ಅಂಗಡಿ ಮಳಿಗೆಗಳ ಹರಾಜಿಗೆ ಪುರಸಭೆ ಸಿದ್ಧತೆ


Team Udayavani, Feb 24, 2021, 2:45 PM IST

ಅಂಗಡಿ ಮಳಿಗೆಗಳ ಹರಾಜಿಗೆ ಪುರಸಭೆ ಸಿದ್ಧತೆ

ಚಿಕ್ಕನಾಯಕನಹಳ್ಳಿ: ಆದಾಯ ಹೆಚ್ಚಿಸಲು ಪುರಸಭೆ ಅಧಿಕಾರಿಗಳು, ಸದಸ್ಯರು ನಿರ್ಧರಿಸಿದ್ದು ಮಳಿಗೆಗಳನ್ನು ಹರಾಜು ಮಾಡಲು ಸಿದ್ಧತೆ ಕೈಗೊಂಡಿದ್ದಾರೆ. ಹಲವು ವರ್ಷಗಳಿಂದ ಹರಾಜಾಗದೇ ಮಳಿಗೆಗಳು ಉಳಿದಿವೆ. ಅಲ್ಲದೇ, ಅವಧಿ ಮುಗಿದ ಮಳಿಗೆಗಳಿಗೆ ಮುಖ್ಯಾಧಿಕಾರಿ ಶ್ರೀನಿವಾಸ್‌ ನೋಟಿಸ್‌ ಜಾರಿಗೊಳಿಸಿದ್ದಾರೆ. ಹೀಗಾಗಿ ವ್ಯಾಪಾರಿಗಳು ಒಂದು ವಾರ ಸಮಯಾವಕಾಶ ಕೇಳಿದ್ದಾರೆ.

ಪಟ್ಟಣದ ಹೃದಯ ಭಾಗದ ಅಂಗಡಿ ಮಳಿಗೆಗಳಿಂದ ಪುರಸಭೆಗೆ ಅತೀ ಕಡಿಮೆ ಬಾಡಿಗೆ ಸಂದಾಯವಾಗುತ್ತಿದ್ದು, 2009 ರಲ್ಲಿಯೇ ಪುರಸಭೆ ಮಳಿಗೆಗಳ ಬಾಡಿಗೆಕರಾರು ಮುಗಿದಿದ್ದರೂ ಮಳಿಗೆ ಹರಾಜು ನಡೆದಿಲ್ಲ. ಇನ್ನೂ 25 ವರ್ಷಗಳ ಹಿಂದಿನ ದರದಲ್ಲಿ ಬಾಡಿಗೆ ಸ್ವೀಕರಿಸುತ್ತಿರುವ ಪುರಸಭೆ,ಪ್ರತಿ ತಿಂಗಳು ಸುಮಾರು 2 ಲಕ್ಷ ನಷ್ಟ ಅನುಭವಿಸುತ್ತಿದೆ. ಮುಖ್ಯಾಧಿಕಾರಿ ಶ್ರೀನಿವಾಸ್‌, ಸರ್ವ ಸದಸ್ಯರು ಅಂಗಡಿಗಳನ್ನು ಖಾಲಿ ಮಾಡಿಸಿ ಪ್ರಸ್ತುತ ದರಕ್ಕೆ ಹರಾಜುಮಾಡಲು ತೀರ್ಮಾನಿಸಿದ್ದಾರೆ. ಯಾವ ವಿಘ್ನ ಬರದಿದ್ದರೆ ಸುಮಾರು 3-4 ಲಕ್ಷ ಪುರಸಭೆಗೆ ಆದಾಯ ಬರುವುದರಲ್ಲಿ ಅನುಮಾನವಿಲ್ಲ.

ವಾರ್ಷಿಕ 30 ಲಕ್ಷ ರೂ. ನಷ್ಟ: ಪುರಸಭೆಗೆ ಸಂಬಂಧಿಸಿದ 120 ಮಳಿಗೆಗಳಿದ್ದು ಇವುಗಳಲ್ಲಿ 29 ಮಳಿಗೆಗಳ ಹರಾಜಿಗೆ ಕೋರ್ಟ್‌ತಡೆಯಾಜ್ಞೆ ನೀಡಿದೆ. 60 ಮಳಿಗೆಗಳು ಹರಾಜಿಗೆ ಸಿದ್ಧವಾಗಿವೆ. ಉಳಿದ ಮಳಿಗೆಗಳ ಕಾಲಾವಧಿ ಇನ್ನೂ ಬಾಕಿ ಇದೆ. ಮಳಿಗೆಗಳಿಂದಕನಿಷ್ಠ 800 ರಿಂದ ಗರಿಷ್ಠ 2500 ಪುರಸಭೆಗೆ ಬಾಡಿಗೆ ಬರುತ್ತಿದೆ. ಪ್ರಸು§ತ ಇವುಗಳ ಬಾಡಿಗೆ ದರ ಹೆಚ್ಚಾಗಿದ್ದು ಇವುಗಳನ್ನು ಮರು ಹರಾಜು ಮಾಡಿದರೆ ಪುರಸಭೆ ಪ್ರತಿ ತಿಂಗಳು 2.5 ಲಕ್ಷದಿಂದ 3ಲಕ್ಷದವರೆಗೆ ಆದಾಯ ಬರುತ್ತದೆ. 2009ಕ್ಕೆ ಬಹುತೇಕ ಮಳಿಗೆಗಳ ಬಾಡಿಗೆ ಕರಾರು ಮುಗಿದು ಹೋಗಿದ್ದು, 2021 ಕಳೆಯುತ್ತಿದ್ದರೂ ಹರಾಜಿಗೆ ಮನಸ್ಸು ಮಾಡಿರಲಿಲ್ಲ. ಈಗಿನ ಮುಖ್ಯಾಧಿಕಾರಿ ಶ್ರೀನಿವಾಸ್‌, ಸದಸ್ಯರ ಬೆಂಬಲದೊಂದಿಗೆ ಹರಾಜು ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಕಾಲಾವಕಾಶ: ಕಾನೂನಾತ್ಮಕವಾಗಿ ಗಡುವು ಮುಗಿದಿರುವ ಅಂಗಡಿ ಮಳಿಗೆ ಖಾಲಿ ಮಾಡಲು ಮಾ.1ರವರೆಗೆ ಅಂಗಡಿ ಮಳಿಗೆ ವ್ಯಾಪಾರಿಗಳು ಸಮಯ ಕೇಳಿದ್ದಾರೆ.ಸೋಮವಾರ ಮಳಿಗೆ ಖಾಲಿ ಮಾಡದಿದ್ದರೆಪೊಲೀಸರ ಸಹಕಾರದೊಂದಿಗೆ ಖಾಲಿಮಾಡಿಸಲು ಮುಂದಾಗುತ್ತೇವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಗಡಿ ಮಳಿಗೆಗಳನ್ನು ಹರಾಜು ಮಾಡಿದರೆ ಪುರಸಭೆ ಆದಾಯ ಹೆಚ್ಚುತ್ತದೆ. ಪಟ್ಟಣ ಅಭಿವೃದ್ಧಿಗೆ ಹಣವನ್ನು ಬಳಕೆ ಮಾಡಿಕೊಳ್ಳಬಹುದು,ಈ ಬಗ್ಗೆ ಸಾಮಾನ್ಯ ಸಭೆಯಲ್ಲಿ ಸದಸ್ಯರು ಮಳಿಗೆಹರಾಜಿಗೆ ಸಹಮತ ವ್ಯಕ್ತಪಡಿಸಿದ್ದಾರೆ. ವ್ಯಾಪಾರಿಗಳು ಸೋಮವಾರದವರೆಗೆ ಮಳಿಗೆ ಖಾಲಿ ಮಾಡಲು ಅವಕಾಶ ಕೇಳಿದ್ದಾರೆ. ಶ್ರೀನಿವಾಸ್‌, ಚಿಕ್ಕನಾಯಕನಹಳ್ಳಿ ಪುರಸಭೆ ಮುಖ್ಯಾಧಿಕಾರಿ

 

ಚೇತನ್‌

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.