ಕೊರಟಗೆರೆಯಲ್ಲಿ ಮುನಿಯಪ್ಪ ಬಿಟ್ಟು ಬೇರೆಯವರಿಗೆ ಟಿಕೆಟ್ ಬೇಡ: ಗೋವಿಂದ ರೆಡ್ಡಿ

ಪಕ್ಷಕ್ಕೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ

Team Udayavani, Sep 30, 2022, 5:21 PM IST

1-sdasdasd

ಕೊರಟಗೆರೆ: ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮೊದಲಿಂದಲೂ ಕೆಲಸ ಮಾಡಿರುವ ಕೆ.ಎಂ.ಮುನಿಯಪ್ಪರವರನ್ನು ಬಿಟ್ಟು ಬೇರೆಯವರಿಗೆ  ಬಿ ಫಾರಂ  ನೀಡಬಾರದೆಂದು ಮಧುಗಿರಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಮಂಡಳಿ ಸದಸ್ಯ ಕೆ.ಟಿ. ಗೋವಿಂದ ರೆಡ್ಡಿ ಒತ್ತಾಯಿಸಿದ್ದಾರೆ.

ಪಟ್ಟಣದ ಕಾಮಧೇನು ಹೋಟೆಲ್ ನಲ್ಲಿ ಶುಕ್ರವಾರ ಕರೆಯಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ಬಿಜೆಪಿ ಮುಖಂಡ ಕೆ.ಎಂ.ಮುನಿಯಪ್ಪರವರು ಕಳೆದ ನಾಲ್ಕು ವರ್ಷಗಳಿಂದ ಜನಸೇವೆ ಮಾಡಿಕೊಂಡು ಬಂದಿದ್ದಾರೆ. ತಾಲೂಕಿನ ಪ್ರತಿಹಳ್ಳಿಗೂ ಭೇಟಿ ಮಾಡಿ ಕ್ಷೇತ್ರದ ಜನತೆಗೆ ತಮ್ಮ ಕೈಲಾದ ಸಹಾಯವನ್ನು ಮಾಡುತ್ತಾ ಮನೆಮಾತಾಗಿದ್ದಾರೆ. ಅಲ್ಲದೆ ಪಕ್ಷದ ಪರವಾಗಿ ಗ್ರಾಮ ಪಂಚಾಯತ್ ಚುನಾವಣೆಗೆ ನಿಂತ ಪ್ರತಿಯೊಬ್ಬರ ಬೆಂಬಲಕ್ಕೆ ನಿಂತು ಅವರ ಗೆಲುವಿಗೆ ಕಾರಣರಾಗಿದ್ದಾರೆ.

ಕಳೆದ ಆರು ತಿಂಗಳ ಹಿಂದೆ ಸಿದ್ದಗಂಗಾ ಮಠಕ್ಕೆ ಅಮಿತ್ ಶಾ ರವರು ಬಂದಾಗ ತಾಲೂಕಿನಿಂದ ಅತಿ ಹೆಚ್ಚು ಜನ ಸಮಾವೇಶದಲ್ಲಿ ಭಾಗವಹಿಸಲು ಮುನಿಯಪ್ಪರ ಶ್ರಮ ಅಪಾರವಾಗಿದೆ.  ಜಿಲ್ಲಾ ಬಿಜೆಪಿ ಮುಖಂಡರು ಹಾಗೂ ಕೊರಟಗೆರೆ ತಾಲೂಕಿನ ಮುಖಂಡರು ಮೊದಲು ಮುನಿಯಪ್ಪರ ಜತೆ ಇದ್ದರು ಈಗ ಅವರಿಂದ ದೂರವಾಗುತ್ತಿರವ ಬೆಳವಣಿಗೆ ಪಕ್ಷಕ್ಕೆ ,ನೈಜ ಕಾರ್ಯಕರ್ತರಿಗೆ ಈ ಮುಖಂಡರ ನಡೆ ಮುಜುಗರ ಪಡುವಂತೆ ಮಾಡಿದೆ. ಈ ಬೆಳವಣಿಗೆಯನ್ನು ಕಾರ್ಯಕರ್ತರು ಸಹಿಸುವುದಿಲ್ಲ ಎಂದು ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ಪ್ರೀತಿ ವಿಶ್ವಾಸ ಗಳಸಿರುವ, ಜನರ ಜೊತೆ ನಿತ್ಯ ಸಂಪರ್ಕ ಹೊಂದಿರುವ ಮುನಿಯಪ್ಪ ರವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಬೇಕು. ಬಿಜೆಪಿ ಪರ ಕೆಲಸ ಮಾಡಿರುವ ಮುನಿಯಪ್ಪರನ್ನು ಬಿಟ್ಟು ಬೇರೆ ಯಾರ ಹೆಸರನ್ನು ಚುನಾವಣಾ ಸಮಿತಿಗೆ ಶಿಫಾರಸು ಮಾಡಬಾರದು ಎಂದು ಆಗ್ರಹಿಸಿದರು.

ಈಗಾಗಲೇ ಹಲವು ಮಂದಿ ನಾನೇ ಬಿಜೆಪಿ ಪಕ್ಷದ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗಾಡುತಿದ್ದಾರೆ ಅವರಿಂದ ಪಕ್ಷಕ್ಕೆ ಹಾಗೂ ಜನಸಾಮಾನ್ಯರಿಗೆ ಆಗಿರುವ ಸಹಾಯ, ಸಹಕಾರವೇನು ಎಂದು ಪ್ರಶ್ನಿಸಿರುವ ಗೋವಿಂದರೆಡ್ಡಿ ಚುನಾವಣೆಯ ಸಂದರ್ಭದಲ್ಲಿ ನನ್ನ ಹತ್ತಿರ ಹಣವಿದೆ ಎಂದು ಬರುವ ಜನರಿಗೆ ಮಣೆ ಹಾಕಬಾರದು ಎಂದು ಆಗ್ರಹಿಸಿದರು.

ಒಂದು ವೇಳೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು,ಜನರ ಆಶಯಕ್ಕೆ ವಿರುದ್ಧವಾಗಿ ಪಕ್ಷಕ್ಕಾಗಿ ಕೆಲಸ ಮಾಡಿರುವ ಮುನಿಯಪ್ಪರವರನ್ನು ಕಡೆಗಣಿಸಿದರೆ ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷಕ್ಕೆ ಹಿನ್ನಡೆಯ ಜತೆಗೆ ಪಕ್ಷಕ್ಕೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಪಕ್ಷದ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.

ವಿರೋಧ ಪಕ್ಷದವರು ಈಗಾಗಲೇ ಹೇಳುವಂತೆ ತಾಲ್ಲೂಕಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡವರನ್ನು ಪಕ್ಷದ ಅಭ್ಯರ್ಥಿ ಎಂದು ನಾಯಕರು ಪ್ರಚಾರ ಮಾಡಬಾರದು ಎಂದು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಳಾಸಂದ್ರ ಮಂಜಣ್ಣ,ಕೋಳಾಲ ನರೇಂದ್ರ,ಕಾರ್ತಿಕ್, ಆನಂದ, ನಾಗರಾಜ್, ರವಿಕುಮಾರ್ ಭಾಗವಹಿಸಿ ಮಾತನಾಡಿದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.