ಡಿಕೆಶಿ ಯಾರ ಕೈ ಹಿಡಿದು ಮೇಲೆತ್ತುವರೋ ಅವರು ಬೀದಿಗೆ:  ಸಚಿವ ಆರ್‌.ಅಶೋಕ್‌ ಲೇವಡಿ

ಹುಟ್ಟು ಹಬ್ಬ ಆಚರಣೆಯಲ್ಲಿ ವಿಪಕ್ಷ ನಾಯಕರು: ವಿರೋಧ ಪಕ್ಷಗಳು ನಮ್ಮ ಸರ್ಕಾರದ ಬಗ್ಗೆ ಏನೇ ಟೀಕೆ ಟಿಪ್ಪಣಿ ಮಾಡಲಿ, ಅದನ್ನು ನಾವು ಗಣನೆಗೆ ತೆಗೆದುಕೊಳ್ಳುವುದಿಲ್ಲ, ಅವರೆಲ್ಲರೂ ಹುಟ್ಟು ಹಬ್ಬದ ಆಚರಣೆಯಲ್ಲಿ ಇದ್ದಾರೆ. ನಾವು ಅನಾಹುತ ನಡೆದ ಕಡೆ ಸುತ್ತುತ್ತಿದ್ದೇವೆ ಎಂದು ಸಿದ್ದರಾಮೋತ್ಸವ  ಆಚರಣೆ ಬಗ್ಗೆ ಪರೋಕ್ಷವಾಗಿ ಟೀಕಿಸಿದರು.

ಹಣಕ್ಕೆ ಕೊರತೆ ಇಲ್ಲ: ರಾಜ್ಯದಲ್ಲಿ ಎಲ್ಲೇ ಹಾನಿ ಉಂಟಾದರೂ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲು ಈಗಾಗಲೇ ಸೂಚಿಸಿದ್ದೇನೆ, ಯಾರು ಸಹಾ ರಜೆ ತೆಗೆದುಕೊಳ್ಳಬಾರದು ಬಡವರ ಪರವಾಗಿ, ಕಷ್ಟದಲ್ಲಿ ಇರುವ ಜನರೊಂದಿಗೆ ನಿಂತು, ಸಂಕಷ್ಟ ಸಮಯದಲ್ಲಿ ಕೆಲಸ ಮಾಡುವಂತೆ ತಿಳಿಸಿದ್ದೇನೆ. ಸರ್ಕಾರದಲ್ಲಿ ಹಣದ ಕೊರತೆ ಇಲ್ಲ ಹಾಗಾಗಿ ಎಷ್ಟೇ ಹಣ ಬೇಕಾದರೂ ನಾವು ಕೊಡಲು ಸಿದ್ದರಿದ್ದೇವೆ. ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 800 ಕೋಟಿಗೂ ಹೆಚ್ಚು ಹಣ ಇದೆ. ನಾಳೆ ಮತ್ತೆ 500 ಕೋಟಿ ಹಣ ಬಿಡುಗಡೆ ಮಾಡುತ್ತಿದ್ದೇನೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಗೆ ಕಳಿಸಿಕೊಡುತ್ತೇನೆ. ತ್ವರಿತವಾಗಿ ಬಡವರಿಗೆ ಸೌಲಭ್ಯಗಳು ಸಿಗಬೇಕು. ಆ ಕೆಲಸವನ್ನು ಅಧಿಕಾರಿಗಳು ಮಾಡಲಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಇದುವರೆಗೂ 15 ಸಾವಿರ ಮನೆಗಳಿಗೆ ಹಾನಿಯಾಗಿವೆ. ಈ ಪೈಕಿ ಎರಡು ಸಾವಿರ ಮನೆಗಳು ಭಾಗಶಃ ಹಾನಿಯಾದರೆ, 900 ಮನೆ  ಪೂರ್ಣ ಪ್ರಮಾಣದಲ್ಲಿ ಹಾನಿಗೆ ಒಳಗಾಗಿವೆ. ಮಳೆ ನಿಂತ ಮೇಲೆ ಸಂಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಿದರು.

ಸದ್ಬಳಕ್ಕೆಗೆ ಸೂಚನೆ: ಮನೆ ಯಾವಾಗ ಬಿತ್ತು, ಮನೆಯಲ್ಲಿ ಯಾರ ಯಾರು ಇದ್ದೀರ ಏನು ತೊಂದರೆಯಾಗಲಿಲ್ಲವೇ ಎಂದು ಸಂತ್ರಸ್ತ ಮಹಿಳೆ ಗಂಗಮ್ಮ ಅವರನ್ನು ಸಚಿವರು ಕೇಳಿದರು. ಸ್ವಾಮಿ ನನ್ನ ಮಗ ಹಾಗೂ ಸೋಸೆ, ಮೊಮ್ಮಕ್ಕಳು ಎಲ್ಲಾ ಬೆಂಗಳೂರಿನಲ್ಲಿ ಇದ್ದಾರೆ. ನಾನೋಬ್ಬಳೇ ನನ್ನ ಮನೆಯಲ್ಲಿ ಇದ್ದೇನೆ. ಮೊನ್ನೆ ಮುಂಜಾನೆ ಇದ್ದಕ್ಕಿದಂತೆ ದೊಡ್ಡ ಪ್ರಮಾಣದ ಶಬ್ದವಾಯಿತು. ಎದ್ದು ನೋಡುತ್ತಿದಂತೆ ಮನೆಯ ಗೋಡೆ ಬಿದ್ದಿತು. ತಕ್ಷಣ ಎಚ್ಚರಗೊಂಡು ಹೊರಗೆ ಹೋಡಿ ಬಂದೆ ಪ್ರಾಣಕ್ಕೆ ಯಾವುದೇ ತೊಂದರೆಯಾಗಲಿಲ್ಲ ಸ್ವಾಮಿ ಎಂದು ವೃದ್ದ ಮಹಿಳೆ ಹೇಳಿದರು. ತಾತ್ಕಾಲಿಕ 90 ಸಾವಿರ ರೂ ಚೆಕ್ ನೀಡಲಾಗಿದೆ ಇನ್ನು ನಾಲ್ಕು ಲಕ್ಷ ರೂ ಕೋಡಲಾಗುವುದು. ಈ ಹಣವನ್ನು ಮನೆಯ ದುರಸ್ಥಿಗೆ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಹಣ ದುರುಪಯೋಗ ಮಾಡಿಕೊಳ್ಳಬಾರದೆಂದು ಸಂತ್ರಸ್ತ ಮಹಿಳೆಗೆ ಸಚಿವರು ತಿಳಿಸಿದರು.

ಈ ವೇಳೆ ಅಬಕಾರಿ ಸಚಿವ ಗೋಪಾಲಯ್ಯ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಉಪ ವಿಭಾಗಾಧಿಕಾರಿ ಅಜಯ್, ತಹಶೀಲ್ದಾರ್ ಮಹಬಲೇಶ್ವರ ಇದ್ದರು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.