ದೇಶದಲ್ಲಿರುವ ಮುಸ್ಲಿಮರಿಗೂ ಬದುಕುವ ಸಮಾನ ಹಕ್ಕಿದೆ: ಡಾ.ಜಿ.ಪರಮೇಶ್ವರ್

ಮಹಾತ್ಮ ಗಾಂಧಿ ಇದನ್ನು ಪ್ರತಿಪಾದಿಸಿಕೊಂಡು ಬಂದಿದ್ದರು...

Team Udayavani, Oct 2, 2022, 6:44 PM IST

1-dasdasd

ಕೊರಟಗೆರೆ: ದೇಶದ ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆ ಸಿಗಬೇಕು ಹಾಗೂ ಭಾರತದ ಪ್ರಜೆಗಳೆಲ್ಲರೂ ಭಾವೈಕ್ಯತೆಯಿಂದ ಬಾಳಬೇಕು.ಇದು ಮಹಾತ್ಮಗಾಂಧಿಯವರ ಕನಸಾಗಿದ್ದು, ಇದನ್ನು ಸಫಲಗೊಳಿಸಲು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯನ್ನು ಮಾಡುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮುಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ತಿಳಿಸಿದರು.

ಇದನ್ನೂ ಓದಿ : ಕೊರಟಗೆರೆ : ಮಾಜಿ ಸೈನಿಕ ಗಿರಿಯಪ್ಪ ಅನಾರೋಗ್ಯದಿಂದ ನಿಧನ

ಪಟ್ಟಣದ ಮಕ್‌ಬುಲ್ ವೃತ್ತ ಮತ್ತು ಮಟನ್ ಮಾರ್ಕೆಟ್ ವೃತ್ತದಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನೂತನ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ನಗರ ಘಟಕ ಕಚೇರಿಯನ್ನು ಉದ್ಘಾಟನೆ ಮಾಡಿ ಹಾಗೂ ಇಬ್ಬರು ಮಹಾನ್ ನಾಯಕರ ಜಯಂತಿಯನ್ನು ಆಚರಿಸಿ ಮಾತನಾಡಿ ಮಹಾತ್ಮ ಗಾಂಧಿಜೀಯವರು ಭಾರತವು ಬ್ರಿಟಿಷ್ ರ ಆಡಳಿತ ಇದ್ದ ಕಾಲದಲ್ಲಿ ಮೊದಲು ದಕ್ಷಿಣ ಆಫ್ರಿಕಾದಲ್ಲಿ ಕರಿಯರ ಮೇಲೆ ಬಿಳಿಯರ ದಬ್ಬಾಳಿಕೆ ವಿರುದ್ದ ಹೋರಾಟ ನಡೆಸಿದರು, ನಂತರ ಭಾರತದ ಸ್ವಾತಂತ್ರ್ಯಕ್ಕಾಗಿ ಹಲವು ವರ್ಷಗಳ ಕಾಲ ಶಾಂತಿಯುತ ಹೋರಾಟ ನಡೆಸಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು. ತದನಂತರ ಜಿನ್ನಾ ರವರ ಹಠದಿಂದ ಪಾಕಿಸ್ಥಾನ ರೂಪಗೊಂಡರೂ ನಮ್ಮ ದೇಶದಲ್ಲಿರುವ ಮುಸ್ಲಿಮರೂ ಭಾರತೀಯರೆ, ಅವರಿಗೂ ಇಲ್ಲಿ ಬದುಕುವ ಸಮಾನ ಹಕ್ಕಿದೆ ಎಂದು ಪ್ರತಿಪಾದಿಸಿಕೊಂಡು ಬಂದಿದ್ದರು, ವಿಶ್ವದಲ್ಲಿ ಅತಿಹೆಚ್ಚು ಮುಸ್ಲಿಮರು ವಾಸಿಸುತ್ತಿರುವುದು ಭಾರತದಲ್ಲಿ ಅವರು ಇಲ್ಲಿಯೇ, ಹುಟ್ಟುತ್ತಾರೆ, ಬಾಳುತ್ತಾರೆ, ಮಣ್ಣಾಗುತ್ತಾರೆ, ಇವರು ಸಹ ಭಾರತೀಯರೆ ಎಂದರು.

ವಿಶ್ವದಲ್ಲೇ ವೈವಿಧ್ಯಮಯವಾಗಿರುವ ಭಾರತದಲ್ಲಿ ಎಲ್ಲಾ ಧರ್ಮದವರು ಭಾವೈಕ್ಯತೆಯಿಂದ ಬಾಳುತ್ತಿದ್ದಾರೆ, ಹಲವು ವರ್ಷಗಳವರೆಗೂ ಮುಂದುವರೆದ ಜಾತ್ಯತೀತಕ್ಕೆ, ಈಗ ಕುತ್ತುಬಂದಿದ್ದು ಇದನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ದೇಶದಲ್ಲಿ ಅಶಾಂತಿ ಮತ್ತಷ್ಟು ಮೂಡುತ್ತದೆ, ಇದನ್ನು ಮನಗೊಂಡ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್‌ಗಾಂಧಿ ರವರು ಎಲ್ಲಾ ಭಾರತೀಯರನ್ನು ಭಾವೈಕ್ಯತೆಯಾಗಿ ಒಗ್ಗೂಡಿಸಲು ಕನ್ಯಾಕುಮಾರಿಯಿಂದ ಕಾಶ್ಮಿರದರೆಗೂ 5570 ಕಿ.ಮೀ. ಪಾದಯಾತ್ರೆಯನ್ನು ಮಾಡುತ್ತಿದ್ದಾರೆ, ಇದನ್ನು ವಿರೋಧ ಪಕ್ಷದವರು ಯಾವ ರೀತಿಯಲ್ಲಾದರೂ ಟೀಕಿಸಲಿ ಆದರೆ ದೇಶಕ್ಕೆ ಬೇಕಾಗಿರುವುದು ಜನರು ಶಾಂತಿ ನೆಮ್ಮದಿ ಬದುಕುವುದು ಎಂದರು.

ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ 5 ವರ್ಷಗಳಿಂದ ಸಾಕಷ್ಟು ಅಭಿವೃಧ್ದಿ ಕೆಲಸಗಳನ್ನು ಮಾಡಿದ್ದೇನೆ, ನಿಮ್ಮೆಲ್ಲರ ಆಶೀರ್ವಾದಿಂದ ಕೆಲವು ತಿಂಗಳುಗಳ ಕಾಲ ರಾಜ್ಯ ದಲ್ಲಿ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು, ಕ್ಷೇತ್ರಕ್ಕೆ ಮತ್ತು ಜಿಲ್ಲೆಗೆ ನೂರಾರು ಕೋಟಿ ರೂಗಳ ಅನುದಾನ ನೀಡಿದ್ದೆನೆ, ಕೋವಿಡ್ ಸಮಯದಲ್ಲಿ ಜನರ ಮತ್ತು ನೊಂದವರ ಕಷ್ಟಕ್ಕೆ ಸ್ಪಂದಿಸಲಾಗಿದೆ, ಅಲ್ಪಸಂಖ್ಯಾತರು ಸೇರಿದಂತೆ ಕ್ಷೇತ್ರದ ಎಲ್ಲಾ ಧರ್ಮದ ಮತ್ತು ಜಾತಿಯ ಜನರೊಂದಿಗೆ ಭಾವೈಕ್ಯತೆಯಿಂದ ಕೆಲಸ ನಿರ್ವಹಿಸಿದ್ದೆನೆ, ಮುಂಬರುವ 2023 ರ ಚುನಾಣೆಯಲ್ಲೂ ಸಹ ಕ್ಷೇತ್ರದ ಜನರು ಮತ್ತೊಮ್ಮೆ ನನಗೆ ಆಶ್ರೀರ್ವಾದ ಮಾಡುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಇಮ್ರಾನ್ ಹುಸೇನ್, ಇಕ್ಬಾಲ್‌ಅಹಮದ್, ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಜುಬೇರ್, ತಾಲೂಕು ಅಲ್ಪಸಂಖ್ಯಾತ ಘಟಕೆ ಅಧ್ಯಕ್ಷ ಮುಬಾರಕ್‌ಪಾಷ, ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷ ಮುನ್ನಾಬಾಯ್, ಪ.ಪಂ.ಸದಸ್ಯರುಗಳಾದ ಎ.ಡಿ.ಬಲರಾಮಯ್ಯ, ನಂದೀಶ್, ನಾಗರಾಜು, ಮಾಜಿ ಪ.ಪಂ.ಸದಸ್ಯ ಸ್ಯೆಯದ್ ಸೈಪುಲ್ಲಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್, ಅರಕೆರೆ ಶಂಕರ್, ಮಹಿಳಾ ಅಧ್ಯಕ್ಷೆ ಜಯಮ್ಮ, ಮುಂಖಡರುಗಳಾದ ಹುಸೇನ್ ಸಾಬ್, ಮಕ್ತಿಯಾರ್, ಜಮೀರ್ ಅಹಮದ್, ಫರೂಖ್, ಅಮಾನುಲ್ಲಾ, ಮುನ್ನಾಫ್, ರ‍್ಧಾರ್ ಹುಸೇನ್, ಸಾದಿಕ್‌ಪಾಷ ಸೇರಿದಂತೆ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.