
ತಾಯಿ-ಅವಳಿ ಶಿಶು ಸಾವು:ತಪ್ಪಿತಸ್ಥರ ವಿರುದ್ಧ ಕ್ರಮ: ಡಾ| ಕೆ. ಸುಧಾಕರ್
Team Udayavani, Nov 16, 2022, 11:44 PM IST

ತುಮಕೂರು: ಕಳೆದ ಹತ್ತು ದಿನಗಳ ಹಿಂದೆ ಭಾರತಿ ನಗರದ ಮಹಿಳೆ ಹಾಗೂ ಅವಳಿ ಶಿಶು ಸಾವು ಪ್ರಕರಣದಲ್ಲಿ ತಾಯಿ ಹಾಗೂ ಮಕ್ಕಳ ಸಾವಿಗೆ ಕಾರಣರಾದವರ ಮೇಲೆ ಕಠಿನ ಕಾನೂನು ಕ್ರಮ ಜರಗಿಸಲಾಗುವುದು. ತನಿಖಾ ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ತಿಳಿಸಿದರು.
ನಗರದಲ್ಲಿ ಬುಧವಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ವೇಳೆ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ನಗರದ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿದ ಸಚಿವ ಡಾ| ಕೆ. ಸುಧಾಕರ್, ಇತ್ತೀಚೆಗೆ ತಾಯಿ ಮತ್ತು ಅವಳಿ ಶಿಶುಗಳ ಸಾವು ಸಂಭವಿಸಿ, ತಾಯಿಯನ್ನು ಕಳೆದುಕೊಂಡು ಅನಾಥವಾಗಿರುವ ಬಾಲಕಿಯ ಶಿಕ್ಷಣ, ಭದ್ರತೆ ಹಾಗೂ ಭವಿಷ್ಯಕ್ಕಾಗಿ ಆರೋಗ್ಯ ಇಲಾಖೆ ವತಿಯಿಂದ 10 ಲಕ್ಷ ರೂ. ಚೆಕ್ ಅನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರಾ ಅವರಿಗೆ ವಿತರಿಸಿದರು.
ಬಾಲಕಿಯ ಕೈಗೆ ಹೊಸ ಬಟ್ಟೆ, ಹಣ್ಣು ಮತ್ತು ಸಿಹಿ ತಿಂಡಿ ವಿತರಿಸಿದ ಸಚಿವರು ಅನಂತರ ಬಾಲ ಮಂದಿರವನ್ನು ಪರಿಶೀಲಿಸಿದರು. ಬಾಲಕಿಯ ಹೆಸರಿಗೆ ಆರೋಗ್ಯ ಇಲಾಖೆಯಿಂದ 10 ಲಕ್ಷ ರೂ. ಎಫ್ಡಿ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್ ನ ಶಿವಲಿಂಗೇಗೌಡ

ದೇವಸ್ಥಾನ ಜೀರ್ಣೋದ್ದಾರ ವೇಳೆ: ಚೋಳರಕಾಲದ 65 ಚಿನ್ನದ ನಾಣ್ಯ ಪತ್ತೆ

ಹಾಸನ ಟಿಕೆಟ್ ವಿಚಾರ; ಒತ್ತಡ ಹೇರಬೇಡಿ ಎಂದ ದೇವೇಗೌಡ
MUST WATCH
ಹೊಸ ಸೇರ್ಪಡೆ

ಗೌಡ್ರ ಅಭಿಮಾನಿಗಳೂ…ಕಾಗೇರಿ ಅವರ ಫ್ಯಾನ್ಸ್…! ; ಸೆಲ್ಫಿಗೆ ಮುಗಿಬಿದ್ದರು

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ