ನಿರ್ಲಕ್ಷಕ್ಕೆ ಬಲಿಯಾದ ಕಾವರ್ಗಲ್ ಕೆರೆ : ಎಚ್ಚೆತ್ತುಕೊಳ್ಳದ ಅಧಿಕಾರಿ ವರ್ಗ

ಸಂಕಷ್ಟಕ್ಕೆ ಸಿಲುಕಿದ ರೈತಾಪಿವರ್ಗ: ಅಧಿಕಾರಿಗಳ ವಿರುದ್ದ ಆಕ್ರೋಶ

Team Udayavani, Nov 19, 2022, 10:10 PM IST

1-asdsad

Negligence, Koratagere, lakes

ಕೊರಟಗೆರೆ: ಜಿಪಂ ಮತ್ತು ಗ್ರಾಪಂ ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಕೊಚ್ಚಿಹೋದ ಕಾವರ್ಗಲ್ ಕಂಬದಹಳ್ಳಿ ಕೆರೆ.. ಕೆರೆಯ ಏರಿ ಒಡೆದು 25ಕ್ಕೂ ಅಧಿಕ ರೈತರ 40ಎಕರೆಗೂ ಅಧಿಕ ಬೆಳೆನಷ್ಟ.. ಅಂತರ್ಜಲ ಅಭಿವೃದ್ದಿ ಮತ್ತು ನೀರಾವರಿಗೆ ಸಹಕಾರಿ ಆಗಿದ್ದ ಕೆರೆಯ ನೀರು ಸಂಪೂರ್ಣ ಖಾಲಿ.. ಪ್ರಾಣಿಪಕ್ಷಿ ಮತ್ತು ಜಾನುವಾರುಗಳಿಗೆ ಆಸರೆಯಾಗಿದ್ದ ಕೆರೆಯಲ್ಲಿ ಈಗ ನೀರಿಲ್ಲದೇ ಬರಡು ಭೂಮಿಯಾಗಿ ರೈತರಿಗೆ ಮತ್ತೆ ಬರಗಾಲದ ಸಂಕಷ್ಟ ಎದುರಾಗಿದೆ.

ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರ ಗ್ರಾಪಂ ವ್ಯಾಪ್ತಿಯ ಕಾವರ್ಗಲ್ ಕಂಬದಹಳ್ಳಿ ಕೆರೆಯ ಏರಿಯಲ್ಲಿ ಮಂಗೆಬಿದ್ದು ಕೆರೆಯು ಹೊಡೆದು ಹೋಗಿದೆ. ಕೆರೆಯ ಏರಿಯ ಮೇಲೆ ಜಾಲಿ, ಬೇಲಿ ಮತ್ತು ಜಂಗಲ್ ಗಿಡಗಳ ಹಾವಳಿಯಿಂದ ಕೆರೆಯ ಏರಿಯೇ ಮುಚ್ಚಿಹೋಗಿದೆ. ಕೆರೆಯ ಎರಡು ಕಡೆಯ ತೋಬು ಶಿಥಿಲವಾಗಿ ಕೋಡಿಯು ಸಹ ಅವೈಜ್ಞಾನಿಕ ಆಗಿರುವ ಪರಿಣಾಮವೇ ಕೆರೆಗೆ ಹಾನಿ ಉಂಟಾಗಿದೆ.

ಕಾವರ್ಗಲ್ ಕಂಬದಹಳ್ಳಿ ಕೆರೆಯ ಏರಿಯಲ್ಲಿ ಕಳೆದ ೨೦ದಿನದ ಹಿಂದೆಯು ಬಿರುಕು ಕಾಣಿಸಿಕೊಂಡಿದೆ. ಸ್ಥಳೀಯ ರೈತರು ಜಿಪಂ ಮತ್ತು ಗ್ರಾಪಂಗೆ ಕೆರೆಯ ಹಾನಿಯ ಬಗ್ಗೆ ಮಾಹಿತಿ ನೀಡಿದ್ರು ಸಹ ಅಧಿಕಾರಿವರ್ಗ ಕಚೇರಿಯನ್ನು ಬಿಟ್ಟು ಸ್ಥಳಕ್ಕೆ ಹೋಗುವಲ್ಲಿ ವಿಳಂಬ ಮತ್ತು ನಿರ್ಲಕ್ಷ ಮಾಡಿರುವ ಪರಿಣಾಮವೇ ಕೆರೆಯ ಕೋಡಿಹೊಡೆದು ರೈತರು ಬೆಳೆದಿರುವ ಅಡಿಕೆ, ತೆಂಗು, ಬಾಳೆ, ಗದ್ದೆ, ಹೂವು ನಾಶವಾಗಿ ಕೊಳವೆ ಬಾವಿಗಳಿಗೆ ಹಾನಿಯಾಗಿವೆ.

ಎಚ್ಚೆತ್ತುಕೊಳ್ಳದ ಗ್ರಾಪಂ..
24 ಗ್ರಾಪಂಗಳ 82 ಕೆರೆಗಳ ನರೇಗಾ ಅನುಧಾನ ಬಳಕೆಗೆ 24 ಗ್ರಾಪಂ ಗಳ 20ಕೆರೆಗಳಿಗೆ ತುರ್ತು ನಿರ್ವಹಣೆ ಅಗತ್ಯದ ಮಾಹಿತಿ ಲಭ್ಯವಿದ್ದರೂ ಸಹ ಜಿಪಂ ಮತ್ತು ಗ್ರಾಪಂಯ ಅಧಿಕಾರಿವರ್ಗ ಪರಿಶೀಲನೆ ನಡೆಸದೇ ನಿರ್ಲಕ್ಷ ವಹಿಸಿದ ಪರಿಣಾಮವೇ ಈಗ ಕಂಬದಹಳ್ಳಿ ಕೆರೆಯು ಬಲಿಯಾಗಿದೆ.

24 ಗ್ರಾಪಂಗಳ 82 ಕೆರೆಗಳಿಗೂ ಆಪತ್ತು..
24 ಗ್ರಾಪಂಗಳ 82 ಕೆರೆಗಳಿಗೆ ಈಗಾಗಲೇ ಸಂಕಷ್ಟ ಎದುರಾಗಿದೆ. ಕೆರೆಗಳ ತೋಬು, ಕೋಡಿ ಮತ್ತು ಏರಿಗಳು ಸಂಪೂರ್ಣವಾಗಿ ಶಿಥಿಲವಾಗಿವೆ. ಕೆರೆಗಳ ಮೇಲೆ ಜಾಲಿಗಿಡ ಮತ್ತು ಜಂಗಲ್ ಬೆಳೆದು ಏರಿಗಳು ಬಿರುಕುಬಿಟ್ಟಿವೆ. 20 ವರ್ಷಗಳಿಂದ ಮಳೆಯಿಲ್ಲದೇ ಅಭಿವೃದ್ದಿ ಮತ್ತು ನಿರ್ವಹಣೆ ಇಲ್ಲದ ಪರಿಣಾಮ ಅರ್ಧದಷ್ಟು ಕೆರೆಗಳು ಒತ್ತುವರಿಗೆ ಬಲಿಯಾಗಿ ಗ್ರಾಪಂಗಳ ಅಧಿಕಾರಿಗಳಿಗೆ ಪ್ರಾಣಸಂಕಟ ಎದುರಾಗಿದೆ.

ಕಾಡಿನ ಪ್ರಾಣಿಪಕ್ಷಿ ಮತ್ತು ಜಾನುವಾರುಗಳ ಆಸರೆಯಾಗಿದ್ದ ಕೆರೆಯಲ್ಲಿನ ನೀರು ಖಾಲಿಯಾಗಿದೆ. ಕೃಷಿಭೂಮಿ ಮತ್ತು ಅಡಿಕೆತೋಟ ನಾಶವಾಗಿ ರೈತರಿಗೆ ಲಕ್ಷಾಂತರ ರೂ ನಷ್ಟವಾಗಿದೆ. ೧೫ದಿನದ ಹಿಂದೆಯೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರು ಪರಿಶೀಲನೆ ನಡೆಸಿಲ್ಲ. ಕೊರಟಗೆರೆಯ ಸಾಕಷ್ಟು ಕೆರೆಗಳು ಅಪಾಯದ ಹಂಚಿನಲ್ಲಿವೆ. ಜಿಪಂ ಮತ್ತು ಗ್ರಾಪಂಯ ಅಧಿಕಾರಿವರ್ಗ ಕಚೇರಿಬಿಟ್ಟು ಗ್ರಾಮೀಣ ಕೆರೆಗಳ ಪರಿಸ್ಥಿತಿ ಆಲಿಸಬೇಕಿದೆ.
– ದಾಳಿನರಸಿಂಹ. ಸ್ಥಳೀಯ ರೈತ. ಕಂಬದಹಳ್ಳಿ

೫೦ಎಕರೆ ಜಮೀನು ಜಲಾವೃತವಾಗಿ ೨೫ಎಕರೇಗೂ ಅಧಿಕ ಬೆಳೆನಷ್ಟ ಆಗಿದೆ. ಕೆರೆಗಳ ನಿರ್ಮಾಣಕ್ಕೆ ನೀಡಿದಷ್ಟು ಆಧ್ಯತೆ ನಿರ್ವಹಣೆಗೆ ನೀಡಬೇಕಿದೆ. ಕೊರಟಗೆರೆ ಕ್ಷೇತ್ರಗಳ ಕೆರೆಗಳ ನಿರ್ವಹಣೆ ಮತ್ತು ಅಭಿವೃದ್ದಿಗೆ ಅನುದಾನ ನೀಡುವಂತೆ ಸರಕಾರಕ್ಕೆ ಪತ್ರ ಬರೆಯುತ್ತೇನೆ. ರೈತರಿಗೆ ಬೆಳೆನಷ್ಟದ ಪರಿಹಾರ ನೀಡುವಂತೆ ತುಮಕೂರು ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇನೆ.
-ಅನಿಲ್‌ಕುಮಾರ್. ನಿವೃತ್ತ ಐಎಎಸ್ ಅಧಿಕಾರಿ. ಕೊರಟಗೆರೆ

ಕೊರಟಗೆರೆಯ 24 ಗ್ರಾಪಂಗಳ 82 ಕೆರೆಗಳ ಸಮಸ್ಯೆಯ ಬಗ್ಗೆ ಗ್ರಾಪಂ ಪಿಡಿಓಗಳಿಂದ ಮಾಹಿತಿ ಪಡೆಯುತ್ತೇನೆ. ತುರ್ತು ಕೆಲಸ ಅಗತ್ಯವಿದ್ದರೇ ತಕ್ಷಣ ಕ್ರಮಕ್ಕೆ ಸೂಚಿಸುತ್ತೇನೆ. ಕಂಬದಹಳ್ಳಿ ಕೆರೆಯ ಪುನಶ್ಚೇತನ ಮತ್ತು ಅಭಿವೃದ್ದಿಗೆ ಈಗಾಗಲೇ ಸರಕಾರದ ಗಮನಕ್ಕೆ ತರಲಾಗಿದೆ. ಗ್ರಾಪಂ ವ್ಯಾಪ್ತಿಯ ಕೆರೆಗಳ ನಿರ್ವಹಣೆಗೆ ಸರಕಾರದ ಅನುಧಾನ ಅಗತ್ಯವಾಗಿ ಅವಶ್ಯಕತೆ ಇದೆ.
ಡಾ.ವಿದ್ಯಾಕುಮಾರಿ. ಜಿಪಂ ಸಿಇಓ. ತುಮಕೂರು

ಸಿದ್ದರಾಜು. ಕೆ ಕೊರಟಗೆರೆ

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.