3 ವರ್ಷ ಕಳೆದರೂ ಬಾಕಿ ಹಣ ನೀಡದ ಪುರಸಭೆ


Team Udayavani, Jan 10, 2020, 3:36 PM IST

tk-tdy-1

ಚಿಕ್ಕನಾಯಕನಹಳ್ಳಿ: ಪಟ್ಟಣದ 23 ವಾರ್ಡ್‌ ಹಾಗೂ ಸರ್ಕಾರಿ ಕಚೇರಿಗಳಿಗೆ ಟ್ಯಾಂಕರ್‌ ನೀರು ಸರಬರಾಜು ಮಾಡಿದ ಬಾಕಿ ಹಣ 3 ವರ್ಷ ಕಳೆದರೂ ನೀಡಿಲ್ಲ ಎಂದು ಟ್ಯಾಂಕರ್‌ ಮಾಲೀಕರು ಪುರಸಭೆ ಮುಂದೆ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ್ದಾರೆ.

2016-17ನೇ ಸಾಲಿನಲ್ಲಿ ಭೀಕರ ಬರಗಾಲದಿಂದ ಪುರಸಭೆಯ ಕುಡಿಯುವ ನೀರಿನ ಬೋರ್‌ವೆಲ್‌ ಗಳು ನೀರಿಲ್ಲದೆ ಬತ್ತಿ ಹೋಗಿತ್ತು. ಈ ಸಂದರ್ಭ ಖಾಸಗಿ ಟ್ಯಾಂಕರ್‌ ಮೂಲಕ ಪ್ರತಿ ವಾರ್ಡ್‌ಗೆ 4ರಂತೆ 92 ಟ್ಯಾಂಕರ್‌ ಹಾಗೂ ಸರ್ಕಾರಿ ಕಚೇರಿಗಳು, ಪೊಲೀಸ್‌ ಸ್ಟೇಷನ್‌, ಬಿಇಒ ಕಚೇರಿ, ತಾಲೂಕು ಕಚೇರಿ ಶಾಲ ಕಾಲೇಜು, ಪಶು ಆಸ್ಪತ್ರೆ, ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಇತರೆ ಸರ್ಕಾರಿ ಕಚೇರಿಗಳಿಗೆ ಒಟ್ಟು ಪ್ರತಿ ದಿನ ಸುಮಾರು 120 ಟ್ಯಾಂಕರ್‌ ನೀರು ಸರಬರಾಜು ಮಾಡಲಾಗಿದೆ. ಸುಮಾರು 5 ತಿಂಗಳು ಪ್ರತಿ ದಿನ ವಾರ್ಡ್‌ಗಳಿಗೆ ನೀರು ಸರಬರಾಜು ಮಾಡಿದ ಖಾಸಗಿ ಟ್ಯಾಂಕರ್‌ ಮಾಲೀಕರಿಗೆ 3 ವರ್ಷ ಕಳೆದರೂ 27.28 ಲಕ್ಷ ರೂ. ಬಾಕಿ ಹಣ ನೀಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ನೀರು ನೀಡಿದವರಿಗೆ ಮೋಸ: ಖಾಸಗಿ ಟ್ಯಾಂಕರ್‌ ಮಾಲೀಕ ರಮೇಶ್‌ ಮಾತನಾಡಿ, 3 ವರ್ಷದ ಪಟ್ಟಣ ನೀರಿಲ್ಲದೇ ಸಂಕಷ್ಟಕ್ಕೆ ಸಿಲುಕಿತ್ತು. ಹಗಲು ರಾತ್ರಿ 23 ವಾರ್ಡ್‌ಗಳಿಗೆ ಪುರಸಭೆ ಸದಸ್ಯರ ಉಪಸ್ಥಿತಿಯಲ್ಲಿ ನೀರು ಸರಬರಾಜು ಮಾಡಲಾಗಿದೆ. ಆದರೆ ಪುರಸಭೆ ಅಧಿಕಾರಿಗಳು ಹಣ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿದರು.

ಮಾಜಿ ಪುರಸಭೆ ಅಧ್ಯಕ್ಷ ಸಿ.ಡಿ ಚಂದ್ರಶೇಖರ್‌ ಮಾತನಾಡಿ, ಪುರಸಭೆ ಅಧ್ಯಕ್ಷನಾಗಿದ್ದಾಗ ಬರಗಾಲದಿಂದ ನೀರಿನ ಹಾಹಾಕಾರ ಸೃಷ್ಟಿಯಾಗಿತ್ತು. ಅಂತಹ ಸಮಯದಲ್ಲಿ ಟ್ಯಾಂಕರ್‌ ಮಾಲೀಕರು ಸಾರ್ವಜನಿಕರಿಗೆ ಪ್ರಾಮಾಣಿಕವಾಗಿ ನೀರು ಸರಬರಾಜು ಮಾಡಿದ್ದಾರೆ. ನನ್ನ ಅವಧಿಯಲ್ಲಿ 31 ಲಕ್ಷ ರೂ. ಬಿಡುಗಡೆಯಾಗಿದೆ. ಉಳಿದ 27.28 ಲಕ್ಷ ರೂ. ನೀಡಲು ಮುಖ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಟ್ಯಾಂಕರ್‌ ಮಾಲೀಕರ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ ಎಂದರು.

ಸಿ.ಸಿ ರಸ್ತೆ, ಚರಂಡಿ ಕಾಮಗಾರಿಗೆ ಮಾಡಿರುವ ಬಿಲ್‌ ಅಲ್ಲ. ಮನುಷ್ಯನಿಗೆ ಅವಶ್ಯಕವಾಗಿ ಬೇಕಾಗಿರುವ ನೀರು ಸರಬರಾಜು ಮಾಡಿರುವ ಹಣವಾಗಿದೆ. ಮೂರು ವರ್ಷ ಕಳೆದರೂ ಪುರಸಭೆ ಹಣ ನೀಡದಿರು ವುದರಿಂದ ನೀರು ಸರಬರಾಜು ಮಾಡಿರುವುದು ನಷ್ಟ ಉಂಟುಮಾಡಿದೆ. ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿಗೆಮನವಿ ನೀಡಿದರೂ ಸ್ಪಂದನೆ ಸಿಕ್ಕಿಲ್ಲ. ಪುರಸಭೆ ಎಲ್ಲಾ ಸದಸ್ಯರೂ ಹಣ ನೀಡುವಂತೆ ತಿಳಿಸಿದರೂ ನೀಡುತ್ತಿಲ್ಲ. ಆದ್ದರಿಂದ ಟ್ಯಾಂಕರ್‌ ಬಾಕಿ ಬಿಲ್‌ ಬರುವವರೆಗೆ ಪುರಸಭೆ ಮುಂದೆ ಪ್ರತಿದಿನ ಸತ್ಯಾಗ್ರಹ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ಪುರಸಭೆ ಸದಸ್ಯ ಮಲ್ಲಿಕಾರ್ಜುನಯ್ಯ, ಚೇತನ್‌, ಪರಮೇಶ್‌, ವಿನಯ್‌, ಶಿವಕುಮಾರ್‌, ಕಿರಣ್‌ ನಿಶಾನಿ, ಸುರೇಶ್‌, ಮೋಹನ, ಹರ್ಷ ಇತರರಿದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.